ಕೋವಿಡ್ ಸೋಂಕಿನಿಂದ ನಲುಗುತ್ತಿರುವ ಚೀನಾ: ಮೌನ ಮುರಿದ ಅಧ್ಯಕ್ಷ ಷಿ ಜಿನ್ಪಿಂಗ್

ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ತಮ್ಮ ದೇಶ ಕೋವಿಡ್ ವಿರುದ್ಧ ಹೋರಾಟದ ಬಗ್ಗೆ ಮೌನ ಮುರಿದಿದ್ದು, ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Chinese President Xi Jinping. (File Photo | AP)

ಬೀಜಿಂಗ್: ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ತಮ್ಮ ದೇಶ ಕೋವಿಡ್ ವಿರುದ್ಧ ಹೋರಾಟದ ಬಗ್ಗೆ ಮೌನ ಮುರಿದಿದ್ದು, ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಚೀನಾದಲ್ಲಿ ಮತ್ತೊಮ್ಮೆ ಕೋವಿಡ್ ಸೋಂಕು ತೀವ್ರಗೊಂಡಿದ್ದು ಆಸ್ಪತ್ರೆಗಳು ಭರ್ತಿಯಾಗಿ ಹೆಣಗಳ ರಾಶಿ ಬೀಳುತ್ತಿದೆ. ಮುಂದಿನ ಕೆಲವು ತಿಂಗಳುಗಳಲ್ಲಿ ಒಂದು ಮಿಲಿಯನ್ ಮಂದಿ ಚೀನಾದಲ್ಲಿ ಕೋವಿಡ್ ನಿಂದ ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಚೀನಾದಲ್ಲಿ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸುವುದು ಕಷ್ಟವಾಗುತ್ತಿದ್ದು ಔಷಧಕ್ಕೆ ಕೊರತೆ ಎದುರಾಗಿದೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ವಿಪರೀತ ಹೆಚ್ಚುತ್ತಿರುವುದರ ಪರಿಣಾಮ ಅಲ್ಲಿನ ಆರೋಗ್ಯ ವ್ಯವಸ್ಥೆ ಕುಸಿಯುತ್ತಿದೆ.

ಚೀನಾದ ಸರ್ಕಾರಿ ಪ್ರಸಾರ ಸಂಸ್ಥೆ ಸಿಸಿಟಿವಿ ಷಿ ಜಿನ್ಪಿಂಗ್ ಅವರ ಹೇಳಿಕೆಯನ್ನು ಪ್ರಕಟಿಸಿದ್ದು, “ಪ್ರಸ್ತುತ ಕೋವಿಡ್-19 ತಡೆ ಹಾಗೂ ನಿಯಂತ್ರಣ ಚೀನಾದಲ್ಲಿ ಹೊಸ ಪರಿಸ್ಥಿತಿ ಹಾಗೂ ಹೊಸ ಟಾಸ್ಕ್ ಗಳನ್ನು ಎದುರುಗೊಳ್ಳುವಂತೆ ಮಾಡಿದೆ. ಹೆಚ್ಚು ಮಂದಿಯನ್ನು ತಲುಪುವ ನಿಟ್ಟಿನಲ್ಲಿ ನಾವು ದೇಶಭಕ್ತಿಯ ಆರೋಗ್ಯ ಅಭಿಯಾನವನ್ನು ಕೈಗೆತ್ತಿಕೊಳ್ಳಬೇಕಿದೆ. ಸಾಂಕ್ರಾಮಿಕ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಸಮುದಾಯದ ರಕ್ಷಣಾ ಮಾರ್ಗವನ್ನು ಬಲಪಡಿಸುವುದು ಮತ್ತು ಜನರ ಜೀವನ, ಸುರಕ್ಷತೆ ಮತ್ತು ಆರೋಗ್ಯವನ್ನು ಪರಿಣಾಮಕಾರಿಯಾಗಿ ರಕ್ಷಿಸಬೇಕಿದೆ ಎಂದು ಷಿ ಜಿನ್ಪಿಂಗ್ ಹೇಳಿದ್ದಾರೆ. 

ಚೀನಾದಲ್ಲಿ ಆಸ್ಪತ್ರೆಗಳು ಹಾಗೂ ಅಂತ್ಯಕ್ರಿಯೆ ನಡೆಸುವ ಸ್ಥಳಗಳು ಭರ್ತಿಯಾಗುತ್ತಿದ್ದು, ಎದುರಾಗುತ್ತಿರುವ ಕೇಸ್ ಲೋಡ್ ಪ್ರಮಾಣವನ್ನು ನಿಭಾಯಿಸಲು ಸಾಧ್ಯವಾಗದೇ ದಿನನಿತ್ಯ ಕೋವಿಡ್ ಅಂಕಿಅಂಶಗಳನ್ನು ಪ್ರಕಟಿಸುವುದನ್ನು ನಿಲ್ಲಿಸುವುದಾಗಿ ಚೀನಾ ಈಗಾಗಲೇ ಹೇಳಿದೆ.
 
ಚೀನಾ ತನ್ನಲ್ಲಿ ವರದಿಯಾಗುತ್ತಿರುವ ಸೋಂಕನ್ನು ಪತ್ತೆ ಮಾಡುವುದೇ ಅಸಾಧ್ಯವಾಗುತ್ತಿದೆ ಅಂತಹ ಒತ್ತಡದ ಪರಿಸ್ಥಿತಿಯಲ್ಲಿ ದೇಶ ಇರುವುದನ್ನು ಒಪ್ಪಿಕೊಂಡಿದೆ. ಚೀನಾದಲ್ಲಿ ಚಳಿಗಾಲವೂ ಕೋವಿಡ್ ಏರಿಕೆಗೆ ಒಂದು ಕಾರಣವಾಗಿದ್ದು, ಹೊಸ ವರ್ಷಾಚರಣೆಗೆ ಮುಂದಿನ ತಿಂಗಳು ಲಕ್ಷಾಂತರ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳುವುದು ಕೋವಿಡ್ ಸೋಂಕು ಮತ್ತಷ್ಟು ಉಲ್ಭಣಿಸುವ ಭೀತಿಯನ್ನು ಹೆಚ್ಚಿಸಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *