ಅಡಿಕೆ ಆಮದು ಗಣನೀಯ ಹೆಚ್ಚಳ: ರೈತರ ಹಿತಾಸಕ್ತಿ ಕಾಪಾಡಿ; ಡಬಲ್ ಎಂಜಿನ್ ಸರ್ಕಾರಕ್ಕೆ ಜೆಡಿಎಸ್ ಒತ್ತಾಯ

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಅಡಿಕೆ ಆಮದು ಮಾಡಿಕೊಳ್ಳಲಾಗಿರುವ ಸಂಗತಿ ವರದಿಯಾಗಿದ್ದು, ಕೇಂದ್ರ ಹಾಗೂ ರಾಜ್ಯ ಬಿಜೆಪಿ  ಸರ್ಕಾರ ನಮ್ಮ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.

Areca_nut1

ಬೆಂಗಳೂರು: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಅಡಿಕೆ ಆಮದು ಮಾಡಿಕೊಳ್ಳಲಾಗಿರುವ ಸಂಗತಿ ವರದಿಯಾಗಿದ್ದು, ಕೇಂದ್ರ ಹಾಗೂ ರಾಜ್ಯ ಬಿಜೆಪಿ  ಸರ್ಕಾರ ನಮ್ಮ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, 2022-23ರ ಆರ್ಥಿಕ ವರ್ಷ ನವೆಂಬರ್ ಅಂತ್ಯದವರೆಗೆ‌ 61,450 ಟನ್ ಅಡಿಕೆ ಆಮದಾಗಿದೆ. ಸ್ವತಃ ವಾಣಿಜ್ಯ ಮತ್ತು ಕೈಗಾರಿಕಾ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಎಸ್ ಪಟೇಲ್ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ಹೊರಬಿದ್ದಿದೆ. ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ಅತ್ಯುತ್ತಮ ಗುಣಮಟ್ಟದ ಅಡಿಕೆ ಬೆಳೆಗೆ ಹೆಸರುವಾಸಿ ಎಂದು ಹೇಳಿದೆ. 

https://imasdk.googleapis.com/js/core/bridge3.555.2_en.html#goog_1928579829
https://imasdk.googleapis.com/js/core/bridge3.555.2_en.html#goog_1928579831
https://imasdk.googleapis.com/js/core/bridge3.555.2_en.html#goog_1928579833

ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅಡಿಕೆಯನ್ನು ಹೆಚ್ಚು ಬೆಳೆದರೆ ಉಳಿಗಾಲವಿಲ್ಲ ಎಂದು ಹೇಳಿದ್ದರ ಹಿಂದಿನ ಅಸಲಿ ಕಥೆ ಈಗ ಬಹಿರಂಗವಾಗಿದೆ. ನಮ್ಮಲ್ಲಿಯೇ ಉತ್ಕೃಷ್ಟ ಮಟ್ಟದ ಅಡಿಕೆಯನ್ನು ಹೇರಳವಾಗಿ ಬೆಳೆಯುವಾಗ ಅನ್ಯದೇಶಗಳಿಂದ ಆಮದು ಮಾಡಿಕೊಳ್ಳುವುದು ಎಷ್ಟು ಸರಿ? ಎಂದು ಪ್ರಶ್ನಿಸಿದೆ.

ಅಡಿಕೆ ಆಮದು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ಸರ್ಕಾರವನ್ನು ಪ್ರಶ್ನಿಸಿದ್ದು, ಈ ಪ್ರಮಾಣದಲ್ಲಿ ಗಣನೀಯವಾಗಿ ಆಮದು ಏರಿಕೆ ಕಂಡಿರುವುದು ಎಚ್ಚರಿಕೆಯ ಗಂಟೆ. ಕೇಂದ್ರ ಹಾಗೂ ರಾಜ್ಯದ ಡಬಲ್ ಎಂಜಿನ್ ಸರ್ಕಾರ ತಡ ಮಾಡದೆ ಕೆಲವು ಗಟ್ಟಿಯಾದ ನಿರ್ಧಾರ ತೆಗೆದುಕೊಳ್ಳಬೇಕು, ಇದು ನಮ್ಮ ರಾಜ್ಯ- ದೇಶದ ಅಡಿಕೆ ಬೆಳೆಗಾರರ ರಕ್ಷಣೆಗೆ ಅಗತ್ಯ ಎಂದು ಹೇಳಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *