


ಸಿದ್ದಾಪುರ: ಫೆ. 5ರ ಮಾಘ ಶುದ್ಧ ಹುಣ್ಣಿಮೆಯ ಭಾನುವಾರ ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಿಯ ಮಹಾರಥೋತ್ಸವ ನಡೆಯಲಿದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜುಗೋಡು ಹೇಳಿದರು.

ಅವರು ಗುರುವಾರ ದೇವಾಲಯದ ಆವಾರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಮಾಹಿತಿ ನೀಡಿದರು.
ಮಹಾರಥೋತ್ಸವದ ಅಂಗವಾಗಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು ಫೆ. 2ರ ಗುರುವಾರದಿಂದ ಆರಂಭವಾಗಿದ್ದು, ಪ್ರಾರ್ಥನೆ, ದೇವನಾಂದಿ, ಸಿಂಹಯಾಗ, ಕೌತುಕ ಬಂಧನ, ಮೃತ್ತಿಕಾಹರಣ, ಧ್ವಜಾರೋಹಣ, ಅಂಕುರಾರ್ಪಣ, ಭೇರಿ ತಾಡನ, ಯಂತ್ರೋತ್ಸವ ಕಾರ್ಯಕ್ರಮಗಳು ನಡೆದಿವೆ.
ಫೆ.3ರ ಶುಕ್ರವಾರ ಸಿಂಹ ಯಂತ್ರೋತ್ಸವ ನಡೆಯಲಿದೆ. ಫೆ. 4ರ ಶನಿವಾರ ಪುಷ್ಪಮಂಜರಿ ಮತ್ತು ಡೋಲಾ ಯಂತ್ರೋತ್ಸವ ಕಾರ್ಯಕ್ರಮಗಳು ಜರುಗಲಿದೆ. ಫೆ. 5ರ ಭಾನುವಾರ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಮಹಾ ರಥೋತ್ಸವದ ನಂತರ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು ಫೆ. ಆರು ಮತ್ತು ಏಳರಂದು ನಡೆಯಲಿದ್ದು, ಕುಂಕುಮೋತ್ಸವ ಅವಭೃತ ತೀರ್ಥ ಸ್ನಾನ, ಪೂರ್ಣಾಹುತಿ ಪೂರ್ಣ ಕುಂಭಾಭಿಷೇಕ, ಅಂಕುರ ಪ್ರಸಾದ ವಿತರಣೆ ಕಾರ್ಯಕ್ರಮಗಳು ನಡೆಯಲಿವೆ. ಲೋಕಕಲ್ಯಾಣಕ್ಕಾಗಿ ಜರುಗುವ ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.
ಆಡಳಿತ ಮಂಡಳಿಯ ಉಪಾಧ್ಯಕ್ಷ ಚಂದ್ರಕಾಂತ ಹೆಗಡೆ, ಸದಸ್ಯರುಗಳಾದ ಗಣಪತಿ ಹೆಗಡೆ, ಪ್ರಸನ್ನ ಹೆಗಡೆ, ವಿಶ್ವೇಶ್ವರ ಹೆಗಡೆ, ಜಯಪ್ರಕಾಶ್ ಭಟ್, ದತ್ತಾತ್ರೇಯ ಭಟ್, ಗಣಪತಿ ಹೆಗಡೆ ಅಂಚಿನಮನೆ ಇದ್ದರು.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






