ಎಂ. ಜಿ. ನಾಯ್ಕ ರಿಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ


ಸಿದ್ದಾಪುರ: ೫: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ಮೈಸೂರು ರಾಜ್ಯದ ನಿಕಟ ಪೂರ್ವ ಸಿ.ಆರ್.ಪಿ ಗಳಿಗೆ ನೀಡುವ ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಸಿದ್ದಾಪುರ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಮಂಜುನಾಥ ಜಿ. ನಾಯ್ಕ ( ಎಮ್.ಜಿ.ನಾಯ್ಕ) ಆಯ್ಕೆಯಾಗಿದ್ದು ಸರಕಾರಿ ಶಾಲಾ ಬಡವಿದ್ಯಾರ್ಥಿಗಳ ಬಗ್ಗೆ ಅವರ ಸಾಮಾಜಿಕ ಕಾಳಜಿ, ಬದ್ಧತೆಯನ್ನು ಅರಸಿಬಂದ ಪ್ರಶಸ್ತಿಯಾಗಿದೆ ಇದು. ಅವರು ಬೆಂಗಳೂರಿನ ಯಲಹಂಕ ದಲ್ಲಿ ರಾಜ್ಯಾಧ್ಯಕ್ಷ ಪಿ. ಮಹೇಶ್ ಅವರ ನೇತೃತ್ವದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು.


ಎಮ್.ಜಿ. ನಾಯ್ಕ ಈ ಹಿಂದೆ ಬಿಳಗಿ ಕ್ಲಸ್ಟರ್ ಸಂಪನ್ಮೂಲ ಶಿಕ್ಷಕರಾಗಿದ್ದಾಗ ಎಲ್ಲಾ ಶಾಲೆಗಳ ಶಿಕ್ಷಕರು ,ವಿದ್ಯಾರ್ಥಿಗಳ ಪ್ರೀತಿ ವಿಶ್ವಾಸ ಗೆದ್ದಿದ್ದಲ್ಲದೆ ಕರೋನ ಗೃಹಬಂಧನ ಸಂಕಷ್ಟದ ಸಮಯದಲ್ಲಿ ಎಲ್ಲಾ ಶಾಲೆಗಳ ಶಿಕ್ಷಕರನ್ನು ಆನ್ಲೈನ್ ಮೂಲಕ ಸಂಪರ್ಕಿಸಿ ಮನೆಯಿಂದಲೇ ಶಿಕ್ಷಕರಿಗೆ ಕಲಿಕೋಪಕರಣಗಳ ತಯಾರಿಕಾ ಸ್ಫರ್ಧೆ ಏರ್ಪಡಿಸಿದ ಜಿಲ್ಲೆಯ ಏಕೈಕ ಕ್ಲಸ್ಟರ್ ಎಂದು ಹೆಸರಾಗಿದ್ದರು. ಬಿಳಗಿ ಕ್ಲಸ್ಟರ್ ನ ಯೂಟ್ಯೂಬ್ ಚಾನೆಲ್ ತೆರೆದು ಅದರಲ್ಲಿ ತಮ್ಮ ಕ್ಲಸ್ಟರ್ ಶಿಕ್ಷಕರು ತಯಾರಿಸಿದ ಕಲಿಕಾ ಸಾಮಗ್ರಿಗಳ ವಿಡಿಯೋ ಗಳನ್ನು ಅಪ್ಲೋಡ್ ಮಾಡಿ ಎಲ್ಲರೂ ವೀಕ್ಷಿಸುವಂತೆ ಮಾಡಿದ್ದಾರೆ.

ನಲಿಕಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ ಸಾವಿರಾರು ಶಿಕ್ಷಕರಿಗೆ ತರಬೇತಿಯನ್ನು ನೀಡಿರುತ್ತಾರೆ. ಇತ್ತೀಚೆಗೆ ಅವರು ತಮ್ಮದೇ ನೇತೃತ್ವದಲ್ಲಿ ತಾಲೂಕಿನ ಆಸಕ್ತ ಶಿಕ್ಷಕರ ನೆರವಿನಿಂದ ‘ಧ್ವನಿ’ ಹೆಸರಿನ ಸ್ವಯಂ ಸೇವಕ ಸಂಘ ತೆರೆದು ತಾಲೂಕಿನ ಅನಾಥ, ಏಕಪಾಲಕ, ಕಡು ಬಡತನದಿಂದ ಬಂದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಛತ್ರಿ, ಮಾಸಿಕ ಧನಸಹಾಯ ಇತ್ಯಾದಿ ಹತ್ತಾರು ಮಾನವೀಯ ಕಾಯಕದಲ್ಲಿ ತೊಡಗಿದ್ದಾರೆ.
ಇವರ ಮಾನವೀಯ, ಶೈಕ್ಷಣಿಕ ಕಾಳಜಿಯನ್ನು ಗುರುತಿಸಿ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ಇಂದು ದಿನಾಂಕ ೫-೧-೨೦೨೩ ರಂದು ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿರುವುದು ಪ್ರಶಸ್ತಿಯ ಗರಿಮೆಯನ್ನು ಹೆಚ್ಚಿಸಿದೆ.


ಪ್ರಶಸ್ತಿ ಪುರಸ್ಕೃತ ಎಮ್.ಜಿ. ನಾಯ್ಕ ರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯ ಕುಮಾರ್, ಶಿಕ್ಷಕರ ಪ್ರತಿಭಾ ಪರಿಷತ್ತಿನ ರಾಜ್ಯ ಸಹಕಾರ ಸಮಿತಿಯ ಸದಸ್ಯ ಗೋಪಾಲ ನಾಯ್ಕ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ಮಾಜಿ ಅಧ್ಯಕ್ಷ ಎಮ್.ಕೆ. ನಾಯ್ಕ ಕಡಕೇರಿ, ಶಿಕ್ಷಕರ ಪ್ರತಿಭಾ ಪರಿಷತ್ತಿನ ತಾಲೂಕು ಅಧ್ಯಕ್ಷೆ ರೀಟಾ ಡಿಸೋಜ, ಹಾಗೂ ನೂರಾರು ಶಿಕ್ಷಕರು,, ಎಸ್.ಡಿ.ಎಮ್.ಸಿ ಅಧ್ಯಕ್ಷ ನಾಗರಾಜ ಅಂಬಿಗ, ಸದಸ್ಯರು, ಪಾಲಕರು ಅಭಿನಂದಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *