

ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕ,ರಾಜ್ಯ ವಿಧಾನಸಭಾ ಅಧಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರದಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ರಾಜ್ಯ ಜೆ.ಡಿ.ಎಸ್. ಯುವಮುಖಂಡ ಇಲಿಯಾಸ್ ಇಬ್ರಾಹಿಂ ಸಾಬ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಈ ಆರೋಪ ಮಾಡಿರುವ ಇಲಿಯಾಸ್ ರಸ್ತೆ ಅಗಲೀಕರಣಕ್ಕಾಗಿ ಶಿರಸಿ-ಸಿದ್ಧಾಪುರಗಳಲ್ಲಿ ಮನೆ,ಅಂಗಡಿ ಮುಂಗಟ್ಟುಗಳನ್ನು ಒಡೆಯಲಾಗಿದೆ. ಆದರೆ ಶಿರಸಿಯಲ್ಲಿ ಬಾಧಿತರಿಗೆ ಪರಿಹಾರ ನೀಡಿ ಸಿದ್ಧಾಪುರದಲ್ಲಿ ಪರಿಹಾರ ನೀಡಿಲ್ಲ. ಒಂದೇ ಕ್ಷೇತ್ರದ ಎರಡು ತಾಲೂಕುಗಳಲ್ಲಿ ಒಬ್ಬರಿಗೊಂದು ಇನ್ನೊಬ್ಬರಿಗೊಂದು ನ್ಯಾಯ ಮಾಡಿರುವ ಕ್ರಮ ತಮಗೆ ಶೋಭೆ ತರುವುದಿಲ್ಲ ಎಂದು ಟೀಕಿಸಿದ್ದಾರೆ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
