ಬಾಹ್ಯ ಮತ್ತು ಆಂತರಿಕ ಸೌಂಧರ್ಯಗಳಿಂದ ಸಮಾಜಮುಖಿಗಳಾಗಿ

ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮ
ಸಿದ್ದಾಪುರ
ಶಿಕ್ಷಣಕ್ಕೆ ಬಹುದೊಡ್ಡ ಶಕ್ತಿಯಿದೆ. ಬಾಹ್ಯ ಮತ್ತು ಆಂತರಿಕ ಸೌಂಧರ್ಯ, ಶಕ್ತಿಗಳನ್ನು ಹೆಚ್ಚಿಕೊಳ್ಳಲು ಶಿಕ್ಷಣ ಸಹಕಾರಿಯಾಗುತ್ತದೆ ಎಂದು ಎಂಜಿಸಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ| ಸುರೇಶ ಎಸ್.ಗುತ್ತೀಕರ ಹೇಳಿದರು.
ಅವರು ಎಂಜಿಸಿ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ವಿದ್ಯಾರ್ಥಿ ಸಂಸತ್ ಸಹಯೋಗದಲ್ಲಿ ಆಯೋಜಿಸಿದ 2022-23ನೇ ಸಾಲಿನ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ಹಸಿವಿನ ಜೊತೆ ಕಲಿತ ಪಾಠ ಯಾವಾಗಲೂ ಜ್ಞಾಪಕದಲ್ಲಿರುತ್ತದೆ. ಆಳವಾದ ಅಧ್ಯಯನ, ಗ್ರಹಿಕೆಗಳಿಂದ ಶಿಕ್ಷ ಣವನ್ನು ಪಡೆದುಕೊಂಡಾಗ ಅದು ಬದುಕಿನುದ್ದಕ್ಕೂ ಇರುತ್ತದೆ ಎಂದರು.


ಅತಿಥಿಗಳಾಗಿ ಪಾಲ್ಗೊಂಡಿದ್ದ ಕಿರುತೆರೆ,ಚಲನಚಿತ್ರ ಹಾಗೂ ಭರತನಾಟ್ಯ ಕಲಾವಿದೆ ಭಾರತಿ ಹೆಗಡೆ ಮಾತನಾಡಿ ಶಿಕ್ಷಕರು ಧನಾತ್ಮಕ ಅಂಶಗಳಿಗೆ ಪ್ರೋತ್ಸಾಹಿಸಿ ಉತ್ತಮ ನಾಗರಿಕರಾಗುವಲ್ಲಿ ನಮ್ಮನ್ನು ರೂಪಿಸುತ್ತಾರೆ. ಯುವ ಜನಾಂಗ ನಮ್ಮ ತಳಪಾಯವನ್ನು ಮರೆಯಬಾರದು. ಉಳಿದವರಿಗೆ ಒಳ್ಳೆಯದನ್ನು ಮಾಡುವ ರೀತಿಯಲ್ಲಿ, ಪಾಲಕರಿಗೆ ಹೆಮ್ಮೆ ತರುವ ನಿಟ್ಟನಲ್ಲಿ ಸಮಾಜಮುಖಿಯಾಗಿ ಬೆಳೆಯಬೇಕು.ಈ ದಿನಗಳಲ್ಲಿ ಕನಸು,ಧ್ಯೇಯೋದ್ದೇಶಗಳು ಸಂಕುಚಿತಗೊಳ್ಳುತ್ತಿದ್ದು ದೊಡ್ಡ ಕನಸು, ದೊಡ್ಡ ವಿಚಾರಗಳು ಸಾಕಾರಗೊಳ್ಳಲು ಶ್ರಮವಹಿಸಬೇಕು ಎಂದರು.


ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಪತ್ರಕರ್ತ,ಬರೆಹಗಾರ ಗಂಗಾಧರ ಕೊಳಗಿ ಕೃಷಿ ಸಂಸ್ಕøತಿ ನಮಗೆ ಸಹನೆ, ಶ್ರಮ, ಭರವಸೆ ಮುಂತಾದ ಮೌಲಿಕ ಗುಣಗಳನ್ನು ಕಲಿಸುತ್ತದೆ. ಕೃಷಿಸಂಸ್ಕøತಿ ಮೂಲದಿಂದ ಬಂದ ನಾವು ಅವುಗಳ ಜೊತೆಗೆ ಶಿಕ್ಷಣ ನೀಡುವ ಜ್ಞಾನ, ಅರಿವುಗಳನ್ನು ಗ್ರಹಿಕೆಯ ಮೂಲಕ ವಿಸ್ತಿರಿಸಿಕೊಂಡಾಗ ಬದುಕಿನ ಸವಾಲುಗಳನ್ನು ಎದುರಿಸಲು ಸಾಧ್ಯ. ತಂದೆ, ತಾಯಿಗಳ ಜೊತೆ ವಿನಯದ ನಡವಳಿಕೆ, ಗುರುಗಳಿಗೆ ಗೌರವ, ಸಮಾಜದ ಇನ್ನಿತರರ ಜೊತೆ ಸ್ನೇಹಶೀಲತೆ ಇವೆಲ್ಲ ನಮ್ಮನ್ನು ಬೆಳೆಸುತ್ತದೆ ಎಂದರು.


ಅತಿಥಿಗಳಾಗಿ ಪಾಲ್ಗೊಂಡ ಶಿಕ್ಷಣ ಪ್ರಸಾರಕ ಸಮಿತಿ ಗೌರವ ಕಾರ್ಯದರ್ಶಿ ಕೆ.ಐ.ಹೆಗಡೆ ಮಾತನಾಡಿ ಶಿಕ್ಷಣ ಪಡೆಯಲು ಯಾವ ಸೌಕರ್ಯಗಳಿಲ್ಲದ ಕಷ್ಟದ ಸಂದರ್ಭದಲ್ಲಿ ಈ ತಾಲೂಕಿನಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿದವರು ಗಣೇಶ ಹೆಗಡೆ ದೊಡ್ಮನೆಯವರು. ಅವರು ರೂಪಿಸಿದ ಈ ಸಂಸ್ಥೆಯ ಕನಸನ್ನು ನನಸು ಮಾಡುವ ಜವಾಬ್ದಾರಿ ವಿದ್ಯಾರ್ಥಿ ಸಮೂಹ ಮತ್ತು ಪಾಲಕರ ಮೇಲಿದೆ ಎಂದರು. .ವಿದ್ಯಾರ್ಥಿ ಸಂಸತ್ ಪದಾಧಿಕಾರಿ ದರ್ಶನ ಚಕ್ರಸಾಲಿ ಉಪಸ್ಥಿತರಿದ್ದರು.
ಬಿಂದು ಗೌಡ ಸಂಗಡಿಗರು ಪ್ರಾರ್ಥಿಸಿದರು. ಪ್ರೊ| ವಿಘ್ನೇಶ್ವರ ಭಟ್ ಸ್ವಾಗತಿಸಿದರು.ವಿದ್ಯಾರ್ಥಿ ಸಂಸತ್ ಪದಾಧಿಕಾರಿ ಅದಿತಿ ಪೈ ವಾರ್ಷಿಕ ವರದಿ ವಾಚಿಸಿದರು. ಪ್ರೊ| ಶ್ರೀಶೈಲ ಕೊಂಡಗೂಳಿಕರ ವಂದಿಸಿದರು. ಮಾನಸಾ ಹೆಗಡೆ,ಅನೂಷಾ ಭಟ್ಟ ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *