kolasirasi road – ಕೋಲಶಿರ್ಸಿ ಕಳಪೆ ಕಾಮಗಾರಿ ಬಗ್ಗೆ ಆಕ್ಷೇಪ

ಸಿದ್ದಾಪುರ ಕೋಲ್ ಶಿರ್ಸಿ ಮಾರುತಿ ನಗರ ರಸ್ತೆ ಡಾಂಬರೀಕರಣ ಕಳೆಪೆಯಾಗಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಈ ರಸ್ತೆಯು 600 ಮೀಟರ್ ರಸ್ತೆ ಡಾಂಬ ರೀಕರಣ ನಡೆಸಿದ್ದು ಮೂರೇ ದಿನಗಳಲ್ಲಿ ಅಲ್ಲಲ್ಲಿ ರಸ್ತೆ ಕಿತ್ತು ಬರುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

.ಕೋಲ್ ಶಿರ್ಸಿ ಮಾರುತಿ ನಗರ ,ಕಾನಳ್ಳಿ ,ಕಡಕೇರಿ,ತ್ಯಾರ್ಸಿ, ಮೂಲಕ ಕುಮಟಾ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಹಲವಾರು ವರ್ಷಗಳಿಂದ ಈ ರಸ್ತೆಯನ್ನು ಸರ್ವಋುತು ರಸ್ತೆಯನ್ನಾಗಿಸಬೇಕೆಂಬ ಬೇಡಿಕೆ ಇತ್ತು ಅದು ಈಗ ಕೂಡಿಬಂದಿದೆ ಆದರೆ ಕಾಮಗಾರಿ ಕಳಪೆಯಿಂದ ಕನಸು ಕನಸಾಗಿ ಉಳಿದಂತಾಗಿದೆ.

ಕಾಮಗಾರಿ ಆಗಿ ಮೂರ್ನಾಲ್ಕು ದಿನದಲ್ಲಿ ಕೇೀಳುತ್ತಿರುವ ರಸ್ತೆಯನ್ನು ಕಂಡು ಸ್ಥಳೀಯರು ಕಾಮಗಾರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಸರಿಯಾದ ಪ್ರಮಾಣದಲ್ಲಿ ಡಾಂಬರ್ ಮಿಕ್ಸ್ ಮಾಡದೆ ಪ್ರಮಾಣದಲ್ಲೂ ದಪ್ಪ ಮಾಡದೇ ಕೇವಲ ಅರ್ಧ ಇಂಚು ಹಾಕಿರುವುದರಿಂದ ರಸ್ತೆ ಕಳಪೆಯಾಗಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ. ಹಪ್ಪಳ ದಂತೆ ಏಳುತ್ತಿದ್ದ ಗುಣಮಟ್ಟದ ಕೆಲಸ ಆಗದ ಕಳಪೆ ಕೆಲಸ ನಡೆದಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ ಇದರಿಂದ ಬೇಸ ತ್ತಿರುವ ಸ್ಥಳೀಯರು ಮಾಧ್ಯಮದೊಂದಿಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇದು ಜಿಲ್ಲಾ ಪಂಚಾಯತ್ ಅನುದಾನದಲ್ಲಿ ನಿರ್ಮಾಣವಾಗಿರುವ ರಸ್ತೆ ಎಂದು ತಿಳಿದು ಬಂದಿದೆ ಸಂಬಂಧಪಟ್ಟ ಇಲಾಖೆಯವರು ಗುತ್ತಿಗೆದಾರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಸರ್ವ ಋತು ರಸ್ತೆ ನಿರ್ಮಾಣ ಮಾಡಿಕೊಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಸಿದ್ದಾಪುರ: ತಾಲೂಕಿನ ಕೋಲಸಿರ್ಸಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ 160ನೇ ಜಯಂತಿ ಆಚರಣೆ ನಡೆಯಿತು.
ಪ್ರಾಚಾರ್ಯ ಪ್ರಶಾಂತ ತಾರಿಬಾಗಿಲ ಮಾತನಾಡಿ ಸ್ವಾಮಿ ವಿವೇಕಾನಂದರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡು ಉತ್ತಮ ಫಲಿತಾಂಶಕ್ಕಾಗಿ ಧೃಢ ಸಂಕಲ್ಪ ಮಾಡಬೇಕು. ಯುವಜನರಿಗೆ ಒತ್ತು ಕೊಟ್ಟಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಅವರು ನಂಬಿದ್ದರು. ಅವರ ಜೀವನ ಅನುಭವಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.


ಆರ್ಥಿಕ ಸಾಕ್ಷರತಾ ಕಾರ್ಯಕ್ರಮ: ವಿಜಯ ಆರ್ಥಿಕ ಸಾಕ್ಷರತಾ ಕೇಂದ್ರ ದ ಸಮಾಲೋಚಕ ಕರಾದ ಶಿವಶಂಕರ ಎನ್ ಕೆ ಉಳಿತಾಯ, ವಿಮಾ ಸೌಲಭ್ಯ, ಎಟಿಎಂ ಬಳಕೆ, ಮೋಸದ ಜಾಲಗಳ ಬಗ್ಗೆ ವಹಿಸಬಹುದಾದ ಎಚ್ಚರಿಕೆಗಳ ಬಗ್ಗೆ, ಹಾಗೂ ಶಿಕ್ಷಣ ಸಾಲ ಸೌಲಭ್ಯ ಗಳು, ಸ್ವ ಉದ್ಯೋಗ ತರಭೇತಿ ಗಳ ಬಗ್ಗೆ ಮಾಹಿತಿ ನೀಡಿದರು.
ಉಪನ್ಯಾಸಕ ರಾದ ಮಂಜಪ್ಪ, ಲೋಕೇಶ ನಾಯ್ಕ, ಭಾಗ್ಯಶ್ರೀ ನಾಯ್ಕ, ಅಶ್ವಿನಿ ಉಪಸ್ಥಿತರಿದ್ದರು.
ಉಪನ್ಯಾಸಕ ಗೋಪಾಲ ಕಾನಳ್ಳಿ ನಿರೂಪಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *