ಕ್ಯಾನ್ಸರ್‌ ಗೇ ಡೋಂಟ್‌ ಕ್ಯಾರ್!… ಒಂದು ವೇಳೆ ಸಾಯುವ ಪರಿಸ್ಥಿತಿ ಬಂದರೆ ಸಾಯುತ್ತೇನೆ, ಆದರೆ…: ಸಂಜಯ್ ದತ್

ನನ್ನ ತಾಯಿ, ಪತ್ನಿ ಕ್ಯಾನ್ಸರ್ ಗೆ ಬಲಿ; ಒಂದು ವೇಳೆ ಸಾಯುವ ಪರಿಸ್ಥಿತಿ ಬಂದರೆ ಸಾಯುತ್ತೇನೆ, ಆದರೆ…: ಸಂಜಯ್ ದತ್

2020 ರಲ್ಲಿ ಶಂಶೇರಾ ಚಿತ್ರದ ಶೂಟಿಂಗ್ ವೇಳೆ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಗೊತ್ತಾಯಿತು. ಆದರೆ ಕ್ಯಾನ್ಸರ್ ಇರುವುದು ಗೊತ್ತಾಗುವ ವೇಳೆಗೆ ಸಂಜಯ್ ದತ್ ಕುಟುಂಬಸ್ಥರು ಯಾರೂ ಇರಲಿಲ್ಲ.

Sanjay dutt

2020 ರಲ್ಲಿ ಶಂಶೇರಾ ಚಿತ್ರದ ಶೂಟಿಂಗ್ ವೇಳೆ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಗೊತ್ತಾಯಿತು. ಆದರೆ ಕ್ಯಾನ್ಸರ್ ಇರುವುದು ಗೊತ್ತಾಗುವ ವೇಳೆಗೆ ಸಂಜಯ್ ದತ್ ಕುಟುಂಬಸ್ಥರು ಯಾರೂ ಇರಲಿಲ್ಲ.

ಕ್ಯಾನ್ಸರ್​ ಎಂಬ ಮಾರಣಾಂತಿಕ ರೋಗ ಸ್ಟೇಜ್ 4ರಲ್ಲಿದ್ದರೂ ಅದನ್ನು ಮೆಟ್ಟಿ ನಿಂತವರು ದತ್. ಇಂದು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಅದೆಷ್ಟೋ ರೋಗಿಗಳಿಗೆ ಸ್ಫೂರ್ತಿಯಾಗಿದ್ದಾರೆ.

ಇತ್ತೀಚೆಗೆ ಆಸ್ಪತ್ರೆ ಒಂದರಲ್ಲಿ ನಡೆದ ಕಾರ್ಯಕ್ರಮಕ್ಕೆ ದತ್​​ ತಮ್ಮ ಸಹೋದರಿ ಪ್ರಿಯಾ ದತ್​ ಜೊತೆ ಬಂದಿದ್ದರು. ಈ ಸಂದರ್ಭದಲ್ಲಿ ಸಂಜಯ್ ದತ್​, ಕ್ಯಾನ್ಸರ್​ ಜೊತೆಗಿನ ತಮ್ಮ ಹೋರಾಟದ ಹಾದಿಯನ್ನು ಎಲ್ಲರ ಮುಂದೆ ಬಿಚ್ಚಿಟ್ಟಿದ್ದಾರೆ. ಮಾತ್ರವಲ್ಲ, ಕೆಲವು ಶಾಕಿಂಗ್ ವಿಚಾರಗಳನ್ನೂ ಹೇಳಿಕೊಂಡಿದ್ದಾರೆ.

ನನಗೆ ಕ್ಯಾನ್ಸರ್ ಎಂಬ ಮಾರಣಾಂತಿಕ ಕಾಯಿಲೆ ಒಕ್ಕರಿಸಿರೋದು ಗೊತ್ತೇ ಇರಲಿಲ್ಲ. ಆಗಾಗ ವಿಪರೀತ ಬೆನ್ನು ನೋವು ಕಾಣಿಸಿಕೊಳ್ಳುತ್ತಿತ್ತು. ಅದಕ್ಕಾಗಿ ನಾನು ಹಾಟ್ ವಾಟರ್ ಬಾಟಲಿ, ನೋವು ನಿರೋಧಕ ಮಾತ್ರೆಗಳನ್ನು ಸೇವಿಸಲು ಶುರುಮಾಡಿದೆ.  ಉಸಿರಾಡೋದಕ್ಕೂ ಸಮಸ್ಯೆ ಆಯಿತು. ಹೀಗಾಗಿ ನನ್ನ ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಹೋದರು, ಅಲ್ಲಿ ತಪಾಸಣೆ ನಡೆಸಿದಾಗ ಸಂಬಂಧಿಕರಿಗೆ ವಿಚಾರ ತಿಳಿಯಿತು. ಆದರೆ, ನನಗೆ ಆ ಸಂದರ್ಭದಲ್ಲಿ ಕ್ಯಾನ್ಸರ್ ಇರುವ ಬಗ್ಗೆ ಹೇಳಿಯೇ ಇಲ್ಲ.

ನಾನು ಆಸ್ಪತ್ರೆಗೆ ಬಂದಾಗ ಕುಟುಂಬಸ್ಥರು ಯಾರೂ ನನ್ನ ಜೊತೆ ಇರಲಿಲ್ಲ. ನನ್ನ ಪತ್ನಿ, ನನ್ನ ಸಹೋದರಿ ನನ್ನ ಜೊತೆ ಇರಲಿಲ್ಲ. ನಾನೊಬ್ಬನೇ ಆಸ್ಪತ್ರೆಯಲ್ಲಿ ಇದ್ದೆ. ಬೆಡ್​​ ಮೇಲೆ ಮಲಗಿದ್ದಾಗ ಆಸ್ಪತ್ರೆ ಸಿಬ್ಬಂದಿಯೊಬ್ಬ ಇದ್ದಕ್ಕಿದ್ದಂತೆ ನನ್ನ ಬಳಿ ಬಂದು, ಏನೋ ಹೇಳಲು ಪ್ರಯತ್ನಿಸಿದರು. ಕೊನೆಗೆ ಅವರು ನನಗೆ (ದತ್) ಕ್ಯಾನ್ಸರ್​ ಇರುವ ಬಗ್ಗೆ ಹೇಳಿದರು.

ಈ ವೇಳೆ ನನ್ನ ಪತ್ನಿ ದುಬೈನಲ್ಲಿದ್ದಳು. ಹೀಗಾಗಿ ಸಹೋದರಿ ಪ್ರಿಯಾ ದತ್ ಆಸ್ಪತ್ರೆಗೆ ಬರಬೇಕಾಯಿತು. ಅವರು ನನಗೆ ಕ್ಯಾನ್ಸರ್ ಇದೆ ಎಂದಾಗ ನಾನು ದೃತಿಗೆಡಲಿಲ್ಲ.

ಯಾಕಂದ್ರೆ ನನ್ನ ಕುಟುಂಬಕ್ಕೆ ಕ್ಯಾನ್ಸರ್ ಇತಿಹಾಸ ಇದೆ. ನನ್ನ ಅಮ್ಮ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್​ಗೆ ಬಲಿಯಾದರು. ನನ್ನ ಪತ್ನಿ (ರಿಚಾ ಶರ್ಮಾ) ಮೆದುಳು ಕ್ಯಾನ್ಸರ್​​ನಿಂದ ತೀರಿಕೊಂಡರು. ಇದೇ ಕಾರಣಕ್ಕೆ ನಾನು ನಿರ್ಧರಿಸಿಬಿಟ್ಟೆ.. ಏನೆಂದರೆ ಕಿಮೋಥೆರಪಿ ಚಿಕಿತ್ಸೆಯನ್ನು ಪಡೆದುಕೊಳ್ಳಲ್ಲ ಎಂದು. ಒಂದು ವೇಳೆ ನಾನು ಸಾಯುವಂತಹ ಪರಿಸ್ಥಿತಿ ಬಂದರೆ ಸಾಯುತ್ತೇನೆ ಅಷ್ಟೇ..ಆದರೆ ನನಗೆ ಈ ಎಲ್ಲಾ ಚಿಕಿತ್ಸೆಗಳು ಬೇಡ ಅಂದುಬಿಟ್ಟೆ.

ಈ ಸಂದರ್ಭದಲ್ಲಿ ನನ್ನ ಕುಟುಂಬ ನನ್ನನ್ನು ಸುತ್ತುವರಿದು ಕಣ್ಣೀರಿಡುತ್ತಿತ್ತು. ಅದನ್ನು ನಾನು ಗಮನಿಸಿದೆ. ಒಂದು ದಿನ ರಾತ್ರಿ ನಾನು ನಿರ್ಧಾರ ಮಾಡಿದೆ. ಎಲ್ಲರೂ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಮತ್ತೆ ಅದರ ವಿರುದ್ಧ ಹೋರಾಟ ಮಾಡಿ ಗೆಲ್ಲುತ್ತಾರೆ.. ಅಂತೆಯೇ ನಾನು ಕ್ಯಾನ್ಸರ್​ಗೆ ತುತ್ತಾದೆ.. ಈಗ ನಾನು ಅದನ್ನು ಮೆಟ್ಟಿ ನಿಲ್ಲಬೇಕು ಎಂದು ನಿರ್ಧರಿಸಿದೆ. ನಾನು ಚೇತರಿಸಿಕೊಂಡ ಮೇಲೆ ರೋಗ ನಿರ್ಣಯದ ಹೋರಾಟದ ಬಗ್ಗೆ ಹೇಳಿಕೊಳ್ಳಲು ಹಿಂಜರಿಯುವುದಿಲ್ಲ ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *