ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ.. ಹೀಗೇಕೆ ಇಲಿಯಾಸ್‌ ಪ್ರಶ್ನೆ

ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕ,ರಾಜ್ಯ ವಿಧಾನಸಭಾ ಅಧಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರದಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ರಾಜ್ಯ ಜೆ.ಡಿ.ಎಸ್.‌ ಯುವಮುಖಂಡ ಇಲಿಯಾಸ್‌ ಇಬ್ರಾಹಿಂ ಸಾಬ್‌ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಈ ಆರೋಪ ಮಾಡಿರುವ ಇಲಿಯಾಸ್‌ ರಸ್ತೆ ಅಗಲೀಕರಣಕ್ಕಾಗಿ ಶಿರಸಿ-ಸಿದ್ಧಾಪುರಗಳಲ್ಲಿ ಮನೆ,ಅಂಗಡಿ ಮುಂಗಟ್ಟುಗಳನ್ನು ಒಡೆಯಲಾಗಿದೆ. ಆದರೆ ಶಿರಸಿಯಲ್ಲಿ ಬಾಧಿತರಿಗೆ ಪರಿಹಾರ ನೀಡಿ ಸಿದ್ಧಾಪುರದಲ್ಲಿ ಪರಿಹಾರ ನೀಡಿಲ್ಲ. ಒಂದೇ ಕ್ಷೇತ್ರದ ಎರಡು ತಾಲೂಕುಗಳಲ್ಲಿ ಒಬ್ಬರಿಗೊಂದು ಇನ್ನೊಬ್ಬರಿಗೊಂದು ನ್ಯಾಯ ಮಾಡಿರುವ ಕ್ರಮ ತಮಗೆ ಶೋಭೆ ತರುವುದಿಲ್ಲ ಎಂದು ಟೀಕಿಸಿದ್ದಾರೆ.