ಫೆ.೧೮ ತರಳಿ,೨೫ ಹಿರೇಹದ್ದಗಳಲ್ಲಿ ಕಾರ್ಯಕ್ರಮಗಳು

ಸಿದ್ದಾಪುರ: ತಾಲೂಕಿನ ಶ್ರೀ ಸಂಸ್ಥಾನ ತರಳೀಮಠದಲ್ಲಿ ಫೆಬ್ರವರಿ 18 ರ ಮಹಾಶಿವರಾತ್ರಿಯಂದು 35ನೇ ವರ್ಷದ 1008 ಶ್ರೀ ಸತ್ಯನಾರಾಯಣ ವ್ರತ ಕಲಶ ಪೂಜೆ ನಡೆಯಲಿದೆ ಎಂದು ವ್ರತ ಕಮಿಟಿ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಬೆಳಿಗ್ಗೆ 8 ರಿಂದ 10 ಗಂಟೆವರೆಗೆ ಕಳಸಗಳಲ್ಲಿ ಜಲ ತುಂಬುವುದು, 10 ಗಂಟೆಯಿಂದ ಪೂಜಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಕಥಾ ನಿರೂಪಣೆ, ಮಧ್ಯಾಹ್ನ 12=30 ಕ್ಕೆ ಧರ್ಮಸಭೆ ಮತ್ತು ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ, ಮಧ್ಯಾಹ್ನ 2=30 ಕ್ಕೆ ಅನ್ನ ಸಂತರ್ಪಣೆ, ಸಂಜೆ 6=30 ರಿಂದ ಶಿವರಾತ್ರಿ ಪ್ರಯುಕ್ತ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 9=30 ಕ್ಕೆ ಧಾರ್ಮಿಕ ಜಾಗರಣೆ ನಡೆಯಲಿದೆ . ತರಳಿ ಮಠದ ಲ್ಲಿ ನಡೆಯುತ್ತಿರುವ ನೂತನ ದೇವಸ್ಥಾನಗಳ ಕಟ್ಟಡ ಕಾಮಗಾರಿ ಗಳಿಗೆ ಭಕ್ತಾಧಿಗಳು ತನು, ಮನ, ಧನ ಸಹಕಾರ ನೀಡುವಂತೆ ವಿನಂತಿಸಿದ್ದಾರೆ.

O
I

ಸಿದ್ದಾಪುರ: ಶಾಸ್ತ್ರೀಯ ಸಂಗೀತದ ಅಧ್ಯಯನ ಮತ್ತು ಅಧ್ಯಾಪನಕ್ಕಾಗಿ ಆರಂಭಗೊಂಡ ಗುರುಕುಲದ ನೂತನ ಕಟ್ಟಡದ ಉದ್ಘಾಟನೆ ಮತ್ತು ಪರಂಪರ ಸಂಗೀತ ಕಾರ್ಯಕ್ರಮ ಫೆ. 25ರಂದು ಆಯೊಜಿಸಲಾಗಿದೆ ಎಂದು ಆಧಾರ ಷಡ್ಜದ ಮುಖ್ಯಸ್ಥ ವಿನಾಯಕ ಹೆಗಡೆ ಹಿರೇಹದ್ದ ತಿಳಿಸಿದರು.


ಪಟ್ಟಣದ ರಾಘವೇಂದ್ರ ಮಠದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಂದು ಪಟ್ಟಣಗಳಲ್ಲಿ ಸಂಗೀತ ಎಂದರೆ ಕೇವಲ ರಿಯಾಲಿಟಿ ಶೋಗಳಿಗೆ ಸೀಮಿತವಾಗಿದೆ. ಆದರೆ ಕ್ರಮಬದ್ಧ ಶಾಸ್ತ್ರೀಯ ಸಂಗೀತವನ್ನು ಅಧ್ಯಯನ ಮಾಡಲು ಇಚ್ಚಿಸುವ ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ 14 ವರ್ಷಗಳ ಹಿಂದೆ ಆಧಾರ ಷಡ್ಜ ಸಂಸ್ಥೆಯನ್ನು ಪ್ರಾರಂಭಿಸಲಾಯಿತು. ಈವರೆಗೆ 20 ರಿಂದ 25 ವಿದ್ಯಾರ್ಥಿಗಳು ಶಾಸ್ತ್ರೀಯ ಸಂಗೀತವನ್ನು ಅಧ್ಯಯನ ನಡೆಸಿದ್ದಾರೆ. ಪ್ರಸ್ತುತ 10-15 ವಿದ್ಯಾರ್ಥಿಗಳು ಸಂಗೀತ ಅಧ್ಯಯನ ನಡೆಸುತ್ತಿದ್ದಾರೆ. ಸಂಗೀತದ ಅಧ್ಯಯನ ಮತ್ತು ಅಧ್ಯಾಪನಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಸಂಗೀತ ಗುರುಕುಲಕ್ಕೆ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಫೆ. 25ರಂದು ಸಂಜೆ 4 ಗಂಟೆಗೆ ಖ್ಯಾತ ಗಾಯಕರಾದ ಪಂಡಿತ್ ಗಣಪತಿ ಭಟ್ ಹಾಸಣಗಿ ಗುರುಕುಲದ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಜನ ಮಾಧ್ಯಮ ಪತ್ರಿಕೆಯ ಸಂಪಾದಕ ಅಶೋಕ ಹಾಸ್ಯಗಾರ್, ಶಿರಸಿಯ ಪ್ರಗತಿ ಟ್ರೇಡರ್ಸ್ ನ ಕೆ ಬಿ ಲೋಕೇಶ ಹೆಗಡೆ, ಹೊನ್ನಾವರದ ಖ್ಯಾತ ವೈದ್ಯರಾದ ಡಾ. ಯುವರಾಜ್ ಆರ್ ಪಿ, ಹೆಗ್ಗರಣೆಯ ಶಿಕ್ಷಣ ಸೇವಾ ಸಮಿತಿಯ ಅಧ್ಯಕ್ಷ ಎನ್ ಆರ್ ಭಟ್, ಸಮಾಜದ ಹಿರಿಯರಾದ ಎಂ ಎಸ್ ಹೆಗಡೆ ಕಮಲಕೊಪ್ಪ, ವಿ ಎಸ್ ಹೆಗಡೆ ಹಿರೇಹೆದ್ದ ಭಾಗವಹಿಸಲಿದ್ದಾರೆ. ನಂತರ ನಡೆಯುವ ಪರಂಪರಾ ಸಂಗೀತ ಕಾರ್ಯಕ್ರಮದಲ್ಲಿ ಪಂಡಿತ್ ಗಣಪತಿ ಭಟ್ ಹಾಸಣಗಿ, ವಿನಾಯಕ ಹೆಗಡೆ ಹಿರೇಹದ್ದ ಗಾಯಕರಾಗಿ ಪಂಡಿತ್ ಗೋಪಾಲಕೃಷ್ಣ ಹೆಗಡೆ ಕಲ್ಭಾಗ ತಬಲವಾದಕರಾಗಿ, ಸಂವಾದಿನಿಯಲ್ಲಿ ಭರತ್ ಹೆಗಡೆ ಹೆಬ್ಬಲಸು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸಂಗೀತ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು.
ಸುದ್ದಿಗೋಷ್ಠಿಯಲ್ಲಿ ಶಶಾಂಕ್ ಮಡಿವಾಳ, ಅನಿಲ್ ಹೆಗಡೆ ತೆಂಗಾರುಮನೆ, ಸುಧೀರ್ ಬೇಂಗ್ರೆ ಇದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *