

೭ ನೇ ವೇತನ ಆಯೋಗದ ಜಾರಿ,ಭತ್ಯೆ ಪರಿಷ್ಕರಣೆ ಹಾಗೂ ಎನ್.ಪಿ.ಎಸ್.ರದ್ಧತಿ ಸೇರಿದಂತೆ ಕೆಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ನಡೆಯುವ ಸರ್ಕಾರಿ ನೌಕರರ ಅಸಹಕಾರ ಹೋರಾಟಕ್ಕೆ ರಾಜ್ಯ ಸರಕಾರಿ ನೌಕರರ ಸಂಘದ ಸಿದ್ಧಾಪುರ ತಾಲೂಕಾ ಘಟಕ ಬೆಂಬಲ ಘೋಶಿಸಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಸಭೆಯ ನಿರ್ಣಯದಂತೆ ಫೆಬ್ರುವರಿ ೨೮ ರ ಒಳಗೆ ತಮ್ಮ ಬೇಡಿಕೆಗಳು ಈಡೇರದಿದ್ದರೆ ಮಾರ್ಚ್೧ ರಿಂದ ಅನಿರ್ದಿಷ್ಟಾವಧಿ ವರೆಗೆ ಅಸಹಕಾರ ಹೋರಾಟ ನಡೆಯಲಿದೆ. ಇದಕ್ಕೆ ಬೆಂಬಲಿಸಿ ಉತ್ತರ ಕನ್ನಡ ಜಿಲ್ಲಾ ಸಂಘದ ಕರೆಯಂತೆ ಸಿದ್ಧಾಪುರದಲ್ಲಿ ಕೂಡಾ ಗೈರು ಹಾಜರಿ ಮೂಲಕ ಸಂಘದ ಹೋರಾಟ ಬೆಂಬಲಿಸಲಿದ್ದೇವೆ ಎಂದು ತಿಳಿಸಿರುವ ರಾ.ಸ.ನೌಕರರ ಸಂಘದ ತಾಲೂಕಅಧ್ಯಕ್ಷ ರಾಜೇಶ್ ನಾಯ್ಕ ಇದಕ್ಕೆ ತಮ್ಮ ಘಟಕದ ಎಲ್ಲಾ ಸದಸ್ಯರ ಬೆಂಬಲವಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
