ಫೆ.೧೮ ತರಳಿ,೨೫ ಹಿರೇಹದ್ದಗಳಲ್ಲಿ ಕಾರ್ಯಕ್ರಮಗಳು

ಸಿದ್ದಾಪುರ: ತಾಲೂಕಿನ ಶ್ರೀ ಸಂಸ್ಥಾನ ತರಳೀಮಠದಲ್ಲಿ ಫೆಬ್ರವರಿ 18 ರ ಮಹಾಶಿವರಾತ್ರಿಯಂದು 35ನೇ ವರ್ಷದ 1008 ಶ್ರೀ ಸತ್ಯನಾರಾಯಣ ವ್ರತ ಕಲಶ ಪೂಜೆ ನಡೆಯಲಿದೆ ಎಂದು ವ್ರತ ಕಮಿಟಿ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಬೆಳಿಗ್ಗೆ 8 ರಿಂದ 10 ಗಂಟೆವರೆಗೆ ಕಳಸಗಳಲ್ಲಿ ಜಲ ತುಂಬುವುದು, 10 ಗಂಟೆಯಿಂದ ಪೂಜಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಕಥಾ ನಿರೂಪಣೆ, ಮಧ್ಯಾಹ್ನ 12=30 ಕ್ಕೆ ಧರ್ಮಸಭೆ ಮತ್ತು ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ, ಮಧ್ಯಾಹ್ನ 2=30 ಕ್ಕೆ ಅನ್ನ ಸಂತರ್ಪಣೆ, ಸಂಜೆ 6=30 ರಿಂದ ಶಿವರಾತ್ರಿ ಪ್ರಯುಕ್ತ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 9=30 ಕ್ಕೆ ಧಾರ್ಮಿಕ ಜಾಗರಣೆ ನಡೆಯಲಿದೆ . ತರಳಿ ಮಠದ ಲ್ಲಿ ನಡೆಯುತ್ತಿರುವ ನೂತನ ದೇವಸ್ಥಾನಗಳ ಕಟ್ಟಡ ಕಾಮಗಾರಿ ಗಳಿಗೆ ಭಕ್ತಾಧಿಗಳು ತನು, ಮನ, ಧನ ಸಹಕಾರ ನೀಡುವಂತೆ ವಿನಂತಿಸಿದ್ದಾರೆ.

O
I

ಸಿದ್ದಾಪುರ: ಶಾಸ್ತ್ರೀಯ ಸಂಗೀತದ ಅಧ್ಯಯನ ಮತ್ತು ಅಧ್ಯಾಪನಕ್ಕಾಗಿ ಆರಂಭಗೊಂಡ ಗುರುಕುಲದ ನೂತನ ಕಟ್ಟಡದ ಉದ್ಘಾಟನೆ ಮತ್ತು ಪರಂಪರ ಸಂಗೀತ ಕಾರ್ಯಕ್ರಮ ಫೆ. 25ರಂದು ಆಯೊಜಿಸಲಾಗಿದೆ ಎಂದು ಆಧಾರ ಷಡ್ಜದ ಮುಖ್ಯಸ್ಥ ವಿನಾಯಕ ಹೆಗಡೆ ಹಿರೇಹದ್ದ ತಿಳಿಸಿದರು.


ಪಟ್ಟಣದ ರಾಘವೇಂದ್ರ ಮಠದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಂದು ಪಟ್ಟಣಗಳಲ್ಲಿ ಸಂಗೀತ ಎಂದರೆ ಕೇವಲ ರಿಯಾಲಿಟಿ ಶೋಗಳಿಗೆ ಸೀಮಿತವಾಗಿದೆ. ಆದರೆ ಕ್ರಮಬದ್ಧ ಶಾಸ್ತ್ರೀಯ ಸಂಗೀತವನ್ನು ಅಧ್ಯಯನ ಮಾಡಲು ಇಚ್ಚಿಸುವ ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ 14 ವರ್ಷಗಳ ಹಿಂದೆ ಆಧಾರ ಷಡ್ಜ ಸಂಸ್ಥೆಯನ್ನು ಪ್ರಾರಂಭಿಸಲಾಯಿತು. ಈವರೆಗೆ 20 ರಿಂದ 25 ವಿದ್ಯಾರ್ಥಿಗಳು ಶಾಸ್ತ್ರೀಯ ಸಂಗೀತವನ್ನು ಅಧ್ಯಯನ ನಡೆಸಿದ್ದಾರೆ. ಪ್ರಸ್ತುತ 10-15 ವಿದ್ಯಾರ್ಥಿಗಳು ಸಂಗೀತ ಅಧ್ಯಯನ ನಡೆಸುತ್ತಿದ್ದಾರೆ. ಸಂಗೀತದ ಅಧ್ಯಯನ ಮತ್ತು ಅಧ್ಯಾಪನಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಸಂಗೀತ ಗುರುಕುಲಕ್ಕೆ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಫೆ. 25ರಂದು ಸಂಜೆ 4 ಗಂಟೆಗೆ ಖ್ಯಾತ ಗಾಯಕರಾದ ಪಂಡಿತ್ ಗಣಪತಿ ಭಟ್ ಹಾಸಣಗಿ ಗುರುಕುಲದ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಜನ ಮಾಧ್ಯಮ ಪತ್ರಿಕೆಯ ಸಂಪಾದಕ ಅಶೋಕ ಹಾಸ್ಯಗಾರ್, ಶಿರಸಿಯ ಪ್ರಗತಿ ಟ್ರೇಡರ್ಸ್ ನ ಕೆ ಬಿ ಲೋಕೇಶ ಹೆಗಡೆ, ಹೊನ್ನಾವರದ ಖ್ಯಾತ ವೈದ್ಯರಾದ ಡಾ. ಯುವರಾಜ್ ಆರ್ ಪಿ, ಹೆಗ್ಗರಣೆಯ ಶಿಕ್ಷಣ ಸೇವಾ ಸಮಿತಿಯ ಅಧ್ಯಕ್ಷ ಎನ್ ಆರ್ ಭಟ್, ಸಮಾಜದ ಹಿರಿಯರಾದ ಎಂ ಎಸ್ ಹೆಗಡೆ ಕಮಲಕೊಪ್ಪ, ವಿ ಎಸ್ ಹೆಗಡೆ ಹಿರೇಹೆದ್ದ ಭಾಗವಹಿಸಲಿದ್ದಾರೆ. ನಂತರ ನಡೆಯುವ ಪರಂಪರಾ ಸಂಗೀತ ಕಾರ್ಯಕ್ರಮದಲ್ಲಿ ಪಂಡಿತ್ ಗಣಪತಿ ಭಟ್ ಹಾಸಣಗಿ, ವಿನಾಯಕ ಹೆಗಡೆ ಹಿರೇಹದ್ದ ಗಾಯಕರಾಗಿ ಪಂಡಿತ್ ಗೋಪಾಲಕೃಷ್ಣ ಹೆಗಡೆ ಕಲ್ಭಾಗ ತಬಲವಾದಕರಾಗಿ, ಸಂವಾದಿನಿಯಲ್ಲಿ ಭರತ್ ಹೆಗಡೆ ಹೆಬ್ಬಲಸು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸಂಗೀತ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು.
ಸುದ್ದಿಗೋಷ್ಠಿಯಲ್ಲಿ ಶಶಾಂಕ್ ಮಡಿವಾಳ, ಅನಿಲ್ ಹೆಗಡೆ ತೆಂಗಾರುಮನೆ, ಸುಧೀರ್ ಬೇಂಗ್ರೆ ಇದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *