ಬಾಹ್ಯ ಮತ್ತು ಆಂತರಿಕ ಸೌಂಧರ್ಯಗಳಿಂದ ಸಮಾಜಮುಖಿಗಳಾಗಿ

ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮ
ಸಿದ್ದಾಪುರ
ಶಿಕ್ಷಣಕ್ಕೆ ಬಹುದೊಡ್ಡ ಶಕ್ತಿಯಿದೆ. ಬಾಹ್ಯ ಮತ್ತು ಆಂತರಿಕ ಸೌಂಧರ್ಯ, ಶಕ್ತಿಗಳನ್ನು ಹೆಚ್ಚಿಕೊಳ್ಳಲು ಶಿಕ್ಷಣ ಸಹಕಾರಿಯಾಗುತ್ತದೆ ಎಂದು ಎಂಜಿಸಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ| ಸುರೇಶ ಎಸ್.ಗುತ್ತೀಕರ ಹೇಳಿದರು.
ಅವರು ಎಂಜಿಸಿ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ವಿದ್ಯಾರ್ಥಿ ಸಂಸತ್ ಸಹಯೋಗದಲ್ಲಿ ಆಯೋಜಿಸಿದ 2022-23ನೇ ಸಾಲಿನ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ಹಸಿವಿನ ಜೊತೆ ಕಲಿತ ಪಾಠ ಯಾವಾಗಲೂ ಜ್ಞಾಪಕದಲ್ಲಿರುತ್ತದೆ. ಆಳವಾದ ಅಧ್ಯಯನ, ಗ್ರಹಿಕೆಗಳಿಂದ ಶಿಕ್ಷ ಣವನ್ನು ಪಡೆದುಕೊಂಡಾಗ ಅದು ಬದುಕಿನುದ್ದಕ್ಕೂ ಇರುತ್ತದೆ ಎಂದರು.


ಅತಿಥಿಗಳಾಗಿ ಪಾಲ್ಗೊಂಡಿದ್ದ ಕಿರುತೆರೆ,ಚಲನಚಿತ್ರ ಹಾಗೂ ಭರತನಾಟ್ಯ ಕಲಾವಿದೆ ಭಾರತಿ ಹೆಗಡೆ ಮಾತನಾಡಿ ಶಿಕ್ಷಕರು ಧನಾತ್ಮಕ ಅಂಶಗಳಿಗೆ ಪ್ರೋತ್ಸಾಹಿಸಿ ಉತ್ತಮ ನಾಗರಿಕರಾಗುವಲ್ಲಿ ನಮ್ಮನ್ನು ರೂಪಿಸುತ್ತಾರೆ. ಯುವ ಜನಾಂಗ ನಮ್ಮ ತಳಪಾಯವನ್ನು ಮರೆಯಬಾರದು. ಉಳಿದವರಿಗೆ ಒಳ್ಳೆಯದನ್ನು ಮಾಡುವ ರೀತಿಯಲ್ಲಿ, ಪಾಲಕರಿಗೆ ಹೆಮ್ಮೆ ತರುವ ನಿಟ್ಟನಲ್ಲಿ ಸಮಾಜಮುಖಿಯಾಗಿ ಬೆಳೆಯಬೇಕು.ಈ ದಿನಗಳಲ್ಲಿ ಕನಸು,ಧ್ಯೇಯೋದ್ದೇಶಗಳು ಸಂಕುಚಿತಗೊಳ್ಳುತ್ತಿದ್ದು ದೊಡ್ಡ ಕನಸು, ದೊಡ್ಡ ವಿಚಾರಗಳು ಸಾಕಾರಗೊಳ್ಳಲು ಶ್ರಮವಹಿಸಬೇಕು ಎಂದರು.


ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಪತ್ರಕರ್ತ,ಬರೆಹಗಾರ ಗಂಗಾಧರ ಕೊಳಗಿ ಕೃಷಿ ಸಂಸ್ಕøತಿ ನಮಗೆ ಸಹನೆ, ಶ್ರಮ, ಭರವಸೆ ಮುಂತಾದ ಮೌಲಿಕ ಗುಣಗಳನ್ನು ಕಲಿಸುತ್ತದೆ. ಕೃಷಿಸಂಸ್ಕøತಿ ಮೂಲದಿಂದ ಬಂದ ನಾವು ಅವುಗಳ ಜೊತೆಗೆ ಶಿಕ್ಷಣ ನೀಡುವ ಜ್ಞಾನ, ಅರಿವುಗಳನ್ನು ಗ್ರಹಿಕೆಯ ಮೂಲಕ ವಿಸ್ತಿರಿಸಿಕೊಂಡಾಗ ಬದುಕಿನ ಸವಾಲುಗಳನ್ನು ಎದುರಿಸಲು ಸಾಧ್ಯ. ತಂದೆ, ತಾಯಿಗಳ ಜೊತೆ ವಿನಯದ ನಡವಳಿಕೆ, ಗುರುಗಳಿಗೆ ಗೌರವ, ಸಮಾಜದ ಇನ್ನಿತರರ ಜೊತೆ ಸ್ನೇಹಶೀಲತೆ ಇವೆಲ್ಲ ನಮ್ಮನ್ನು ಬೆಳೆಸುತ್ತದೆ ಎಂದರು.


ಅತಿಥಿಗಳಾಗಿ ಪಾಲ್ಗೊಂಡ ಶಿಕ್ಷಣ ಪ್ರಸಾರಕ ಸಮಿತಿ ಗೌರವ ಕಾರ್ಯದರ್ಶಿ ಕೆ.ಐ.ಹೆಗಡೆ ಮಾತನಾಡಿ ಶಿಕ್ಷಣ ಪಡೆಯಲು ಯಾವ ಸೌಕರ್ಯಗಳಿಲ್ಲದ ಕಷ್ಟದ ಸಂದರ್ಭದಲ್ಲಿ ಈ ತಾಲೂಕಿನಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿದವರು ಗಣೇಶ ಹೆಗಡೆ ದೊಡ್ಮನೆಯವರು. ಅವರು ರೂಪಿಸಿದ ಈ ಸಂಸ್ಥೆಯ ಕನಸನ್ನು ನನಸು ಮಾಡುವ ಜವಾಬ್ದಾರಿ ವಿದ್ಯಾರ್ಥಿ ಸಮೂಹ ಮತ್ತು ಪಾಲಕರ ಮೇಲಿದೆ ಎಂದರು. .ವಿದ್ಯಾರ್ಥಿ ಸಂಸತ್ ಪದಾಧಿಕಾರಿ ದರ್ಶನ ಚಕ್ರಸಾಲಿ ಉಪಸ್ಥಿತರಿದ್ದರು.
ಬಿಂದು ಗೌಡ ಸಂಗಡಿಗರು ಪ್ರಾರ್ಥಿಸಿದರು. ಪ್ರೊ| ವಿಘ್ನೇಶ್ವರ ಭಟ್ ಸ್ವಾಗತಿಸಿದರು.ವಿದ್ಯಾರ್ಥಿ ಸಂಸತ್ ಪದಾಧಿಕಾರಿ ಅದಿತಿ ಪೈ ವಾರ್ಷಿಕ ವರದಿ ವಾಚಿಸಿದರು. ಪ್ರೊ| ಶ್ರೀಶೈಲ ಕೊಂಡಗೂಳಿಕರ ವಂದಿಸಿದರು. ಮಾನಸಾ ಹೆಗಡೆ,ಅನೂಷಾ ಭಟ್ಟ ನಿರೂಪಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *