ನಾಳೆ ಕಾನಸೂರಿನಲ್ಲಿ ಯಕ್ಷಗಾನ ಜೋಡಾಟ


ಕಾನಸೂರು: ಶ್ರೀ ಕ್ಷೇತ್ರ ಸಿಗಂದೂರು ಯಕ್ಷಗಾನ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕಾನಸೂರಿನ ಮಾದನ ಕಳ್ ದಲ್ಲಿ ಕೂಡಾಟ ಮತ್ತು ಜೋಡಾಟ ಹಾಗೂ ಸನ್ಮಾನ ಕಾರ್ಯಕ್ರಮ ಜನವರಿ ೬ರಂದು ನಡೆಯಲಿದೆ.
ಕಾರ್ಯಕ್ರಮವನ್ನು ಬೈಲಹೊಂಗಲ ಡಿವೈಎಸ್ಪಿ ರವಿ ಡಿ ನಾಯ್ಕ ಉದ್ಘಾಟಿಸಲಿದ್ದಾರೆ. ಕಾನಸೂರು ಗ್ರಾಪಂ ಅಧ್ಯಕ್ಷ ವೀರಭದ್ರ ಜಂಗಣ್ಣನವರ್ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರವಿಕುಮಾರ್, ಉದ್ಯಮಿ ಆರ್‌ಜಿ ಶೇಟ್, ಗ್ರಾಪಂ ಸದಸ್ಯ ಶಶಿಕಾಂತ ನಾಮಧಾರಿ, ನಿವೃತ್ತ ಶಿಕ್ಷಕ ಕೆ.ಆರ್. ಹೆಗಡೆ, ಸಿರ್ಸಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ, ಗ್ರಾಪಂ ಉಪಾಧ್ಯಕ್ಷೆ ಶಶಿಪ್ರಭಾ ಹೆಗಡೆ ಹಾಗೂ ನಿಕಟಪೂರ್ವ ಯಕ್ಷಗಾನ ಅಕಾಡೆಮಿ ಸದಸ್ಯೆ ನಿರ್ಮಲ ಹೆಗಡೆ ಗೋಳಿ ಕೊಪ್ಪ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ವಿದ್ಯಾಧರ ಜಳವಳ್ಳಿ, ರಘುಪತಿ ನಾಯ್ಕ್ ಹೆಗ್ಗರಣಿ, ಅತ್ಯುತ್ತಮ ಭಾಣಸಿಗ ರಘುನಂದನ್ ಭಟ್ ಶಿರಳಗಿ, ರೇಖಾ ಹೆಗಡೆ ತುಂಬೆಬೀಡು, ಶಿಕ್ಷಕ ಮನೋಹರ್ ದುಂಡಸಿ, ಗುತ್ತಿಗೆದಾರ ಮುತ್ತುಸ್ವಾಮಿ, ವೈದ್ಯ ಡಾಕ್ಟರ್ ವಿಕ್ರಂ ಶೆಟ್ಟಿ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪಶಸ್ತಿ ಪುರಸ್ಕೃತ ಕುಮಾರಿ ಕೌಶಲ್ಯ ಹೆಗಡೆ ಹಾಗೂ ಕುಶ ರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕ ವೆಂಕಟರಮಣ ಹೆಗಡೆ ತಿಳಿಸಿದ್ದಾರೆ.

ಶನಿವಾರ ಶಿರಸಿ ಬಂದ್….
ಸಿದ್ದಾಪುರ:- ಚಿತ್ರದುರ್ಗದ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ ಶ್ರೀಮಠದ ಸಂಕಷ್ಟಾಪನೆ 14 ನೇ ವಾರ್ಷಿಕೋತ್ಸವ, ಮಹಾಸ್ವಾಮಿಗಳ ಜಂಗಮ ದೀಕ್ಷೆ 24 ನೇ ಹಾಗೂ 39ನೇ ಜನ್ಮದಿನ ವಾರ್ಷಿಕೋತ್ಸವ ಮತ್ತು ಜಗದ್ಗುರು ಡಾಕ್ಟರ್ ಶ್ರೀ ಬಸವ ಮಾಚಿದೇವಸ್ವಾಮಿಗಳ್ ರವರ ಐದನೇ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ “ಕಾಯಕ ಜನೋತ್ಸವ – 2023” ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಿದ್ದಾಪುರ ತಾಲೂಕ ಮಡಿವಾಳ ಸಮಾಜದ ಅಧ್ಯಕ್ಷರಾದ ಪಿ ಬಿ ಹೊಸೂರ್ ಕೋರಿದ್ದಾರೆ.‌


ಪಟ್ಟಣದ ರಾಘವೇಂದ್ರ ಮಠದ ಸಭಾಭವನದಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ವಿಷಯ ತಿಳಿಸಿ 2023 ಜನವರಿ ಐದು ಗುರುವಾರ ಮತ್ತು 6 ಶುಕ್ರವಾರ ರಂದು ಕಾರ್ಯಕ್ರಮಗಳು ನಡೆಯಲಿದ್ದು ಮಾಚಿದೇವರ ಜೀವನ ಮೌಲ್ಯಗಳು ಕುರಿತು ಉಪನ್ಯಾಸ, ಸಾಂಸ್ಕೃತಿಕ ಸಂಭ್ರಮ, ಮತ್ತು ಸಾಧಕರ ಸಮಾವೇಶ ನಡೆಯಲಿದೆ. ಅಂದು ಮಾಚಿದೇವ ಸೇವಾ ರತ್ನ ಪ್ರಶಸ್ತಿ ಪ್ರದಾನ, ವಿವಿಧ ದತ್ತಿ ನಿಧಿಗಳ ದಾನಿಗಳಿಗೆ ಪ್ರಶಸ್ತಿ ಪ್ರಧಾನ, ವಿಶ್ವ ಆದರ್ಶ ಕುಟುಂಬ ಪ್ರಶಸ್ತಿ ಪ್ರಧಾನ, ಕಾಯಕಶ್ರೀ ಪ್ರಶಸ್ತಿ ಪ್ರಧಾನ, ಮಲ್ಲಿಗೆಮ್ಮ ಮಾತೋಶ್ರೀ 2023 ಪ್ರಶಸ್ತಿ ಪ್ರಧಾನ ಕಾರ್ಯಕ್ರಮಗಳು ನಡೆಯಲಿವೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಶ್ ಮಡಿವಾಳ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *