ನಾಡು-ನಾಳೆಗಾಗಿ ಕಾಡು ಉಳಿಸಿಕೊಳ್ಳಿ

ಸಿದ್ದಾಪುರ: ಯಾವ ರಂಗದಲ್ಲಿದ್ದರೂ ಅಂತರಂಗ ಶುದ್ದವಾಗಿರಬೇಕು ಎಂದು ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಐನಕೈ ಹೇಳಿದರು.
ತಾಲೂಕಿನ ಕಲಗದ್ದೆಯ ಯಕ್ಷಗಾನ ಶ್ರೀ ನಾಟ್ಯ ವಿನಾಯಕ ದೇವಾಲಯದಲ್ಲಿ ಶ್ರೀದೇವರ ವಾರ್ಷಿಕೋತ್ಸವದಲ್ಲಿ ‘ಕಾರ್ಯದಕ್ಷ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಯಾವ ಪ್ರಶಸ್ತಿ ಸಿಕ್ಕರೂ ನಮ್ಮ ಊರಿನಲ್ಲಿ ಸಿಗೋ ಪ್ರಶಸ್ತಿ ದೊಡ್ಡದು. ನಾಟ್ಯ ವಿನಾಯಕ ಪ್ರಸಾದವಾಗಿ ಸ್ವೀಕರಿಸಿದ್ದೇನೆ ಎಂದರು.
ಹಿರಿಯ ಚಿತ್ರ ಕಲಾವಿದ ನೀರ್ನಳ್ಳಿ ರಾಮಕೃಷ್ಣ, ಮಲೆನಾಡಿನ ಕಾಡು ಉಳಿಸಿಕೊಳ್ಳಬೇಕು. ಈ ಭಾಗದ ಕಾಡು, ಜನರ ಪ್ರೀತಿ ಭಾವುಕವಾಗಿದೆ. ಕಲಾವಿದ ಭಾವನಾ ಜೀವಿಗಳು. ನನಗೆ ಲೋಕ ನೋಡುವ ಕುತೂಹಲ. ಪ್ರಪಂಚವೇ ನಂಬಿಕೆಯ ಮೇಲಿದೆ. ಭೂ ಮಂಡಲ ಸೂರ್ಯ ನಂಬಿದೆ. ನಾನು ಎಲ್ಲ ನಂಬಿಯೇ ಎಲ್ಲ ಹೆಜ್ಜೆ ಕುತೂಹಲದಿಂದ ನೋಡುತ್ತೇನೆ ಎಂದರು.


ಅಭಿನಂದನಾ ನುಡಿ ಆಡಿದ ಪ್ರಸಿದ್ಧ ಅರ್ಥದಾರಿ ಮೋಹನ ಭಾಸ್ಕರ ಹೆಗಡೆ ಅವರು, ವಿನಯದಿಂದ ವಿದ್ವತ್ ಪಡೆದವರು. ಕೌಶಲ, ಗಾಢವಾದ ಪ್ರಯತ್ನದಿಂದ, ಅಭ್ಯಾಸದಿಂದ ಸರ್ವ ಮಾನ್ಯರಾದವರು. ಎಳೆಯರಲ್ಲೇ ಎತ್ತರದಲ್ಲಿ ಏರಿದವರು ಎಂದು ಬಣ್ಣಿಸಿದರು.
ಅತಿಥಿಗಳಾಗಿ ಪಾಲ್ಗೊಂಡ ಹಿರಿಯ ಜೋತಿಷಿ ಕಮಲಾಕರ ಭಟ್ಟ, ಶಿಲೆಗೆ ಪೆಟ್ಟು ಬಿದ್ದಾಗಲೆ ಚೆಂದದ ಮೂರ್ತಿ ಆಗುತ್ತದೆ. ಎಲ್ಲಿ ತಾನು, ತಾನೇ ಅವನೇ ಆಗದರೆ ಭಗವಂತ ಕಲ್ಪವೃಕ್ಷನಾಗುತ್ತನೆ‌. ಯಕ್ಷಗಾನ ಕಲಾ ಪ್ರದರ್ಶನ ಇಲ್ಲಿ ಕೂಡ ಆಗಲಿದೆ ಎಂದರು.


ಅಧ್ಯಕ್ಷತೆವಹಿಸಿದ್ದ
ವಿದ್ವಾಂಸ ಅಡವಿತೋಟ ಕೃಷ್ಣ ಭಟ್ಟ, ಶ್ರೀ‌ಮತಿ ದೀಪಾ ಭಟ್ಟ ವೇದಿಕೆಯಲ್ಲಿ ‌ಇದ್ದರು. ದೇವಸ್ಥಾನದ ಪ್ರಧಾನ ವಿಶ್ವಸ್ಥ
ವಿನಾಯಕ ಹೆಗಡೆ ಕಲಗದ್ದೆ ಸ್ವಾಗತಿಸಿದರು. ಮಹೇಶ ಹೆಗಡೆ ಕೊಳಗಿ ಸಮ್ಮಾನ ಪತ್ರ ವಾಚಿಸಿದರು. ಆರ್.ಬಿ.ಹೆಗಡೆ ನಿರ್ವಹಿಸಿದರು.
ಚಂಡೆ ನರ್ತನದ ಝೇಂಕಾರ:
ಎರಡು‌ ದಿನಗಳ ಯಕ್ಷಗಾನೋತ್ಸವ, ನೃತ್ಯೋತ್ಸವ
ಕಲಗದ್ದೆ ಶಂಭು ಶಿಷ್ಯ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಪ್ರಥಮ ದಿನ ಲವಕುಶ ಆಖ್ಯಾನ ಪ್ರದರ್ಶನವಾಗಲಿದ್ದು, ಹಿಮ್ಮೇಳದಲ್ಲಿ ಪ್ರಸಿದ್ಧ ಭಾಗವ ಕೇಶವ ಹೆಗಡೆ ಕೊಳಗಿ, ಮಂಜುನಾಥ ಗುಡ್ಡೆದಿಂಬ, ಭಾರ್ಗವ ಹೆಗ್ಗೋಡು ಮುಮ್ಮೇಳದಲ್ಲಿ ವಿನಾಯಕ ಹೆಗಡೆ ಕಲಗದ್ದೆ, ಅಶೋಕ ಭಟ್ಟ ಸಿದ್ದಾಪುರ, ಮಹಾಬಲೇಶ್ವರ ಇಟಗಿ, ನಾಗೇಂದ್ರ ಭಟ್ಟ ಮೂರೂರು, ವೆಂಕಟೇಶ ಬೊಗ್ರಿಮಕ್ಕಿ, ಅವಿನಾಶ ಕೊಪ್ಪ, ಪ್ರವೀಣ ತಟ್ಟಿಸರ ಪಾಲ್ಗೊಂಡರು.
ಎರಡನೆ ದಿನ ಮಂಗಳೂರಿನ ಪೃಥ್ವಿ ಎಸ್.ರಾವ್ ಅವರಿಂದ ನೃತ್ಯಾರ್ಪಣೆ, ಬಳಿಕ ಚಿತ್ರದುರ್ಗದ ಶ್ರೀಮತಿ ಶ್ವೇತಾ ಮಂಜುನಾಥ, ಯಶ್ವಸ್ವಿನಿ ಎಂ‌.ಜಿ., ಕು. ಶಮಾ ಭಾಗ್ವತ್, ಕು. ಸುಖಿ ತಂಡದಿಂದ ಭರತನಾಟ್ಯ ಪ್ರದರ್ಶನ, ಕೂಚುಪುಡಿ ನರ್ತನ, ಗಜಾನನ ಜನನ ನೃತ್ಯ ರೂಪಕ ಗಮನ ಸೆಳೆಯಿತು.
ಬಳಿಕ ಸುರಥಾಂಜನೇಯ ಯಕ್ಷಗಾನ ಪ್ರದರ್ಶನ ನಡೆಯಿತು. ಹಿಮ್ಮೇಳದಲ್ಲಿ ಪ್ರಸಿದ್ಧ ಭಾಗವ ಕೇಶವ ಹೆಗಡೆ ಕೊಳಗಿ, ಮಂಜುನಾಥ ಗುಡ್ಡೆದಿಂಬ, ಭಾರ್ಗವ ಹೆಗ್ಗೋಡು ಪಾಲ್ಗೊಂಡರು. ಮುಮ್ಮೇಳದಲ್ಲಿ ವಿನಾಯಕ ಹೆಗಡೆ ಕಲಗದ್ದೆ, ಗಣಪತಿ ಹೆಗಡೆ ತೋಟಿಮನೆ, ಮಹಾಬಲೇಶ್ವರ ಇಟಗಿ, ನಾಗೇಂದ್ರ ಭಟ್ಟ ಮೂರೂರು, ವೆಂಕಟೇಶ ಬೊಗ್ರಿಮಕ್ಕಿ, ಅವಿನಾಶ ಕೊಪ್ಪ, ತುಳಸಿ ಹೆಗಡೆ ಪಾಳ್ಗೊಂಡರು. ಪ್ರಸಾದನವನ್ನು ಎಂ.ಆರ್.ನಾಯ್ಕ‌ ಕರ್ಸೇಬೈಲ್ ಒದಗಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *