ಹಳಿಯಾಳ: ೧೪೪ ಜಾರಿ

ಹಳಿಯಾಳ: ದೇವಸ್ಥಾನದ ಸುತ್ತಲಿನ ಪಾದಚಾರಿ ಮಾರ್ಗದ ನಿರ್ಮಾಣ ವಿರೋಧಿಸಿ ಪ್ರತಿಭಟನೆ, ಸ್ಥಳದಲ್ಲಿ ಸೆಕ್ಷನ್ 144 ಜಾರಿ

ಹಳಿಯಾಳ ಗ್ರಾಮದ ಆರಾಧ್ಯ ದೈವವಾದ ಗ್ರಾಮ್ಯ ದೇವಿ ದೇವಸ್ಥಾನದ ಸುತ್ತ ಪಾದಚಾರಿ ಮಾರ್ಗ ನಿರ್ಮಿಸುತ್ತಿರುವುದನ್ನು ತಡೆಯುವಂತೆ ಆಗ್ರಹಿಸಿ ನೂರಾರು ಜನರು ಬೀದಿಗಿಳಿದ ಸಂದರ್ಭ ಸುರಕ್ಷತಾ ಕ್ರಮವಾಗಿ 144 ಸೆಕ್ಷನ್‌ ಜಾರಿ, ಹಳಿಯಾಳ ಪ್ರತಿಭಟನೆಗೆ ಸಾಕ್ಷಿಯಾಯಿತು.

The pavement around Gramya Devi temple being razed in Haliyal taluk of Uttara Kannada district on Friday

ಹಳಿಯಾಳ: ಹಳಿಯಾಳ ಗ್ರಾಮದ ಆರಾಧ್ಯ ದೈವವಾದ ಗ್ರಾಮ್ಯ ದೇವಿ ದೇವಸ್ಥಾನದ ಸುತ್ತ ಪಾದಚಾರಿ ಮಾರ್ಗ ನಿರ್ಮಿಸುತ್ತಿರುವುದನ್ನು ತಡೆಯುವಂತೆ ಆಗ್ರಹಿಸಿ ನೂರಾರು ಜನರು ಬೀದಿಗಿಳಿದ ಸಂದರ್ಭ ಸುರಕ್ಷತಾ ಕ್ರಮವಾಗಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಭಕ್ತರಿಂದ ಪ್ರತಿಭಟನೆ ನಡೆಯಿತು.

ದೇವಸ್ಥಾನದ ಸುತ್ತ ಪಾದಚಾರಿ ಮಾರ್ಗ ನಿರ್ಮಿಸಲು ಪುರಸಭೆ ಅಧಿಕಾರಿಗಳು ಮುಂದಾಗಿದ್ದು, ಪಟ್ಟಣದ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿದರು. ಎಲ್ಲರೂ ದೇವಸ್ಥಾನದಲ್ಲಿ ಜಮಾಯಿಸಿ ದೇವಿಗೆ ಪೂಜೆ ಸಲ್ಲಿಸಿದರು ಮತ್ತು ಬಳಿಕ ರಸ್ತೆಗಿಳಿದು ಪಾಲಿಕೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ದೇಗುಲದ ಸುತ್ತ ನಿರ್ಮಿಸುತ್ತಿರುವ ಪಾದಚಾರಿ ಮಾರ್ಗವನ್ನು ತೆರವುಗೊಳಿಸಬೇಕು ಹಾಗೂ ದೇವಸ್ಥಾನದ ಸುತ್ತ ಇರುವ ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಮೆರವಣಿಗೆ ನಡೆಸಿದರು. 

‘ಶತಮಾನಗಳಿಂದ ಇಲ್ಲಿ ಪೂಜೆ ಮಾಡುತ್ತಾ ಬಂದಿದ್ದೇವೆ. ವಿಜಯದಶಮಿಯಂದು ಇಲ್ಲಿನ ಬನ್ನಿ ಮರವು ನಮಗೆ ಪವಿತ್ರವಾಗಿದೆ. ಕೆಲವರ ಪ್ರಚೋದನೆ ಮೇರೆಗೆ ತೆರವುಗೊಳಿಸಲು ಯತ್ನಿಸುತ್ತಿದ್ದಾರೆ’ ಎಂದು ಗ್ರಾಮ್ಯದೇವಿ ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷ ಮಂಗೇಶ್ ದೇಶಪಾಂಡೆ ಹೇಳಿದರು.

ನಂತರ ಪ್ರತಿಭಟನಾಕಾರರು ಮಣ್ಣು ತೆಗೆಯುವ ಯಂತ್ರಗಳನ್ನು ತಂದು ಪಾದಚಾರಿ ಮಾರ್ಗವನ್ನು ತೆಗೆದರು. ಪೊಲೀಸರು ಮಧ್ಯ ಪ್ರವೇಶಿಸಿದಾಗ ಪ್ರತಿಭಟನಾಕಾರರೊಂದಿಗೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಾಕಾರರು ಪಾದಚಾರಿ ಮಾರ್ಗವನ್ನು ತೆರವುಗೊಳಿಸಿ ಅಲ್ಲಿ ಕೇಸರಿ ಧ್ವಜವನ್ನು ಅಳವಡಿಸಿ ಅದನ್ನು ತೆಗೆಯದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. 

ಸ್ಥಳಕ್ಕಾಗಮಿಸಿದ ಬಿಜೆಪಿ ಮುಖಂಡ, ಮಾಜಿ ಶಾಸಕ ಸುನೀಲ್ ಹೆಗಡೆ, ಯಾರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದೀರಿ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಅವರು, ಆರಾಧನೆಯ ಸ್ಥಳವು ಬೇರೆ ಧರ್ಮಕ್ಕೆ ಸೇರಿದ್ದರೆ, ನೀವು ಅದೇ ರೀತಿ ಮಾಡುತ್ತೀದ್ದೀರಾ. ಒತ್ತುವರಿ ತೆರವು ಮಾಡಿ ನಮ್ಮ ದೇವಸ್ಥಾನದ ಜಮೀನು ವಾಪಸ್ ನೀಡಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ ಎಂದರು.

ಪ್ರತಿಭಟನಾಕಾರರು ದಿಡೀರ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ ಎಂದು ಉತ್ತರ ಕನ್ನಡ ಎಸ್‌ಪಿ ಎನ್ ವಿಷ್ಣುವರ್ಧನ್ ಹೇಳಿದ್ದಾರೆ. ‘ನಾವು ನಮ್ಮ ಸಿದ್ಧತೆಗಳನ್ನು ಮಾಡಿದ್ದೇವೆ ಮತ್ತು ಯಾವುದೇ ಅಹಿತಕರ ಘಟನೆ ನಡೆದಿಲ್ಲ’ ಡಿಎಆರ್ ಮತ್ತು ಸ್ಥಳೀಯ ಪೊಲೀಸರ ಎರಡು ಘಟಕಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *