ಸಿದ್ಧಾಪುರ ಉತ್ಸವ,ಸ್ಥಳಿಯರಿಗೆ ನಾನಾ ಸ್ಫರ್ಧೆಗಳು

ಸಿದ್ದಾಪುರ: ಪಟ್ಟಣದ ನೆಹರು ಮೈದಾನದಲ್ಲಿ ಫೆ. 17 ರಿಂದ 19 ರವರೆಗೆ ನಡೆಯಲಿರುವ ಸಿದ್ದಾಪುರ ಉತ್ಸವದಲ್ಲಿ ತಾಲೂಕಿನ ಸ್ಥಳೀಯರಿಗೆ ಸಮಿತಿ ವತಿಯಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಿದ್ದಾಪುರ ಉತ್ಸವ ಸಮಿತಿಯ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜೀಬೈಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶಿ ಕ್ರೀಡಾಕೂಟ ಸ್ಪರ್ಧೆ

ಉತ್ಸವದ ಪ್ರಯುಕ್ತ ಪಟ್ಟಣದ ನೆಹರು ಮೈದಾನದಲ್ಲಿ
ಫೆ.17 ರಂದು ಬೆಳಗ್ಗೆ 9:30 ರಿಂದ ನಡೆಯಲಿರುವ ಕ್ರೀಡಾಕೂಟದಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆ ಇರಲಿದ್ದು, ಸ್ಪರ್ಧೆಗೆ ಪ್ರತಿ ಗ್ರಾಮ ಪಂಚಾಯತನಿಂದ 7 ಜನರ ಒಂದು ಪುರುಷ ಹಾಗೂ ಒಂದು ಮಹಿಳಾ ತಂಡಗಳಿಗೆ ಅವಕಾಶವಿರುತ್ತದೆ. ಅಲ್ಲದೆ ವೈಯಕ್ತಿಕ ಸ್ಪರ್ಧೆಯಲ್ಲಿ ರಸ್ತೆ ಓಟ (ಕ್ರಾಸ್ ಕಂಟ್ರಿ), ಮಹಿಳೆಯರಿಗೆ ಸಂಗೀತ ಖುರ್ಚಿ ಸ್ಪರ್ಧೆ, ಪುರುಷರಿಗೆ ಗೋಣಿಚೀಲ ಓಟದ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ಧಿಗಳಿಗೆ ಸೂಕ್ತ ಬಹುಮಾನ ನೀಡಲಾಗುತ್ತದೆ. ಆಸಕ್ತರು ಫೆ.15 ರೊಳಗೆ ತಮ್ಮ ಹೆಸರನ್ನು ಮಾಧವ ಎಮ್. ನಾಯ್ಕ – 9449360803 ರನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು.

ರಂಗೋಲಿ ಸ್ಪರ್ಧೆ

ಪಟ್ಟಣದ ಶಿಕ್ಷಣ ಪ್ರಸಾರಕ ಸಮಿತಿಯ ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಫೆ.17ರಂದು ಮಧ್ಯಾಹ್ನ 3.30 ರಿಂದ ಸಂಜೆ 5 ಗಂಟೆಯವರೆಗೆ ರಂಗೋಲಿ ಸ್ಪರ್ಧೆಯನ್ನು ಸಮಿತಿ ವತಿಯಿಂದ ತಾಲೂಕಿನ ಸ್ಥಳೀಯರಿಗೆ ಆಯೋಜಿಸಿದ್ದು, ಸ್ಪರ್ಧೆಯಲ್ಲಿ ಚುಕ್ಕಿ ರಂಗೋಲಿ ಬಿಡಿಸಲು ಮಾತ್ರ ಅವಕಾಶವಿದ್ದು, ರಂಗೋಲಿ ಬಿಡಿಸಲು ಬೇಕಾದ ಸಾಮಗ್ರಿಗಳನ್ನು ಸ್ಪರ್ಧಿಗಳೇ ತರಬೇಕಾಗಿದೆ. ನಿಗದಿಪಡಿಸಲಾದ ಸಮಯದ ಅವಧಿಯು 1 ಗಂಟೆ 30 ನಿಮಿಷವಿರಲಿದ್ದು ಸ್ಪರ್ಧಿಗಳು 30 ನಿಮಿಷ ಮೊದಲು ಸ್ಥಳದಲ್ಲಿ ಹಾಜರಿರಬೇಕು. ಒದಗಿಸಿದ ಜಾಗವು 4 * 4 ಅಡಿ ಅಳತೆಯಾಗಿರುತ್ತದೆ. ಅಲ್ಲದೇ ಯಾವುದೇ ಸಂದರ್ಭದಲ್ಲಿ ಹೆಚ್ಚುವರಿ ಸಮಯವನ್ನು ನೀಡಲಾಗುವುದಿಲ್ಲ. ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ಧಿಗಳಿಗೆ ಸೂಕ್ತ ಬಹುಮಾನ ನೀಡಲಾಗುತ್ತಿದ್ದು, ಹೆಸರು ನೋಂದಾಯಿಸಲು ಫೆ.15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಾಯಿಸಲು ರಾಘವೇಂದ್ರ ರಾಯ್ಕರ್ 9845297298, ಶಂಕರಮೂರ್ತಿ ನಾಯ್ಕ 8861212683, ಚಂದ್ರಕಲಾ ನಾಯ್ಕ 8123680716, ಸುಮನಾ ಕಾಮತ್ 9945190466, ರಾಧಿಕಾ ಕಾನಗೋಡ 9945105200 ಇವರನ್ನು ಸಂಪರ್ಕಿಸಬಹುದು.

ಅಂಗಡಿ ಮುಂಗಟ್ಟುಗಳಿಗೆ ಅವಕಾಶ

3 ದಿನಗಳ ಕಾಲ ನಡೆಯಲಿರುವ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಲಿರುವ ಹಿನ್ನೆಲೆಯಲ್ಲಿ ವಿವಿಧ ಬಗೆಯ ಖಾದ್ಯ, ವಸ್ತ್ರದ ಮಳಿಗೆ, ಮಕ್ಕಳ ಆಟಿಕೆ ಸಾಮಾನುಗಳು ಸೇರಿದಂತೆ ವಿವಿಧ ಬಗೆಯ ಅಂಗಡಿ ಮುಂಗಟ್ಟುಗಳು ಹಾಕುವವರಿಗೆ ಸ್ಥಳಾವಕಾಶ ನೀಡಲಾಗುತ್ತಿದ್ದು, ಅಂಗಡಿ ಮುಂಗಟ್ಟುಗಳಿಗೆ ಸ್ಥಳ ಬೇಕಾದಲ್ಲಿ ಸಮಿತಿಯ ಕೋಶಾಧ್ಯಕ್ಷ ವಿನಯ ಹೊನ್ನೆಗುಂಡಿ 9606730284 ಇವರನ್ನು ಸಂಪರ್ಕಿಸುವಂತೆ ಅವರು ತಿಳಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *