ಕೇಂದ್ರ ಬಜೆಟ್ 2023: ಆದಾಯ ತೆರಿಗೆ ವಿನಾಯಿತಿ ಮಿತಿ ರೂ. 7 ಲಕ್ಷಕ್ಕೆ ಹೆಚ್ಚಳ, ಆದಾಯ ತೆರಿಗೆಗೆ ಸಂಬಂಧಿಸಿದ 5 ಮುಖ್ಯ ಘೋಷಣೆಗಳು ಇಲ್ಲಿವೆ….

ಕೇಂದ್ರ  ಬಜೆಟ್ 2023ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೂತನ ತೆರಿಗೆ ಸ್ಲಾಬ್ ಗಳನ್ನು ವಿವರಿಸಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷರೂ ಗೆ ಹೆಚ್ಚಳ ಮಾಡಿದ್ದಾರೆ.

nirmala-sitharaman-tax-slab

ನವದೆಹಲಿ: ಕೇಂದ್ರ  ಬಜೆಟ್ 2023ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೂತನ ತೆರಿಗೆ ಸ್ಲಾಬ್ ಗಳನ್ನು ವಿವರಿಸಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷರೂ ಗೆ ಹೆಚ್ಚಳ ಮಾಡಿದ್ದಾರೆ.

ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ್ದು, ಹೊಸ ತೆರಿಗೆ ಪದ್ಧತಿಯಲ್ಲಿ ವಾರ್ಷಿಕ  7 ಲಕ್ಷ ರೂ ವರೆಗೆ ತೆರಿಗೆ ವಿನಾಯ್ತಿ ಘೋಷಿಸಿದ್ದು ಮಧ್ಯಮ ವರ್ಗದಲ್ಲಿ ಹರ್ಷ ತಂದಿದೆ. 

ಆದಾಯ ತೆರಿಗೆಗೆ ಸಂಬಂಧಿಸಿದ 5 ಮುಖ್ಯ ಘೋಷಣೆಗಳು
ಆದಾಯ ತೆರಿಗೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 5 ಮಹತ್ವದ ಕ್ರಮಗಳನ್ನು ಘೋಷಿಸಿದ್ದು ಅವುಗಳ ವಿವರ ಇಂತಿದೆ.

1) ವಿನಾಯ್ತಿ: 7 ಲಕ್ಷ ರೂ ವರೆಗೆ ಆದಾಯ ತೆರಿಗೆ ವಿನಾಯ್ತಿ

2) ಟ್ಯಾಕ್ಸ್​ ಸ್ಲ್ಯಾಬ್​ಗಳು: 
ಹೊಸ ತೆರಿಗೆ ಪದ್ಧತಿಯಲ್ಲಿ ಟ್ಯಾಕ್ಸ್​ ಸ್ಲ್ಯಾಬ್​ಗಳನ್ನು (ತೆರಿಗೆ ಹಂತಗಳು) 5ಕ್ಕೆ ಮಿತಗೊಳಿಸಲಾಗಿದ್ದು, 3 ಲಕ್ಷ ರೂ ದಿಂದ ತೆರಿಗೆ ಹಂತ ಆರಂಭವಾಗಲಿದೆ. ಹೊಸ ತೆರಿಗೆ ಪದ್ಧತಿ (New Tax Regime) ಆದಾಯ ತೆರಿಗೆ ವಿನಾಯ್ತಿ ಮೊತ್ತವನ್ನು ₹ 5 ಲಕ್ಷದಿಂದ ₹ 7 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ತೆರಿಗೆ ವಿವರಗಳನ್ನು ನೀಡಿದರು. ವಾರ್ಷಿಕ ₹ 9 ಲಕ್ಷ ವೇತನ ಪಡೆಯುವವರು ₹ 45,000 ತೆರಿಗೆ ಕಟ್ಟುತ್ತಾರೆ ಎಂದು ಸಚಿವರು ಹೇಳಿದರು.

ಹೊಸ ತೆರಿಗೆ ಪದ್ಧತಿಯೇ ಡಿಫಾಲ್ಟ್
ಹೊಸ ತೆರಿಗೆ ಪದ್ಧತಿಯೇ ಇನ್ನು ಮುಂದೆ ಡಿಫಾಲ್ಟ್ ತೆರಿಗೆ ಪದ್ಧತಿ ಆಗಿರುತ್ತದೆ. ಆದರೆ ಹಳೆಯ ತೆರಿಗೆ ಪದ್ಧತಿಯೂ ಚಾಲ್ತಿಯಲ್ಲಿರುತ್ತದೆ. ತೆರಿಗೆ ಸ್ಲ್ಯಾಬ್​ಗಳನ್ನು 6 ಹಂತಗಳಿಂದ 5 ಹಂತಗಳಿಗೆ ಬದಲಿಸಲಾಗಿದೆ. ಹೊಸ ತೆರಿಗೆ ಪದ್ಧತಿ ಆರಿಸಿಕೊಳ್ಳುವವರಿಗೆ  7 ಲಕ್ಷ ರೂ ವರೆಗಿನ ತೆರಿಗೆ ವಿನಾಯ್ತಿ ಲಭ್ಯವಾಗಲಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಅತಿ ಹೆಚ್ಚು ಸರ್ಚಾರ್ಜ್ ದರವನ್ನು 37% ರಿಂದ 25% ಕ್ಕೆ ಇಳಿಸಲು ಸರ್ಕಾರ ಪ್ರಸ್ತಾಪಿಸಿದೆ.

ಹೊಸ ತೆರಿಗೆ ದರಗಳು
1. 3 ಲಕ್ಷ ರೂವರೆಗೆ – ತೆರಿಗೆ ಇಲ್ಲ

2. 3 ಲಕ್ಷ ರೂ ಯಿಂದ 6 ಲಕ್ಷ ರೂ ವರೆಗೆ – ಶೇ 5ರಷ್ಟು ತೆರಿಗೆ

3. 6 ರಿಂದ 9 ಲಕ್ಷ ರೂವರೆಗೆ – ಶೇ 10 ರಷ್ಟು ತೆರಿಗೆ

4. 9 ರಿಂದ 12 ಲಕ್ಷ ರೂ ವರೆಗೆ– ಶೇ 15ರಷ್ಟು ತೆರಿಗೆ

5.12 ರಿಂದ 15 ಲಕ್ಷ ರೂವರೆಗೆ – ಶೇ 20ರಷ್ಟು ತೆರಿಗೆ

6. 15 ಲಕ್ಷಕ್ಕಿಂತ ಮೇಲ್ಪಟ್ಟ ಆದಾಯಕ್ಕೆ ಶೇ 30ರಷ್ಟು ತೆರಿಗೆ ಹೇರಲಾಗಿದೆ.

3) ಸ್ಟಾಂಡರ್ಡ್​ ಡಿಡಕ್ಷನ್: 15.5 ಲಕ್ಷ ರೂ ಅಥವಾ ಅದಕ್ಕೂ ಹೆಚ್ಚಿನ ಆದಾಯವನ್ನು ವೇತನದಿಂದ ಪಡೆಯುವವರಿಗೆ 52,500 ರೂ ಸ್ಟಾಂಡರ್ಡ್​ ಡಿಡಕ್ಷನ್ ಸೌಲಭ್ಯ ಸಿಗಲಿದೆ.

4) ಗರಿಷ್ಠ ತೆರಿಗೆ ಇಳಿಕೆ:
ಈವರೆಗೆ ಗರಿಷ್ಠ ತೆರಿಗೆಯ ಮೇಲೆ ಶೇ 37ರಷ್ಟು ಸರ್​ಚಾರ್ಜ್ ವಿಧಿಸಲಾಗುತ್ತಿತ್ತು. ಈ ಪ್ರಮಾಣವನ್ನು ಹೊಸ ತೆರಿಗೆ ನೀತಿಯಡಿ ಶೇ 25ಕ್ಕೆ ಇಳಿಸಲಾಗಿದೆ. ಈ ಬೆಳವಣಿಗೆಯೊಂದಿಗೆ ದೇಶದಲ್ಲಿರುವ ಗರಿಷ್ಠ ತೆರಿಗೆ ದರವು ಶೇ 39ಕ್ಕೆ ಮಿತಗೊಳ್ಳಲಿದೆ. ಪ್ರಸ್ತುತ ಅತಿ ಹೆಚ್ಚು ವೈಯಕ್ತಿಕ ತೆರಿಗೆ ದರ 42% ವಿಶ್ವದಲ್ಲೇ ಅತ್ಯಧಿಕವಾಗಿದೆ. ಅತಿ ಹೆಚ್ಚು ಆದಾಯ ಗಳಿಸುವವರಿಗೆ ಸರ್ಚಾರ್ಜ್ ನ್ನು 37% ರಿಂದ 25% ಕ್ಕೆ ಇಳಿಸಲಾಗಿದೆ. ಗರಿಷ್ಠ ತೆರಿಗೆ ಪ್ರಮಾಣವನ್ನು ಶೇಕಡಾ 39ಕ್ಕೆ ಇಳಿಸಲಾಗಿದೆ. “ನಮ್ಮ ದೇಶದಲ್ಲಿ ಅತ್ಯಧಿಕ ತೆರಿಗೆ ದರವು 42.74 ಶೇಕಡಾ. ಇದು ವಿಶ್ವದಲ್ಲೇ ಅತಿ ಹೆಚ್ಚು ಎನ್ನಲಾಗಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಅತ್ಯಧಿಕ ಸರ್ಚಾರ್ಜ್ ದರವನ್ನು ಶೇಕಡಾ 37 ರಿಂದ ಶೇಕಡಾ 25 ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ. ಇದು ಗರಿಷ್ಠ ತೆರಿಗೆ ದರವನ್ನು ಶೇಕಡಾ 39ಕ್ಕೆ ಇಳಿಸಲು ಕಾರಣವಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

5) ಲೀವ್ ಎನ್​ಕ್ಯಾಶ್​ಮೆಂಟ್ (ರಜೆ ನಗದೀಕರಣ): 
ನಿವೃತ್ತರಾದಾಗ ಸಿಗುವ ರಜೆ ನಗದೀಕರಣ (ಲೀವ್ ಎನ್​ಕ್ಯಾಶ್​ಮೆಂಟ್) ಸೌಲಭ್ಯದ ಮೇಲೆ ಈವರೆಗೆ  3 ಲಕ್ಷ ರೂಗೆ ಮಾತ್ರ ತೆರಿಗೆ ವಿನಾಯ್ತಿ ಇತ್ತು. ಈ ಮೊತ್ತವನ್ನು  25 ಲಕ್ಷ ರೂಗೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
 
ವಿಮಾ ಪಾಲಿಸಿಗಳು, ಆಸ್ತಿ ಮಾರಾಟದ ಮೇಲೆ ತೆರಿಗೆ
ದೊಡ್ಡಮೊತ್ತದ ವಿಮಾ ಪಾಲಿಸಿಗಳಿಗೆ ಇನ್ನು ಮುಂದೆ ತೆರಿಗೆ ವಿಧಿಸಲಾಗುವುದು. 10 ಕೋಟಿ ರೂಗೂ ಅಧಿಕ ಮೊತ್ತದ ಆಸ್ತಿ ಮಾರಾಟದಿಂದ ಸಿಗುವ ಲಾಭದ ಮೇಲೆ (ಕ್ಯಾಪಿಟನ್ ಗೇನ್) ತೆರಿಗೆ ವಿಧಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಅಂಚೆ ಕಚೇರಿಗಳ ಮೂಲಕ ನಿರ್ವಹಿಸುವ ಮಾಸಿಕ ಆದಾಯ ಯೋಜನೆಯ (Monthly income scheme – MIS) ಹೂಡಿಕೆ ಮಿತಿಯನ್ನು 9 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಈ ಮೊದಲು 4.5 ಲಕ್ಷ ಹೂಡಿಕೆಗೆ ಮಾತ್ರ ಅವಕಾಶವಿತ್ತು. ಸಣ್ಣ ಉಳಿತಾಯ ಯೋಜನೆಗಳಲ್ಲಿ ಹಿರಿಯ ನಾಗರಿಕರ ಹೂಡಿಕೆಗೆ ಇದ್ದ 15 ಲಕ್ಷದ ಮಿತಿಯನ್ನು ಹಾಲಿ ವರ್ಷದಿಂದ  30 ಲಕ್ಷ ರೂಗೆ ಕೇಂದ್ರ ಸರ್ಕಾರವು ವಿಸ್ತರಿಸಿದೆ. ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ವಿಶೇಷ ಉಳಿತಾಯ ಯೋಜನೆ ಪ್ರಕಟಿಸಿದೆ. 2 ವರ್ಷಗಳ ಅವಧಿಯ ಈ ಯೋಜನೆಗೆ ಶೇಕಡಾ 7.5 ಬಡ್ಡಿ ನಿಗದಿಪಡಿಸಲಾಗಿದೆ. ಸುಲಭವಾಗಿ ಐಟಿ ರಿಟರ್ನ್ಸ್ ಸಲ್ಲಿಸಲು ಸರ್ಕಾರ ಹೊಸ ಆದಾಯ ತೆರಿಗೆ ರಿಟರ್ನ್ (ITR) ಫಾರ್ಮ್‌ಗಳನ್ನು ಪರಿಚಯಿಸಿದೆ ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *