![](https://i0.wp.com/samajamukhi.net/wp-content/uploads/2023/01/IMG-20230102-WA0094.jpg?resize=820%2C500&ssl=1)
![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕ,ರಾಜ್ಯ ವಿಧಾನಸಭಾ ಅಧಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರದಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ರಾಜ್ಯ ಜೆ.ಡಿ.ಎಸ್. ಯುವಮುಖಂಡ ಇಲಿಯಾಸ್ ಇಬ್ರಾಹಿಂ ಸಾಬ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಈ ಆರೋಪ ಮಾಡಿರುವ ಇಲಿಯಾಸ್ ರಸ್ತೆ ಅಗಲೀಕರಣಕ್ಕಾಗಿ ಶಿರಸಿ-ಸಿದ್ಧಾಪುರಗಳಲ್ಲಿ ಮನೆ,ಅಂಗಡಿ ಮುಂಗಟ್ಟುಗಳನ್ನು ಒಡೆಯಲಾಗಿದೆ. ಆದರೆ ಶಿರಸಿಯಲ್ಲಿ ಬಾಧಿತರಿಗೆ ಪರಿಹಾರ ನೀಡಿ ಸಿದ್ಧಾಪುರದಲ್ಲಿ ಪರಿಹಾರ ನೀಡಿಲ್ಲ. ಒಂದೇ ಕ್ಷೇತ್ರದ ಎರಡು ತಾಲೂಕುಗಳಲ್ಲಿ ಒಬ್ಬರಿಗೊಂದು ಇನ್ನೊಬ್ಬರಿಗೊಂದು ನ್ಯಾಯ ಮಾಡಿರುವ ಕ್ರಮ ತಮಗೆ ಶೋಭೆ ತರುವುದಿಲ್ಲ ಎಂದು ಟೀಕಿಸಿದ್ದಾರೆ.
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)