ಬಿಜೆಪಿ ಭಿನ್ನ,ಬೂತ್‌ ವಿಜಯ ಅಭಿಯಾನ

ಸಿದ್ದಾಪುರ: ಬಿಜೆಪಿ ಪಕ್ಷ ಉಳಿದೆಲ್ಲ ಪಕ್ಷಗಳಿಗಿಂತ ಭಿನ್ನವಾಗಿದ್ದು, ನಾವು ಬೂತ್, ಶಕ್ತಿಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಆಧಾರದಲ್ಲಿ ಪ್ರತೀ ಚುನಾವಣೆಯ ಸಂದರ್ಭದಲ್ಲಿ ಪಕ್ಷವನ್ನು ಬಲಪಡಿಸುತ್ತಾ ಬಂದಿದ್ದು, ಮುಂಬರುವ ವಿಧಾನಸಭೆ ಚುನಾವಣೆ ಸಹ ಇದೆ ಆಧಾರದಲ್ಲಿ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಸಹ ಪ್ರಭಾರಿ ಪ್ರಸನ್ನ ಕೆರೆಕೈ ಹೇಳಿದರು.

ಅವರು ಬಿಜೆಪಿ ಮಂಡಲದ ವತಿಯಿಂದ ಆಯೋಜಿಸಿದ್ದ ಬೂತ್ ವಿಜಯ ಅಭಿಯಾನಕ್ಕೆ ಪಟ್ಟಣದ ರವೀಂದ್ರ ನಗರದ ಬೂತ್ ಸಂಖ್ಯೆ 213 ರಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದರು. ವಿಧಾನ ಸಭೆ ಚುನಾವಣೆ ಏಪ್ರಿಲ್ ಕೊನೆಯ ವಾರದಲ್ಲಿ ನಡೆಯಲಿದೆ ಎಂದು ಅಂದಾಜಿಸಲಾಗಿದೆ. ನಮಗೆ ಚುನಾವಣೆ ಎದುರಿಸಲು ನಮ್ಮ ವಯಕ್ತಿಕ ಕೆಲಸಗಳ ಹೊರತಾಗಿ ಉಳಿದಿರುವುದು ಕೇವಲ 750 ಗಂಟೆಗಳಷ್ಟೆ ಬಾಕಿಯಿದ್ದು ಈ ಅತ್ಯಲ್ಪ ಸಮಯದಲ್ಲಿ ನಾವು ಏನೆಲ್ಲ ಕೆಲಸಗಳನ್ನು ಮಾಡಿ ಅಲ್ಲಿ ಬದಲಾವಣೆ ತರಲು ಸಾಧ್ಯವಿದೆ. ಒಟ್ಟಾರೆ ಯಶಸ್ವಿ ಸಂಪರ್ಕ ಜಾಲವನ್ನು ಹೇಗೆ ವಿಸ್ತಾರ ಮಾಡಲು ಸಾಧ್ಯವಿದೆ ಎನ್ನುವ ಸಂಗತಿ ಯ ನ್ನು ಗಮನದಲ್ಲಿ ಇಟ್ಟುಕೊಂಡು ಈ ಬೂತ್ ವಿಜಯ ಅಭಿಯಾನವನ್ನು ರಾಜ್ಯಾದ್ಯಂತ ಜ. 2 ರಿಂದ 10 ರವರೆಗೆ ಆಯೋಜಿಸಲಾಗಿದೆ.

ಈ ಅಭಿಯಾನದಲ್ಲಿ ಪ್ರಮುಖವಾಗಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಬೂತ್ ಸಮಿತಿ ಹಾಗೂ ಪೇಜ್ ಪ್ರಮುಖರನ್ನು ನೇಮಿಸಿ ಅವರಿಗೆ ಮತದಾರರ ವಿಶ್ವಾಸವನ್ನು ಗಳಿಸುವ ಕೆಲಸವನ್ನು ನೀಡಬೇಕು. ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಕಾರ್ಯಕ್ರಮ ನಡೆಸಬೇಕು, ಬೂತ್ ಮಟ್ಟದಲ್ಲಿ ವಾಟ್ಸಾಪ್ ಗ್ರೂಪ್ ರಚಿಸಿ ಸಾರ್ವಜನಿಕರಿಗೆ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು. ಬೂತ್ ಮಟ್ಟದಲ್ಲಿ ಪ್ರತೀ ಮನೆಗಳ ಮೇಲೆ ಬಿಜೆಪಿ ಧ್ವಜ ಹಾರಿಸುವ ಮೂಲಕ ಈ ಅಭಿಯಾನವು ಯಶಸ್ವಿಯಾಗಿ ಮಾಡಬೇಕೆಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ, ಜಿಲ್ಲಾ ವಿಶೇಷ ಆಹ್ವಾನಿತ ಗುರುರಾಜ ಶಾನಭಾಗ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಕೆ.ಮೇಸ್ತ, ಪ್ರಸನ್ನ ಹೆಗಡೆ, ಜಿಲ್ಲಾ ಕಾರ್ಯದರ್ಶಿ ಕೃಷ್ಣಮೂರ್ತಿ ಕಡಕೇರಿ, ಪಟ್ಟಣ ಪಂಚಾಯತ ಉಪಾಧ್ಯಕ್ಷ ರವಿಕುಮಾರ್ ನಾಯ್ಕ, ಪಟ್ಟಣ ಪಂಚಾಯತ ಸದಸ್ಯ ನಂದನ್ ಬೋರ್ಕರ್, ನಾಮ ನಿರ್ದೇಶಿತ ಸದಸ್ಯರಾದ ಸುರೇಶ್ ನಾಯ್ಕ ಬಾಲಿಕೊಪ್ಪ, ಮಂಜುನಾಥ್ ಭಟ್, ಶಕ್ತಿಕೇಂದ್ರ ಪ್ರಮುಖ ಸುರೇಶ್ ನಾಯ್ಕ ಪ್ರಮುಖರಾದ ಆದರ್ಶ ಪೈ ಬಿಳಗಿ, ವಿಜಯ ಹೆಗಡೆ ಉಳಿದಂತೆ ಬೂತ್ ಕಮಿಟಿ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಜರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *