ಮಾವಿನಗುಂಡಿಯಲ್ಲಿ ವಾರ್ಷಿಕ ಬಹುಮಾನ ವಿತರಣೆ ಹಾಗೂ ಸನ್ಮಾನ ಮತ್ತು ಹಸ್ತಪತ್ರಿಕೆ “ಮಕರಂದ” ಬಿಡುಗಡೆ ..

 ಮಾವಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು.

 ಹಲಗೇರಿ ಗ್ರಾ. ಪಂ. ಸದಸ್ಯ ಜಯಂತ ಈರಪ್ಪ ನಾಯ್ಕ  ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 ಊರಿನ ಹಿರಿಯ ನಾಗರಿಕರಾದ  ಗಣಪಮ್ಮ ಗೌರ್ಯ ನಾಯ್ಕ ಮಸ್ತಾನೆ (ಎಡಳ್ಳಿ ) ಹಾಗೂ ನಿವೃತ್ತ ಸೈನಿಕರಾದ ಶಾಲೆಯ ಪೂರ್ವ ವಿದ್ಯಾರ್ಥಿ  ನಾಗಪ್ಪ ನಾರಾಯಣ ನಾಯ್ಕ ಮಸ್ತಾನೆ ಇವರನ್ನು ಊರ ನಾಗರಿಕರ ಪರವಾಗಿ ಎಸ್.ಡಿ.ಎಮ್.ಸಿ.ಯವರು ಶಾಲು ಹೊದೆಸಿ, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಸನ್ಮಾನಿಸಿದರು.



 ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ಪ್ರಸ್ತುತ ಮುಖ್ಯಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ  ನಾಗರಾಜ ಎನ್. ಪ್ರಭುರನ್ನು ಈ ಶಾಲೆಯಲ್ಲಿ ಸತತ 25 ನೇ ವರ್ಷದ ಸೇವೆ ಸಲ್ಲಿಸುತ್ತಿರುವ ಬಗ್ಗೆ ಈ ವರೆಗೆ ಅವರ ಬಳಿ ಶಿಕ್ಷಣವನ್ನು ಪಡೆದ ಎಲ್ಲ ವಿದ್ಯಾರ್ಥಿಗಳು ಗೌರವಪೂರ್ವಕವಾಗಿ ಸನ್ಮಾನಿಸಿದರು. ಶಾಲು ಹೊದೆಸಿ, ಪೇಟಾ ತೊಡಿಸಿ, ನೆನಪಿನ ಕಾಣಿಕೆ, ಸನ್ಮಾನ ಪತ್ರ, ಫಲ ತಾಂಬೂಲ ನೀಡಿ ತಮಗೆ ಉತ್ತಮ ಶಿಕ್ಷಣ ನೀಡಿ, ಶಿಸ್ತನ್ನು ಕಲಿಸಿದ ಗುರುವಿನ ಬಗ್ಗೆ ಇರುವ ಗೌರವ ಮತ್ತು ಅಭಿಮಾನದ ದ್ಯೋತಕವಾಗಿ ಚಿನ್ನದುಂಗುರವನ್ನು ತೊಡಿಸಿ ಸಂಭ್ರಮಿಸಿದರು. ಹಾಗೂ ಎಲ್ಲ ವಿದ್ಯಾರ್ಥಿಗಳ ಭಾವಚಿತ್ರಗಳನ್ನು ಒಳಗೊಂಡ ತಮ್ಮ ಗುರುವಿನ ಭಾವಚಿತ್ರವನ್ನು ಸ್ಮರಣಿಕೆಯಾಗಿ ನೀಡಿದರು.



 ಕರ್ನಾಟಕ ಪಬ್ಲಿಕ್ ಶಾಲೆ ಹಲಗೇರಿ ಪ್ರಾಚಾರ್ಯ ದಿನೇಶ ಕೆ.  ಶಾಲಾ ಮಕ್ಕಳ  ಹಸ್ತಪತ್ರಿಕೆ "ಮಕರಂದ" ವನ್ನು ಬಿಡುಗಡೆಗೊಳಿಸಿದರು. ತಾಲೂಕಾ ಪ್ರಾಧಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ  ಹಲಗೇರಿ ಕ್ಲಸ್ಟರ್ ನ ಸಿ.ಆರ್.ಪಿ.  ಭಾಸ್ಕರ ಮಡಿವಾಳರವರು ಬಹುಮಾನ ವಿತರಣೆಯನ್ನು ನೆರವೇರಿಸಿದರು. 

 ಊರಿನ ಹಿರಿಯರಾಗಿರುವ  ಜಯಪ್ರಕಾಶ ಆರ್. ಹೆಗಡೆ ಹಾಗೂ ಪೂರ್ವ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ  ಅಲೆಕ್ಸ್ ಇನಾಸ ಫರ್ನಾ ಂಡಿಸ್  ಉಪಸ್ಥಿತರಿದ್ದರು. ನಿವೃತ್ತ  ಮುಖ್ಯಾಧ್ಯಾಪಕರಾದ  ಭಾರತಿ ಪಿ. ನಾಯ್ಕ ಹಾಗೂ ತಾಯಂದಿರ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಭಾಗೀರಥಿ ವಿ. ನಾಯ್ಕ  ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಿವೃತ್ತ ಸೈನಿಕರೂ ಹಾಗೂ ಶಾಲೆಯ ಪೂರ್ವ ವಿದ್ಯಾರ್ಥಿಯೂ ಅದ  ನಾಗಪ್ಪ ನಾರಾಯಣ ನಾಯ್ಕ ಮುಸ್ತಾನೆ ಹಾಗೂ ಊರಿನ ಹಿರಿಯ ನಾಗರಿಕರಾದ  ಗಣಪಮ್ಮ ಗೌರ್ಯ ನಾಯ್ಕ ರವರು ಸನ್ಮಾನಿತರಾಗಿ ಉಪಸ್ಥಿತರಿದ್ದರು. ಎಸ್.ಡಿ.ಎಮ್.ಸಿ.ಯ ಅಧ್ಯಕ್ಷ ಲೋಕೇಶ ತಿಮ್ಮ ನಾಯ್ಕ  ಸಭಾಧ್ಯಕ್ಷತೆ ವಹಿಸಿದ್ದರು.

 ಅಂದು ಬೆಳಿಗ್ಗೆ ಊರ ನಾಗರಿಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅವುಗಳಲ್ಲಿ ಪುರುಷರ ವಾಲಿಬಾಲ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಗಳು ವಿಶೇಷ ಗಮನ ಸೆಳೆದವು.

 ಗಣ್ಯರು ಸಂದರ್ಭೋಚಿತವಾಗಿ ಮಾತನಾಡಿದರು. ಪ್ರಾಚಾರ್ಯ  ದಿನೇಶ ಕೆ.  ಸನ್ಮಾನಿತರ ಬಗ್ಗೆ ಅಭಿನಂದನಾ ನುಡಿಗಳನ್ನಾಡಿದರು. ಸನ್ಮಾನಿತರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.

 ಪಾಲಕರು, ಎಸ್.ಡಿ.ಎಮ್.ಸಿ.ಯವರು, ಪೂರ್ವ ವಿದ್ಯಾರ್ಥಿಗಳು, ಊರ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

 ಶಾಲಾ ಮಕ್ಕಳ ಪ್ರಾರ್ಥನೆ ಹಾಗೂ ಸ್ವಾಗತ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಮುಖ್ಯ ಶಿಕ್ಷಕ ನಾಗರಾಜ ಎನ್. ಪ್ರಭು ರವರು ಸರ್ವರಿಗೂ ಆತ್ಮೀಯವಾಗಿ ಸ್ವಾಗತವನ್ನು ಕೋರಿದರು. ಹಾಗೂ 2022 - 23 ನೇ ಸಾಲಿನ ವಾರ್ಷಿಕ ವರದಿಯನ್ನು ವಾಚಿಸಿದರು. ಶಿಕ್ಷಕ ಅಶೋಕ ಹೆಗಡೆ ಹಾಗೂ ಕು. ಮಮತಾ ನಾಯ್ಕ ರವರು ಕಾರ್ಯಕ್ರಮವನ್ನು ನಿರೂಪಿಸಿದರು.   ಸುಧಾ ಆರ್. ನಾಯಕರವರು ಎಲ್ಲರಿಗೂ ಆಭಾರವನ್ನು ಮನ್ನಿಸಿದರು. ಪೂರ್ವ ವಿದ್ಯಾಥಿ೯ಗಳು ಸಕ್ರಿಯವಾಗಿ ಪಾಲ್ಗೊಂಡು ಸಹಕರಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *