ನಾಳೆ ಕಾನಸೂರಿನಲ್ಲಿ ಯಕ್ಷಗಾನ ಜೋಡಾಟ


ಕಾನಸೂರು: ಶ್ರೀ ಕ್ಷೇತ್ರ ಸಿಗಂದೂರು ಯಕ್ಷಗಾನ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕಾನಸೂರಿನ ಮಾದನ ಕಳ್ ದಲ್ಲಿ ಕೂಡಾಟ ಮತ್ತು ಜೋಡಾಟ ಹಾಗೂ ಸನ್ಮಾನ ಕಾರ್ಯಕ್ರಮ ಜನವರಿ ೬ರಂದು ನಡೆಯಲಿದೆ.
ಕಾರ್ಯಕ್ರಮವನ್ನು ಬೈಲಹೊಂಗಲ ಡಿವೈಎಸ್ಪಿ ರವಿ ಡಿ ನಾಯ್ಕ ಉದ್ಘಾಟಿಸಲಿದ್ದಾರೆ. ಕಾನಸೂರು ಗ್ರಾಪಂ ಅಧ್ಯಕ್ಷ ವೀರಭದ್ರ ಜಂಗಣ್ಣನವರ್ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರವಿಕುಮಾರ್, ಉದ್ಯಮಿ ಆರ್‌ಜಿ ಶೇಟ್, ಗ್ರಾಪಂ ಸದಸ್ಯ ಶಶಿಕಾಂತ ನಾಮಧಾರಿ, ನಿವೃತ್ತ ಶಿಕ್ಷಕ ಕೆ.ಆರ್. ಹೆಗಡೆ, ಸಿರ್ಸಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ, ಗ್ರಾಪಂ ಉಪಾಧ್ಯಕ್ಷೆ ಶಶಿಪ್ರಭಾ ಹೆಗಡೆ ಹಾಗೂ ನಿಕಟಪೂರ್ವ ಯಕ್ಷಗಾನ ಅಕಾಡೆಮಿ ಸದಸ್ಯೆ ನಿರ್ಮಲ ಹೆಗಡೆ ಗೋಳಿ ಕೊಪ್ಪ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ವಿದ್ಯಾಧರ ಜಳವಳ್ಳಿ, ರಘುಪತಿ ನಾಯ್ಕ್ ಹೆಗ್ಗರಣಿ, ಅತ್ಯುತ್ತಮ ಭಾಣಸಿಗ ರಘುನಂದನ್ ಭಟ್ ಶಿರಳಗಿ, ರೇಖಾ ಹೆಗಡೆ ತುಂಬೆಬೀಡು, ಶಿಕ್ಷಕ ಮನೋಹರ್ ದುಂಡಸಿ, ಗುತ್ತಿಗೆದಾರ ಮುತ್ತುಸ್ವಾಮಿ, ವೈದ್ಯ ಡಾಕ್ಟರ್ ವಿಕ್ರಂ ಶೆಟ್ಟಿ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪಶಸ್ತಿ ಪುರಸ್ಕೃತ ಕುಮಾರಿ ಕೌಶಲ್ಯ ಹೆಗಡೆ ಹಾಗೂ ಕುಶ ರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕ ವೆಂಕಟರಮಣ ಹೆಗಡೆ ತಿಳಿಸಿದ್ದಾರೆ.

ಶನಿವಾರ ಶಿರಸಿ ಬಂದ್….
ಸಿದ್ದಾಪುರ:- ಚಿತ್ರದುರ್ಗದ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ ಶ್ರೀಮಠದ ಸಂಕಷ್ಟಾಪನೆ 14 ನೇ ವಾರ್ಷಿಕೋತ್ಸವ, ಮಹಾಸ್ವಾಮಿಗಳ ಜಂಗಮ ದೀಕ್ಷೆ 24 ನೇ ಹಾಗೂ 39ನೇ ಜನ್ಮದಿನ ವಾರ್ಷಿಕೋತ್ಸವ ಮತ್ತು ಜಗದ್ಗುರು ಡಾಕ್ಟರ್ ಶ್ರೀ ಬಸವ ಮಾಚಿದೇವಸ್ವಾಮಿಗಳ್ ರವರ ಐದನೇ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ “ಕಾಯಕ ಜನೋತ್ಸವ – 2023” ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಿದ್ದಾಪುರ ತಾಲೂಕ ಮಡಿವಾಳ ಸಮಾಜದ ಅಧ್ಯಕ್ಷರಾದ ಪಿ ಬಿ ಹೊಸೂರ್ ಕೋರಿದ್ದಾರೆ.‌


ಪಟ್ಟಣದ ರಾಘವೇಂದ್ರ ಮಠದ ಸಭಾಭವನದಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ವಿಷಯ ತಿಳಿಸಿ 2023 ಜನವರಿ ಐದು ಗುರುವಾರ ಮತ್ತು 6 ಶುಕ್ರವಾರ ರಂದು ಕಾರ್ಯಕ್ರಮಗಳು ನಡೆಯಲಿದ್ದು ಮಾಚಿದೇವರ ಜೀವನ ಮೌಲ್ಯಗಳು ಕುರಿತು ಉಪನ್ಯಾಸ, ಸಾಂಸ್ಕೃತಿಕ ಸಂಭ್ರಮ, ಮತ್ತು ಸಾಧಕರ ಸಮಾವೇಶ ನಡೆಯಲಿದೆ. ಅಂದು ಮಾಚಿದೇವ ಸೇವಾ ರತ್ನ ಪ್ರಶಸ್ತಿ ಪ್ರದಾನ, ವಿವಿಧ ದತ್ತಿ ನಿಧಿಗಳ ದಾನಿಗಳಿಗೆ ಪ್ರಶಸ್ತಿ ಪ್ರಧಾನ, ವಿಶ್ವ ಆದರ್ಶ ಕುಟುಂಬ ಪ್ರಶಸ್ತಿ ಪ್ರಧಾನ, ಕಾಯಕಶ್ರೀ ಪ್ರಶಸ್ತಿ ಪ್ರಧಾನ, ಮಲ್ಲಿಗೆಮ್ಮ ಮಾತೋಶ್ರೀ 2023 ಪ್ರಶಸ್ತಿ ಪ್ರಧಾನ ಕಾರ್ಯಕ್ರಮಗಳು ನಡೆಯಲಿವೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಶ್ ಮಡಿವಾಳ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *