ಕ್ಯಾನ್ಸರ್‌ ಗೇ ಡೋಂಟ್‌ ಕ್ಯಾರ್!… ಒಂದು ವೇಳೆ ಸಾಯುವ ಪರಿಸ್ಥಿತಿ ಬಂದರೆ ಸಾಯುತ್ತೇನೆ, ಆದರೆ…: ಸಂಜಯ್ ದತ್

ನನ್ನ ತಾಯಿ, ಪತ್ನಿ ಕ್ಯಾನ್ಸರ್ ಗೆ ಬಲಿ; ಒಂದು ವೇಳೆ ಸಾಯುವ ಪರಿಸ್ಥಿತಿ ಬಂದರೆ ಸಾಯುತ್ತೇನೆ, ಆದರೆ…: ಸಂಜಯ್ ದತ್

2020 ರಲ್ಲಿ ಶಂಶೇರಾ ಚಿತ್ರದ ಶೂಟಿಂಗ್ ವೇಳೆ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಗೊತ್ತಾಯಿತು. ಆದರೆ ಕ್ಯಾನ್ಸರ್ ಇರುವುದು ಗೊತ್ತಾಗುವ ವೇಳೆಗೆ ಸಂಜಯ್ ದತ್ ಕುಟುಂಬಸ್ಥರು ಯಾರೂ ಇರಲಿಲ್ಲ.

Sanjay dutt

2020 ರಲ್ಲಿ ಶಂಶೇರಾ ಚಿತ್ರದ ಶೂಟಿಂಗ್ ವೇಳೆ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಗೊತ್ತಾಯಿತು. ಆದರೆ ಕ್ಯಾನ್ಸರ್ ಇರುವುದು ಗೊತ್ತಾಗುವ ವೇಳೆಗೆ ಸಂಜಯ್ ದತ್ ಕುಟುಂಬಸ್ಥರು ಯಾರೂ ಇರಲಿಲ್ಲ.

ಕ್ಯಾನ್ಸರ್​ ಎಂಬ ಮಾರಣಾಂತಿಕ ರೋಗ ಸ್ಟೇಜ್ 4ರಲ್ಲಿದ್ದರೂ ಅದನ್ನು ಮೆಟ್ಟಿ ನಿಂತವರು ದತ್. ಇಂದು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಅದೆಷ್ಟೋ ರೋಗಿಗಳಿಗೆ ಸ್ಫೂರ್ತಿಯಾಗಿದ್ದಾರೆ.

ಇತ್ತೀಚೆಗೆ ಆಸ್ಪತ್ರೆ ಒಂದರಲ್ಲಿ ನಡೆದ ಕಾರ್ಯಕ್ರಮಕ್ಕೆ ದತ್​​ ತಮ್ಮ ಸಹೋದರಿ ಪ್ರಿಯಾ ದತ್​ ಜೊತೆ ಬಂದಿದ್ದರು. ಈ ಸಂದರ್ಭದಲ್ಲಿ ಸಂಜಯ್ ದತ್​, ಕ್ಯಾನ್ಸರ್​ ಜೊತೆಗಿನ ತಮ್ಮ ಹೋರಾಟದ ಹಾದಿಯನ್ನು ಎಲ್ಲರ ಮುಂದೆ ಬಿಚ್ಚಿಟ್ಟಿದ್ದಾರೆ. ಮಾತ್ರವಲ್ಲ, ಕೆಲವು ಶಾಕಿಂಗ್ ವಿಚಾರಗಳನ್ನೂ ಹೇಳಿಕೊಂಡಿದ್ದಾರೆ.

ನನಗೆ ಕ್ಯಾನ್ಸರ್ ಎಂಬ ಮಾರಣಾಂತಿಕ ಕಾಯಿಲೆ ಒಕ್ಕರಿಸಿರೋದು ಗೊತ್ತೇ ಇರಲಿಲ್ಲ. ಆಗಾಗ ವಿಪರೀತ ಬೆನ್ನು ನೋವು ಕಾಣಿಸಿಕೊಳ್ಳುತ್ತಿತ್ತು. ಅದಕ್ಕಾಗಿ ನಾನು ಹಾಟ್ ವಾಟರ್ ಬಾಟಲಿ, ನೋವು ನಿರೋಧಕ ಮಾತ್ರೆಗಳನ್ನು ಸೇವಿಸಲು ಶುರುಮಾಡಿದೆ.  ಉಸಿರಾಡೋದಕ್ಕೂ ಸಮಸ್ಯೆ ಆಯಿತು. ಹೀಗಾಗಿ ನನ್ನ ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಹೋದರು, ಅಲ್ಲಿ ತಪಾಸಣೆ ನಡೆಸಿದಾಗ ಸಂಬಂಧಿಕರಿಗೆ ವಿಚಾರ ತಿಳಿಯಿತು. ಆದರೆ, ನನಗೆ ಆ ಸಂದರ್ಭದಲ್ಲಿ ಕ್ಯಾನ್ಸರ್ ಇರುವ ಬಗ್ಗೆ ಹೇಳಿಯೇ ಇಲ್ಲ.

ನಾನು ಆಸ್ಪತ್ರೆಗೆ ಬಂದಾಗ ಕುಟುಂಬಸ್ಥರು ಯಾರೂ ನನ್ನ ಜೊತೆ ಇರಲಿಲ್ಲ. ನನ್ನ ಪತ್ನಿ, ನನ್ನ ಸಹೋದರಿ ನನ್ನ ಜೊತೆ ಇರಲಿಲ್ಲ. ನಾನೊಬ್ಬನೇ ಆಸ್ಪತ್ರೆಯಲ್ಲಿ ಇದ್ದೆ. ಬೆಡ್​​ ಮೇಲೆ ಮಲಗಿದ್ದಾಗ ಆಸ್ಪತ್ರೆ ಸಿಬ್ಬಂದಿಯೊಬ್ಬ ಇದ್ದಕ್ಕಿದ್ದಂತೆ ನನ್ನ ಬಳಿ ಬಂದು, ಏನೋ ಹೇಳಲು ಪ್ರಯತ್ನಿಸಿದರು. ಕೊನೆಗೆ ಅವರು ನನಗೆ (ದತ್) ಕ್ಯಾನ್ಸರ್​ ಇರುವ ಬಗ್ಗೆ ಹೇಳಿದರು.

ಈ ವೇಳೆ ನನ್ನ ಪತ್ನಿ ದುಬೈನಲ್ಲಿದ್ದಳು. ಹೀಗಾಗಿ ಸಹೋದರಿ ಪ್ರಿಯಾ ದತ್ ಆಸ್ಪತ್ರೆಗೆ ಬರಬೇಕಾಯಿತು. ಅವರು ನನಗೆ ಕ್ಯಾನ್ಸರ್ ಇದೆ ಎಂದಾಗ ನಾನು ದೃತಿಗೆಡಲಿಲ್ಲ.

ಯಾಕಂದ್ರೆ ನನ್ನ ಕುಟುಂಬಕ್ಕೆ ಕ್ಯಾನ್ಸರ್ ಇತಿಹಾಸ ಇದೆ. ನನ್ನ ಅಮ್ಮ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್​ಗೆ ಬಲಿಯಾದರು. ನನ್ನ ಪತ್ನಿ (ರಿಚಾ ಶರ್ಮಾ) ಮೆದುಳು ಕ್ಯಾನ್ಸರ್​​ನಿಂದ ತೀರಿಕೊಂಡರು. ಇದೇ ಕಾರಣಕ್ಕೆ ನಾನು ನಿರ್ಧರಿಸಿಬಿಟ್ಟೆ.. ಏನೆಂದರೆ ಕಿಮೋಥೆರಪಿ ಚಿಕಿತ್ಸೆಯನ್ನು ಪಡೆದುಕೊಳ್ಳಲ್ಲ ಎಂದು. ಒಂದು ವೇಳೆ ನಾನು ಸಾಯುವಂತಹ ಪರಿಸ್ಥಿತಿ ಬಂದರೆ ಸಾಯುತ್ತೇನೆ ಅಷ್ಟೇ..ಆದರೆ ನನಗೆ ಈ ಎಲ್ಲಾ ಚಿಕಿತ್ಸೆಗಳು ಬೇಡ ಅಂದುಬಿಟ್ಟೆ.

ಈ ಸಂದರ್ಭದಲ್ಲಿ ನನ್ನ ಕುಟುಂಬ ನನ್ನನ್ನು ಸುತ್ತುವರಿದು ಕಣ್ಣೀರಿಡುತ್ತಿತ್ತು. ಅದನ್ನು ನಾನು ಗಮನಿಸಿದೆ. ಒಂದು ದಿನ ರಾತ್ರಿ ನಾನು ನಿರ್ಧಾರ ಮಾಡಿದೆ. ಎಲ್ಲರೂ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಮತ್ತೆ ಅದರ ವಿರುದ್ಧ ಹೋರಾಟ ಮಾಡಿ ಗೆಲ್ಲುತ್ತಾರೆ.. ಅಂತೆಯೇ ನಾನು ಕ್ಯಾನ್ಸರ್​ಗೆ ತುತ್ತಾದೆ.. ಈಗ ನಾನು ಅದನ್ನು ಮೆಟ್ಟಿ ನಿಲ್ಲಬೇಕು ಎಂದು ನಿರ್ಧರಿಸಿದೆ. ನಾನು ಚೇತರಿಸಿಕೊಂಡ ಮೇಲೆ ರೋಗ ನಿರ್ಣಯದ ಹೋರಾಟದ ಬಗ್ಗೆ ಹೇಳಿಕೊಳ್ಳಲು ಹಿಂಜರಿಯುವುದಿಲ್ಲ ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *