ಕ್ಯಾನ್ಸರ್‌ ಗೇ ಡೋಂಟ್‌ ಕ್ಯಾರ್!… ಒಂದು ವೇಳೆ ಸಾಯುವ ಪರಿಸ್ಥಿತಿ ಬಂದರೆ ಸಾಯುತ್ತೇನೆ, ಆದರೆ…: ಸಂಜಯ್ ದತ್

ನನ್ನ ತಾಯಿ, ಪತ್ನಿ ಕ್ಯಾನ್ಸರ್ ಗೆ ಬಲಿ; ಒಂದು ವೇಳೆ ಸಾಯುವ ಪರಿಸ್ಥಿತಿ ಬಂದರೆ ಸಾಯುತ್ತೇನೆ, ಆದರೆ…: ಸಂಜಯ್ ದತ್

2020 ರಲ್ಲಿ ಶಂಶೇರಾ ಚಿತ್ರದ ಶೂಟಿಂಗ್ ವೇಳೆ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಗೊತ್ತಾಯಿತು. ಆದರೆ ಕ್ಯಾನ್ಸರ್ ಇರುವುದು ಗೊತ್ತಾಗುವ ವೇಳೆಗೆ ಸಂಜಯ್ ದತ್ ಕುಟುಂಬಸ್ಥರು ಯಾರೂ ಇರಲಿಲ್ಲ.

Sanjay dutt

2020 ರಲ್ಲಿ ಶಂಶೇರಾ ಚಿತ್ರದ ಶೂಟಿಂಗ್ ವೇಳೆ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಗೊತ್ತಾಯಿತು. ಆದರೆ ಕ್ಯಾನ್ಸರ್ ಇರುವುದು ಗೊತ್ತಾಗುವ ವೇಳೆಗೆ ಸಂಜಯ್ ದತ್ ಕುಟುಂಬಸ್ಥರು ಯಾರೂ ಇರಲಿಲ್ಲ.

ಕ್ಯಾನ್ಸರ್​ ಎಂಬ ಮಾರಣಾಂತಿಕ ರೋಗ ಸ್ಟೇಜ್ 4ರಲ್ಲಿದ್ದರೂ ಅದನ್ನು ಮೆಟ್ಟಿ ನಿಂತವರು ದತ್. ಇಂದು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಅದೆಷ್ಟೋ ರೋಗಿಗಳಿಗೆ ಸ್ಫೂರ್ತಿಯಾಗಿದ್ದಾರೆ.

ಇತ್ತೀಚೆಗೆ ಆಸ್ಪತ್ರೆ ಒಂದರಲ್ಲಿ ನಡೆದ ಕಾರ್ಯಕ್ರಮಕ್ಕೆ ದತ್​​ ತಮ್ಮ ಸಹೋದರಿ ಪ್ರಿಯಾ ದತ್​ ಜೊತೆ ಬಂದಿದ್ದರು. ಈ ಸಂದರ್ಭದಲ್ಲಿ ಸಂಜಯ್ ದತ್​, ಕ್ಯಾನ್ಸರ್​ ಜೊತೆಗಿನ ತಮ್ಮ ಹೋರಾಟದ ಹಾದಿಯನ್ನು ಎಲ್ಲರ ಮುಂದೆ ಬಿಚ್ಚಿಟ್ಟಿದ್ದಾರೆ. ಮಾತ್ರವಲ್ಲ, ಕೆಲವು ಶಾಕಿಂಗ್ ವಿಚಾರಗಳನ್ನೂ ಹೇಳಿಕೊಂಡಿದ್ದಾರೆ.

ನನಗೆ ಕ್ಯಾನ್ಸರ್ ಎಂಬ ಮಾರಣಾಂತಿಕ ಕಾಯಿಲೆ ಒಕ್ಕರಿಸಿರೋದು ಗೊತ್ತೇ ಇರಲಿಲ್ಲ. ಆಗಾಗ ವಿಪರೀತ ಬೆನ್ನು ನೋವು ಕಾಣಿಸಿಕೊಳ್ಳುತ್ತಿತ್ತು. ಅದಕ್ಕಾಗಿ ನಾನು ಹಾಟ್ ವಾಟರ್ ಬಾಟಲಿ, ನೋವು ನಿರೋಧಕ ಮಾತ್ರೆಗಳನ್ನು ಸೇವಿಸಲು ಶುರುಮಾಡಿದೆ.  ಉಸಿರಾಡೋದಕ್ಕೂ ಸಮಸ್ಯೆ ಆಯಿತು. ಹೀಗಾಗಿ ನನ್ನ ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಹೋದರು, ಅಲ್ಲಿ ತಪಾಸಣೆ ನಡೆಸಿದಾಗ ಸಂಬಂಧಿಕರಿಗೆ ವಿಚಾರ ತಿಳಿಯಿತು. ಆದರೆ, ನನಗೆ ಆ ಸಂದರ್ಭದಲ್ಲಿ ಕ್ಯಾನ್ಸರ್ ಇರುವ ಬಗ್ಗೆ ಹೇಳಿಯೇ ಇಲ್ಲ.

ನಾನು ಆಸ್ಪತ್ರೆಗೆ ಬಂದಾಗ ಕುಟುಂಬಸ್ಥರು ಯಾರೂ ನನ್ನ ಜೊತೆ ಇರಲಿಲ್ಲ. ನನ್ನ ಪತ್ನಿ, ನನ್ನ ಸಹೋದರಿ ನನ್ನ ಜೊತೆ ಇರಲಿಲ್ಲ. ನಾನೊಬ್ಬನೇ ಆಸ್ಪತ್ರೆಯಲ್ಲಿ ಇದ್ದೆ. ಬೆಡ್​​ ಮೇಲೆ ಮಲಗಿದ್ದಾಗ ಆಸ್ಪತ್ರೆ ಸಿಬ್ಬಂದಿಯೊಬ್ಬ ಇದ್ದಕ್ಕಿದ್ದಂತೆ ನನ್ನ ಬಳಿ ಬಂದು, ಏನೋ ಹೇಳಲು ಪ್ರಯತ್ನಿಸಿದರು. ಕೊನೆಗೆ ಅವರು ನನಗೆ (ದತ್) ಕ್ಯಾನ್ಸರ್​ ಇರುವ ಬಗ್ಗೆ ಹೇಳಿದರು.

ಈ ವೇಳೆ ನನ್ನ ಪತ್ನಿ ದುಬೈನಲ್ಲಿದ್ದಳು. ಹೀಗಾಗಿ ಸಹೋದರಿ ಪ್ರಿಯಾ ದತ್ ಆಸ್ಪತ್ರೆಗೆ ಬರಬೇಕಾಯಿತು. ಅವರು ನನಗೆ ಕ್ಯಾನ್ಸರ್ ಇದೆ ಎಂದಾಗ ನಾನು ದೃತಿಗೆಡಲಿಲ್ಲ.

ಯಾಕಂದ್ರೆ ನನ್ನ ಕುಟುಂಬಕ್ಕೆ ಕ್ಯಾನ್ಸರ್ ಇತಿಹಾಸ ಇದೆ. ನನ್ನ ಅಮ್ಮ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್​ಗೆ ಬಲಿಯಾದರು. ನನ್ನ ಪತ್ನಿ (ರಿಚಾ ಶರ್ಮಾ) ಮೆದುಳು ಕ್ಯಾನ್ಸರ್​​ನಿಂದ ತೀರಿಕೊಂಡರು. ಇದೇ ಕಾರಣಕ್ಕೆ ನಾನು ನಿರ್ಧರಿಸಿಬಿಟ್ಟೆ.. ಏನೆಂದರೆ ಕಿಮೋಥೆರಪಿ ಚಿಕಿತ್ಸೆಯನ್ನು ಪಡೆದುಕೊಳ್ಳಲ್ಲ ಎಂದು. ಒಂದು ವೇಳೆ ನಾನು ಸಾಯುವಂತಹ ಪರಿಸ್ಥಿತಿ ಬಂದರೆ ಸಾಯುತ್ತೇನೆ ಅಷ್ಟೇ..ಆದರೆ ನನಗೆ ಈ ಎಲ್ಲಾ ಚಿಕಿತ್ಸೆಗಳು ಬೇಡ ಅಂದುಬಿಟ್ಟೆ.

ಈ ಸಂದರ್ಭದಲ್ಲಿ ನನ್ನ ಕುಟುಂಬ ನನ್ನನ್ನು ಸುತ್ತುವರಿದು ಕಣ್ಣೀರಿಡುತ್ತಿತ್ತು. ಅದನ್ನು ನಾನು ಗಮನಿಸಿದೆ. ಒಂದು ದಿನ ರಾತ್ರಿ ನಾನು ನಿರ್ಧಾರ ಮಾಡಿದೆ. ಎಲ್ಲರೂ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಮತ್ತೆ ಅದರ ವಿರುದ್ಧ ಹೋರಾಟ ಮಾಡಿ ಗೆಲ್ಲುತ್ತಾರೆ.. ಅಂತೆಯೇ ನಾನು ಕ್ಯಾನ್ಸರ್​ಗೆ ತುತ್ತಾದೆ.. ಈಗ ನಾನು ಅದನ್ನು ಮೆಟ್ಟಿ ನಿಲ್ಲಬೇಕು ಎಂದು ನಿರ್ಧರಿಸಿದೆ. ನಾನು ಚೇತರಿಸಿಕೊಂಡ ಮೇಲೆ ರೋಗ ನಿರ್ಣಯದ ಹೋರಾಟದ ಬಗ್ಗೆ ಹೇಳಿಕೊಳ್ಳಲು ಹಿಂಜರಿಯುವುದಿಲ್ಲ ಎಂದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *