ನಾಡು-ನಾಳೆಗಾಗಿ ಕಾಡು ಉಳಿಸಿಕೊಳ್ಳಿ

ಸಿದ್ದಾಪುರ: ಯಾವ ರಂಗದಲ್ಲಿದ್ದರೂ ಅಂತರಂಗ ಶುದ್ದವಾಗಿರಬೇಕು ಎಂದು ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಐನಕೈ ಹೇಳಿದರು.
ತಾಲೂಕಿನ ಕಲಗದ್ದೆಯ ಯಕ್ಷಗಾನ ಶ್ರೀ ನಾಟ್ಯ ವಿನಾಯಕ ದೇವಾಲಯದಲ್ಲಿ ಶ್ರೀದೇವರ ವಾರ್ಷಿಕೋತ್ಸವದಲ್ಲಿ ‘ಕಾರ್ಯದಕ್ಷ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಯಾವ ಪ್ರಶಸ್ತಿ ಸಿಕ್ಕರೂ ನಮ್ಮ ಊರಿನಲ್ಲಿ ಸಿಗೋ ಪ್ರಶಸ್ತಿ ದೊಡ್ಡದು. ನಾಟ್ಯ ವಿನಾಯಕ ಪ್ರಸಾದವಾಗಿ ಸ್ವೀಕರಿಸಿದ್ದೇನೆ ಎಂದರು.
ಹಿರಿಯ ಚಿತ್ರ ಕಲಾವಿದ ನೀರ್ನಳ್ಳಿ ರಾಮಕೃಷ್ಣ, ಮಲೆನಾಡಿನ ಕಾಡು ಉಳಿಸಿಕೊಳ್ಳಬೇಕು. ಈ ಭಾಗದ ಕಾಡು, ಜನರ ಪ್ರೀತಿ ಭಾವುಕವಾಗಿದೆ. ಕಲಾವಿದ ಭಾವನಾ ಜೀವಿಗಳು. ನನಗೆ ಲೋಕ ನೋಡುವ ಕುತೂಹಲ. ಪ್ರಪಂಚವೇ ನಂಬಿಕೆಯ ಮೇಲಿದೆ. ಭೂ ಮಂಡಲ ಸೂರ್ಯ ನಂಬಿದೆ. ನಾನು ಎಲ್ಲ ನಂಬಿಯೇ ಎಲ್ಲ ಹೆಜ್ಜೆ ಕುತೂಹಲದಿಂದ ನೋಡುತ್ತೇನೆ ಎಂದರು.


ಅಭಿನಂದನಾ ನುಡಿ ಆಡಿದ ಪ್ರಸಿದ್ಧ ಅರ್ಥದಾರಿ ಮೋಹನ ಭಾಸ್ಕರ ಹೆಗಡೆ ಅವರು, ವಿನಯದಿಂದ ವಿದ್ವತ್ ಪಡೆದವರು. ಕೌಶಲ, ಗಾಢವಾದ ಪ್ರಯತ್ನದಿಂದ, ಅಭ್ಯಾಸದಿಂದ ಸರ್ವ ಮಾನ್ಯರಾದವರು. ಎಳೆಯರಲ್ಲೇ ಎತ್ತರದಲ್ಲಿ ಏರಿದವರು ಎಂದು ಬಣ್ಣಿಸಿದರು.
ಅತಿಥಿಗಳಾಗಿ ಪಾಲ್ಗೊಂಡ ಹಿರಿಯ ಜೋತಿಷಿ ಕಮಲಾಕರ ಭಟ್ಟ, ಶಿಲೆಗೆ ಪೆಟ್ಟು ಬಿದ್ದಾಗಲೆ ಚೆಂದದ ಮೂರ್ತಿ ಆಗುತ್ತದೆ. ಎಲ್ಲಿ ತಾನು, ತಾನೇ ಅವನೇ ಆಗದರೆ ಭಗವಂತ ಕಲ್ಪವೃಕ್ಷನಾಗುತ್ತನೆ‌. ಯಕ್ಷಗಾನ ಕಲಾ ಪ್ರದರ್ಶನ ಇಲ್ಲಿ ಕೂಡ ಆಗಲಿದೆ ಎಂದರು.


ಅಧ್ಯಕ್ಷತೆವಹಿಸಿದ್ದ
ವಿದ್ವಾಂಸ ಅಡವಿತೋಟ ಕೃಷ್ಣ ಭಟ್ಟ, ಶ್ರೀ‌ಮತಿ ದೀಪಾ ಭಟ್ಟ ವೇದಿಕೆಯಲ್ಲಿ ‌ಇದ್ದರು. ದೇವಸ್ಥಾನದ ಪ್ರಧಾನ ವಿಶ್ವಸ್ಥ
ವಿನಾಯಕ ಹೆಗಡೆ ಕಲಗದ್ದೆ ಸ್ವಾಗತಿಸಿದರು. ಮಹೇಶ ಹೆಗಡೆ ಕೊಳಗಿ ಸಮ್ಮಾನ ಪತ್ರ ವಾಚಿಸಿದರು. ಆರ್.ಬಿ.ಹೆಗಡೆ ನಿರ್ವಹಿಸಿದರು.
ಚಂಡೆ ನರ್ತನದ ಝೇಂಕಾರ:
ಎರಡು‌ ದಿನಗಳ ಯಕ್ಷಗಾನೋತ್ಸವ, ನೃತ್ಯೋತ್ಸವ
ಕಲಗದ್ದೆ ಶಂಭು ಶಿಷ್ಯ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಪ್ರಥಮ ದಿನ ಲವಕುಶ ಆಖ್ಯಾನ ಪ್ರದರ್ಶನವಾಗಲಿದ್ದು, ಹಿಮ್ಮೇಳದಲ್ಲಿ ಪ್ರಸಿದ್ಧ ಭಾಗವ ಕೇಶವ ಹೆಗಡೆ ಕೊಳಗಿ, ಮಂಜುನಾಥ ಗುಡ್ಡೆದಿಂಬ, ಭಾರ್ಗವ ಹೆಗ್ಗೋಡು ಮುಮ್ಮೇಳದಲ್ಲಿ ವಿನಾಯಕ ಹೆಗಡೆ ಕಲಗದ್ದೆ, ಅಶೋಕ ಭಟ್ಟ ಸಿದ್ದಾಪುರ, ಮಹಾಬಲೇಶ್ವರ ಇಟಗಿ, ನಾಗೇಂದ್ರ ಭಟ್ಟ ಮೂರೂರು, ವೆಂಕಟೇಶ ಬೊಗ್ರಿಮಕ್ಕಿ, ಅವಿನಾಶ ಕೊಪ್ಪ, ಪ್ರವೀಣ ತಟ್ಟಿಸರ ಪಾಲ್ಗೊಂಡರು.
ಎರಡನೆ ದಿನ ಮಂಗಳೂರಿನ ಪೃಥ್ವಿ ಎಸ್.ರಾವ್ ಅವರಿಂದ ನೃತ್ಯಾರ್ಪಣೆ, ಬಳಿಕ ಚಿತ್ರದುರ್ಗದ ಶ್ರೀಮತಿ ಶ್ವೇತಾ ಮಂಜುನಾಥ, ಯಶ್ವಸ್ವಿನಿ ಎಂ‌.ಜಿ., ಕು. ಶಮಾ ಭಾಗ್ವತ್, ಕು. ಸುಖಿ ತಂಡದಿಂದ ಭರತನಾಟ್ಯ ಪ್ರದರ್ಶನ, ಕೂಚುಪುಡಿ ನರ್ತನ, ಗಜಾನನ ಜನನ ನೃತ್ಯ ರೂಪಕ ಗಮನ ಸೆಳೆಯಿತು.
ಬಳಿಕ ಸುರಥಾಂಜನೇಯ ಯಕ್ಷಗಾನ ಪ್ರದರ್ಶನ ನಡೆಯಿತು. ಹಿಮ್ಮೇಳದಲ್ಲಿ ಪ್ರಸಿದ್ಧ ಭಾಗವ ಕೇಶವ ಹೆಗಡೆ ಕೊಳಗಿ, ಮಂಜುನಾಥ ಗುಡ್ಡೆದಿಂಬ, ಭಾರ್ಗವ ಹೆಗ್ಗೋಡು ಪಾಲ್ಗೊಂಡರು. ಮುಮ್ಮೇಳದಲ್ಲಿ ವಿನಾಯಕ ಹೆಗಡೆ ಕಲಗದ್ದೆ, ಗಣಪತಿ ಹೆಗಡೆ ತೋಟಿಮನೆ, ಮಹಾಬಲೇಶ್ವರ ಇಟಗಿ, ನಾಗೇಂದ್ರ ಭಟ್ಟ ಮೂರೂರು, ವೆಂಕಟೇಶ ಬೊಗ್ರಿಮಕ್ಕಿ, ಅವಿನಾಶ ಕೊಪ್ಪ, ತುಳಸಿ ಹೆಗಡೆ ಪಾಳ್ಗೊಂಡರು. ಪ್ರಸಾದನವನ್ನು ಎಂ.ಆರ್.ನಾಯ್ಕ‌ ಕರ್ಸೇಬೈಲ್ ಒದಗಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *