ಮಾಜಿ ಕೇಂದ್ರ ಸಚಿವ, 7 ಸಲ MP, ಹಿರಿಯ ಸಮಾಜವಾದಿ ನಾಯಕ ಶರದ್ ಯಾದವ್ (75) ಇನ್ನಿಲ್ಲ

ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯಾದವ್ 75ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದು, ತಂದೆಯ ನಿಧನದ ಸುದ್ದಿಯನ್ನು ಪುತ್ರಿ ಖಚಿತಪಡಿಸಿದ್ದಾರೆ.

ಜೆಡಿಯು ಸಂಸ್ಥಾಪಕ ಅಧ್ಯಕ್ಷರಾಗಿದ್ದ ಶರದ್ ಯಾದವ್ ನಿಧನ!

ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಇಂದು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು.

ನವದೆಹಲಿ: ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಇಂದು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು.

ಶರದ್ ಯಾದವ್ ತಮ್ಮ 75ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದು ಶರದ್ ಅವರ ನಿಧನದ ಸುದ್ದಿಯನ್ನು ಪುತ್ರಿ ಖಚಿತಪಡಿಸಿದ್ದಾರೆ. ಬಿಹಾರದ ರಾಜಕೀಯದಲ್ಲಿ ಪ್ರತ್ಯೇಕವಾದ ಗುರುತನ್ನು ಹೊಂದಿದ್ದ ಶರದ್ ಯಾದವ್ ಅವರ ಅಗಲಿಕೆ ಎಲ್ಲರನ್ನೂ ಕಂಗಾಲಾಗಿಸಿದೆ. ಅವರ ಸಮಾಜವಾದಿ ರಾಜಕೀಯವು ಅವರನ್ನು ಸಾರ್ವಜನಿಕರಲ್ಲಿ ಜನಪ್ರಿಯಗೊಳಿಸಿತು. ಆದರೆ ಇದೀಗ ಆ ಮಹಾನ್ ನಾಯಕ ಇಹಲೋಕಕ್ಕೆ ವಿದಾಯ ಹೇಳಿದ್ದಾರೆ.

ಶರದ್ ಯಾದವ್ ಅವರ ಪುತ್ರಿ ಸುಭಾಷಿಣಿ ತಮ್ಮ ತಂದೆಯ ನಿಧನಕ್ಕೆ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ. ತಂದೆ ಇನ್ನಿಲ್ಲ ಎಂದು ಬರೆದುಕೊಂಡಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಶರದ್ ಯಾದವ್ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ಫೋರ್ಟಿಸ್ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ. ಅವರಲ್ಲಿ ಸ್ಪಂದನೆ ಇರಲಿಲ್ಲ. ಪ್ರೋಟೋಕಾಲ್ ಪ್ರಕಾರ ಅವರಿಗೆ ಸಿಪಿಆರ್ ನೀಡಲಾಗಿತ್ತು. ಎಷ್ಟೇ ಪ್ರಯತ್ನಪಟ್ಟರು ಅವರನ್ನು ಉಳಿಸಲಾಗಲಿಲ್ಲ. ರಾತ್ರಿ 10.19ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದರು.

ಈ ಸಮಾಜವಾದಿ ನಾಯಕನ ಅಗಲಿಕೆಯಿಂದಾಗಿ ರಾಜಕೀಯ ಪಡಸಾಲೆಯಲ್ಲೂ ಶೋಕ ಆವರಿಸಿದೆ. ಶರದ್ ಯಾದವ್ ಅವರ ಅಗಲಿಕೆಯಿಂದ ನನಗೆ ಅತೀವ ದುಃಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಸುದೀರ್ಘ ರಾಜಕೀಯ ಜೀವನದಲ್ಲಿ ಅವರು ಸಂಸದರಾಗಿ ಮತ್ತು ಸಚಿವರಾಗಿ ವಿಶಿಷ್ಟ ಗುರುತನ್ನು ಹೊಂದಿದ್ದರು. ಲೋಹಿಯಾ ಅವರ ವಿಚಾರಗಳಿಂದ ಅವರು ಹೆಚ್ಚು ಪ್ರೇರಿತರಾಗಿದ್ದರು. ನಾನು ಅವರೊಂದಿಗೆ ನಡೆಸಿದ ಪ್ರತಿಯೊಂದು ಸಂಭಾಷಣೆಯನ್ನು ನಾನು ನೆನಪಿಸಿಕೊಳ್ಳುತ್ತೇನೆ. ಅವರ ಕುಟುಂಬಕ್ಕೆ ಸಂತಾಪ. ಓಂ ಶಾಂತಿ ಎಂದು ಬರೆದಿದ್ದಾರೆ.

ಶರದ್ ಯಾದವ್ ಅವರ ರಾಜಕೀಯ, ವೈಯಕ್ತಿಕ ಜೀವನ
1947ರಲ್ಲಿ ಮಧ್ಯಪ್ರದೇಶದ ಹೋಶಂಗಾಬಾದ್‌ನ ಹಳ್ಳಿಯಲ್ಲಿ ಶರದ್ ಯಾದವ್ ಜನಿಸಿದ್ದರು. 1971ರಲ್ಲಿ ಅವರು ತಮ್ಮ ಎಂಜಿನಿಯರಿಂಗ್ ಅಧ್ಯಯನವನ್ನು ಪೂರ್ಣಗೊಳಿಸಿದರು. ಡಾ. ರಾಮ್ ಮನೋಹರ್ ಲೋಹಿಯಾ ಅವರ ವಿಚಾರಗಳಿಂದ ಪ್ರೇರಿತರಾಗಿ ಸಕ್ರಿಯ ಯುವ ನಾಯಕರಾಗಿ, ಶರದ್ ಯಾದವ್ ಅವರು ಅನೇಕ ಚಳವಳಿಗಳಲ್ಲಿ ಭಾಗವಹಿಸಿದರು. 1969-70, 1972 ಮತ್ತು 1975 ರಲ್ಲಿ MISA ಅಡಿಯಲ್ಲಿ ಬಂಧಿತರಾಗಿದ್ದರು. ಶರದ್ ಯಾದವ್ 1974ರಲ್ಲಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದರು. ಅವರು ಮೊದಲು ಮಧ್ಯಪ್ರದೇಶದ ಜಬಲ್‌ಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ಇದು ಜೆಪಿ ಚಳವಳಿಯ ಸಮಯ ಮತ್ತು ಜೆಪಿ ಅವರು ಹಲ್ದಾರ್ ಕಿಸಾನ್ ಆಗಿ ಆಯ್ಕೆ ಮಾಡಿದ ಮೊದಲ ಅಭ್ಯರ್ಥಿಯಾಗಿದ್ದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *