ಒಗ್ಗಟ್ಟಿನ ಮಂತ್ರ ಪಠಿಸಿದ ಕಾಂಗ್ರೆಸ್ ನಾಯಕರು… ಹಳಿಯಾಳ ಕ್ಷೇತ್ರ ಬಿಟ್ಟರೆ ಉಳಿದೆಲ್ಲಡೆ ಹೆಚ್ಚಿದ ಟಿಕೇಟ್‌ ಆಕಾಂಕ್ಷಿಗಳು!

ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್‌ ಟಿಕೇಟ್‌ ಆಕಾಂಕ್ಷಿಗಳ ಸಂದರ್ಶನ ಬುಧವಾರ ಶಿರಸಿಯಲ್ಲಿ ನಡೆಯಿತು.ಕಾಂಗ್ರೆಸ್‌ ನಾಯಕರಾದ ಮಯೂರ್‌ ಜಯಕುಮಾರ್‌, ವಿನಯಕುಮಾರ್‌ ಸೊರಕೆ, ಆರ್.ವಿ.ದೇಶಪಾಂಡೆ ಮತ್ತು ಐವಾನ್‌ ಡಿಸೋಜಾ ಎದುರು ತಮ್ಮ ಉಮೇದುವಾರಿಕೆಯ ಹಕ್ಕು ಚಲಾಯಿಸಿದ ಮುಖಂಡರು ತಮ್ಮ ಗೆಲುವಿನ ಸಾಧ್ಯತೆಗಳ ಬಗ್ಗೆ ತಿಳಿಸಿದರೆಂದು ಗೊತ್ತಾಗಿದೆ. ಶಿರಸಿ ಕ್ಷೇತ್ರದಿಂದ ಭೀಮಣ್ಣ ನಾಯ್ಕ, ವಸಂತ ನಾಯ್ಕ ಮನಮನೆ, ವಿ.ಎನ್.‌ ನಾಯ್ಕ ಬೇಡ್ಕಣಿ, ವೆಂಕಟೇಶ್‌ ಹೆಗಡೆ ಹೊಸಬಾಳೆ,ಶ್ರೀಪಾದ ಹೆಗಡೆ.

ಹಳಿಯಾಳದಿಂದ ಆರ್.ವಿ.ದೇಶಪಾಂಡೆ, ಕಾರವಾರದಿಂದ ಸತೀಶ್‌ ಶೈಲ್‌,ಚೈತ್ರಾ ಕೊಟಾರ್‌ ಕರ್‌, ಕುಮಟಾದಿಂದ ಮಂಜುನಾಥ ನಾಯ್ಕ, ಶಾರದಾಶೆಟ್ಟಿ, ಭಟ್ಳಳದಿಂದ

ಐದು ಜನ, ಯಲ್ಲಾಪುರದಿಂದ ವಿ.ಎಸ್.‌ ಪಾಟೀಲ್‌, ಶ್ರೀನಿವಾಸ್‌ ಸೇರಿದ ಒಟ್ಟೂ೨೫ ಕ್ಕೂ ಹೆಚ್ಚು ಆಕಾಂಕ್ಷಿಗಳು ತಮ್ಮ ಉಮೇದುವಾರಿಕೆಯ ಬಗ್ಗೆ ಪ್ರತಿಪಾದಿಸಿದ್ದಾರೆ. ಈ ಹೆಸರುಗಳಲ್ಲದೆ ಬೇರೆ ಹೆಸರುಗಳೂ ಕೂಡಾ ಅಂತಿಮವಾಗುವ ಸಾಧ್ಯತೆ ಇದ್ದು ಇದೇ ತಿಂಗಳು ಅಭ್ಯರ್ಥಿಗಳ ಘೋಷಣೆ ನಡೆಯಲಿದೆ ಎನ್ನುವುದನ್ನು ಮೂಲಗಳು ಖಚಿತಪಡಿಸಿವೆ.

ವಿಧಾನಸಭಾ ಚುನಾವಣೆ: ಒಗ್ಗಟ್ಟಿನ ಮಂತ್ರ ಪಠಿಸಿದ ಕಾಂಗ್ರೆಸ್ ನಾಯಕರು

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ರಾಜ್ಯ ಕಾಂಗ್ರೆಸ್ ಚುನಾವಣೆಗೆ ಭರ್ಜರಿ ತಯಾರಿ ಆರಂಭಿಸಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಗ್ಗಟ್ಟಿನ ಮಂತ್ರ ಪಠಿಸಿದೆ.

File photo

ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ರಾಜ್ಯ ಕಾಂಗ್ರೆಸ್ ಚುನಾವಣೆಗೆ ಭರ್ಜರಿ ತಯಾರಿ ಆರಂಭಿಸಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಗ್ಗಟ್ಟಿನ ಮಂತ್ರ ಪಠಿಸಿದೆ.
 
ಚುನಾವಣಾ ಸಿದ್ಧತೆಯಂತೆ ತುರುವೇಕೆರೆಯಲ್ಲಿ ಬುಧವಾರ ಕಾಂಗ್ರೆಸ್ ರ್ಯಾಲಿಯೊಂದನ್ನು ನಡೆಸಿದ್ದು, ರ್ಯಾಲಿಯಲ್ಲಿ ಡಿಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಹಲವು ನಾಯಕರು ಪಾಲ್ಗೊಂಡಿದ್ದರು.

ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು. ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ನಾಯಕರ ಹೆಸರನ್ನು ಪಟ್ಟಿ ಮಾಡಿದರು. ಅಲ್ಲದೆ, ಹಿಂದಿನ ರಾಜಕೀಯ ಧ್ರುವೀಕರಣವು 2023 ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಲಾಭವನ್ನು ತಂದು ಕೊಡಲಿದೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಕಣಕ್ಕಿಳಿದಿದೆ. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಆ ಪಕ್ಷಗಳಿಗಾಗಿ ಸುಖಾಸುಮ್ಮನೆ ವ್ಯರ್ಥ ಮಾಡಬಾರದು, ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕು. ನಾವು ಅವರನ್ನು ಪಕ್ಷದಲ್ಲಿ ಹಳೆಯ ಕಾಲದವರಂತೆಯೇ ಘನತೆಯಿಂದ ನಡೆಸಿಕೊಳ್ಳುತ್ತೇವೆಂದು ಭರವಸೆ ನೀಡಿದರು.

ಮಧು ಬಂಗಾರಪ್ಪ, ಕೋಲಾರದಲ್ಲಿ ಮನೋಹರ್, ಕೋನರೆಡ್ಡಿ, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್, ತೀರ್ಥಹಳ್ಳಿ ಮಂಜುನಾಥ್ ಗೌಡ, ರಮೇಶ್, ಜೀವಿಜಯ, ವೈ.ಎಸ್.ವಿ.ದತ್ತ ಸೇರಿದಂತೆ ಹಲವು ಮುಖಂಡರು ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಕಾಂಗ್ರೆಸ್’ಗೆ ಸೇರ್ಪಡೆಯಾಗಿದ್ದಾರೆ ಎಂದು ಪಟ್ಟಿ ಮಾಾಡಿ ಹೇಳಿದರು.

“ಇವರು ರಾಜ್ಯದ ರಾಜಕೀಯ ಭವಿಷ್ಯವನ್ನು ನಿರ್ಣಯಿಸಬಲ್ಲ ನಾಯಕರು. ರಾಜ್ಯದಲ್ಲಿ ಕಾಂಗ್ರೆಸ್ ಉಜ್ವಲ ಭವಿಷ್ಯಕ್ಕೆ ನಾಂದಿ ಹಾಡುತ್ತಿದೆ. ಆದರೆ, ಬಿಜೆಪಿ ಸರ್ಕಾರ ಮುಳುಗುತ್ತಿದೆ. ನಮ್ಮ ಆಂತರಿಕ ಸಮೀಕ್ಷೆಯು ಕಾಂಗ್ರೆಸ್‌ಗೆ 136 ಮತ್ತು ಬಿಜೆಪಿಗೆ 60 ಸ್ಥಾನಗಳ ಸಿಗಲಿದೆ ಎಂದು ಹೇಳಿದೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ರಾಜೀನಾಮೆ ಪಡೆದು ಕಣ್ಣೀರು ಹಾಕುವಂತೆ ಮಾಡಿದ್ದು ಬಿಜೆಪಿಯ ಸಾಧನೆ. ಬಿಜೆಪಿ ಉತ್ತಮ ಆಡಳಿತ ನೀಡಿದ್ದರೆ ಅವರು ಈ ರೀತಿ ಮಾಡುತ್ತಿರಲಿಲ್ಲ ಎಂದು ತಿಳಿಸಿದರು.

ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಅಭಿವೃದ್ಧಿಗಿಂತ ಲವ್ ಜಿಹಾದ್‌ಗೆ ಒತ್ತು ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನೀಡಿದ್ದ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಸಮಾವೇಶದಲ್ಲಿ ಮಾತನಾಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *