ಉತ್ತರ ಕನ್ನಡದ ಅರಣ್ಯ ಅತಿಕ್ರಮಣದಾರರ ಬಗ್ಗೆ ಕಾಳಜಿ ಯಾಕಿಲ್ಲ?

ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳಿಗೆ ಇಲ್ಲಿಯ ರಾಜಕಾರಣಿಗಳು ಸ್ಪಂದಿಸುತ್ತಿಲ್ಲವೆ? ಎನ್ನುವ ಪ್ರಶ್ನೆ ಈಗ ಹಳೆದಾದರೂ ಚಾಲ್ತಿಯಲ್ಲಿದೆ. ಮಾಜಿ ಸಂಸದ ಕರ್ಮಯೋಗಿ ಡಾ. ದಿನಕರ ದೇಸಾಯಿ ೫೦-೬೦ ವರ್ಷಗಳ ಹಿಂದೆ ಅರಣ್ಯ ಅತಿಕ್ರಮಣದಾರರ ಪರವಾಗಿ ಕಾಳಜಿವಹಿಸಿ ಹೋರಾಟ ಮಾಡಿದ್ದರು. ಅವರ ನಂತರ ಅನೇಕರು ಉತ್ತರ ಕನ್ನಡ ಜಿಲ್ಲೆಯ ಸಂಸದರು, ಕೇಂದ್ರಸಚಿವರೂ, ರಾಜ್ಯ ಸರ್ಕಾರದಲ್ಲಿ ಮಂತ್ರಿಗಳೂ ಆಗಿ ಹೋಗಿದ್ದಾರೆ.

ಆದರೆ ಎಂದೂ ಮುಗಿಯದ ಸಮಸ್ಯೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಅತಿಕ್ರಮಣದಾರರ ಪರವಾಗಿ ಸರ್ಕಾರದ ಮೂಲಕ ಯಾವ ಪ್ರಯತ್ನಗಳೂ ನಡೆದಿಲ್ಲ. ಉತ್ತರ ಕನ್ನಡ ಸಂಸದರೂ. ಕೇಂದ್ರಸಚಿವೆಯೂ ಆಗಿದ್ದ ಮಾರ್ಗರೇಟ್‌ ಆಳ್ವ ಅವರ ಅಧಿಕಾರದ ಅವಧಿ, ಕೈ ನಡೆಯುವ ಸಮಯದಲ್ಲಿ ಅರಣ್ಯ ಅತಿಕ್ರಮಣದಾರರ ಪರವಾಗಿ ಎಲ್ಲೂ ಮಾತನಾಡಿರುವ ದಾಖಲೆಯೂ ಇಲ್ಲ.

ಹಾಲಿ ಸಂಸದ, ಮಾಜಿ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ನಾಮಕಾವಾಸ್ಥೆ ಉತ್ತರ ಕನ್ನಡವನ್ನು ಪ್ರತಿನಿಧಿಸಿದರೂ ಜಿಲ್ಲೆಯ ಬಹುಸಂಖ್ಯಾತರು, ಬಹುಸಂಖ್ಯಾತ ಅರಣ್ಯ ಅತಿಕ್ರಮಣದಾರರಿಗೆ ಅವರ ಕೊಡುಗೆ ಶೂನ್ಯ.

ನಿರಂತರ ಆರು ಬಾರಿ ಶಾಸಕರೂ, ಸಚಿವರೂ, ವಿಧಾನಸಭಾ ಅಧ್ಯಕ್ಷರೂ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಿರಿಯ ನಾಯಕ ಆರ್.ವಿ. ದೇಶಪಾಂಡೆ, ಶ್ರೀನಿವಾಸ್‌ ಪೂಜಾರಿ ಸೇರದಂತೆ ಬಹುತೇಕ ಜನಪ್ರತಿನಿಧಿಗಳಿಗೆ ಅರಣ್ಯ ಅತಿಕ್ರಮಣದಾರರ ಸಮಸ್ಯೆಯಾಗಿ ಕಾಣಲೇ ಇಲ್ಲ.

ಕಳೆದ ಮೂರು ದಶಕಗಳಿಂದ ಅರಣ್ಯ ಅತಿಕ್ರಮಣದಾರರ ಪರವಾಗಿ ಹೋರಾಡುತ್ತಿರುವ ರವೀಂದ್ರ ನಾಯ್ಕರ ಪ್ರಯತ್ನ ಕೂಡಾ ರಾಜಕೀಯ ಪ್ರೇರಿತ ಎನ್ನುವ ಆರೋಪಗಳಿವೆ. ಆದರೆ ಯಾರಿಗೂ ಬೇಡವಾದ ಜಿಲ್ಲೆಯ ಅರಣ್ಯ ಅತಿಕ್ರಮಣದಾರರ ಪರವಾಗಿ ನಿರಂತರ ಹೋರಾಟ ಕಾಯ್ದುಕೊಂಡಿರುವ ರವೀಂದ್ರರನ್ನು

ಬಿಟ್ಟರೆ ಉಳಿದವರ ಡೊಂಬರಾಟದ ನಡುವೆ ಅರಣ್ಯ ಅತಿಕ್ರಮಣದಾರರ ಸ್ಥಿತಿ ಪ್ರತಿಬಾರಿ ಚುನಾವಣೆಯಲ್ಲಿ ಮೋಸಹೋಗುವ ಮತದಾರರ ಪರಿಸ್ಥಿತಿಯಂತಾಗಿದೆ. ಬೆಟ್ಟಭೂಮಿ ಪಟ್ಟಾ, ಹಕ್ಕಿನ ಬಗ್ಗೆ ಸದನದ ಒಳಗೂ ಹೋರಗೂ ಹೋರಾಡುವ ಪಟ್ಟಭದ್ರರು ಅರಣ್ಯ ಅತಿಕ್ರಮಣದಾರರನ್ನು ಉಪೇಕ್ಷಿಸುತ್ತಿರುವುದು ಮೇಲ್ಜಾತಿ ರಾಜಕಾರಣದ ಪ್ರಮುಖ ತಂತ್ರ ಎನ್ನುವ ವಿಶ್ಲೇಶಣೆ ಸತ್ಯವಲ್ಲ ಎನ್ನುವಂತಿಲ್ಲ.

https://www.etvbharat.com/kannada/karnataka/live-streaming/karnataka-legislative-council-session-live-from-bengaluru/ka20230224114028196196833

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *