ಉತ್ತರ ಕನ್ನಡದ ಅರಣ್ಯ ಅತಿಕ್ರಮಣದಾರರ ಬಗ್ಗೆ ಕಾಳಜಿ ಯಾಕಿಲ್ಲ?

ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳಿಗೆ ಇಲ್ಲಿಯ ರಾಜಕಾರಣಿಗಳು ಸ್ಪಂದಿಸುತ್ತಿಲ್ಲವೆ? ಎನ್ನುವ ಪ್ರಶ್ನೆ ಈಗ ಹಳೆದಾದರೂ ಚಾಲ್ತಿಯಲ್ಲಿದೆ. ಮಾಜಿ ಸಂಸದ ಕರ್ಮಯೋಗಿ ಡಾ. ದಿನಕರ ದೇಸಾಯಿ ೫೦-೬೦ ವರ್ಷಗಳ ಹಿಂದೆ ಅರಣ್ಯ ಅತಿಕ್ರಮಣದಾರರ ಪರವಾಗಿ ಕಾಳಜಿವಹಿಸಿ ಹೋರಾಟ ಮಾಡಿದ್ದರು. ಅವರ ನಂತರ ಅನೇಕರು ಉತ್ತರ ಕನ್ನಡ ಜಿಲ್ಲೆಯ ಸಂಸದರು, ಕೇಂದ್ರಸಚಿವರೂ, ರಾಜ್ಯ ಸರ್ಕಾರದಲ್ಲಿ ಮಂತ್ರಿಗಳೂ ಆಗಿ ಹೋಗಿದ್ದಾರೆ.

ಆದರೆ ಎಂದೂ ಮುಗಿಯದ ಸಮಸ್ಯೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಅತಿಕ್ರಮಣದಾರರ ಪರವಾಗಿ ಸರ್ಕಾರದ ಮೂಲಕ ಯಾವ ಪ್ರಯತ್ನಗಳೂ ನಡೆದಿಲ್ಲ. ಉತ್ತರ ಕನ್ನಡ ಸಂಸದರೂ. ಕೇಂದ್ರಸಚಿವೆಯೂ ಆಗಿದ್ದ ಮಾರ್ಗರೇಟ್‌ ಆಳ್ವ ಅವರ ಅಧಿಕಾರದ ಅವಧಿ, ಕೈ ನಡೆಯುವ ಸಮಯದಲ್ಲಿ ಅರಣ್ಯ ಅತಿಕ್ರಮಣದಾರರ ಪರವಾಗಿ ಎಲ್ಲೂ ಮಾತನಾಡಿರುವ ದಾಖಲೆಯೂ ಇಲ್ಲ.

ಹಾಲಿ ಸಂಸದ, ಮಾಜಿ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ನಾಮಕಾವಾಸ್ಥೆ ಉತ್ತರ ಕನ್ನಡವನ್ನು ಪ್ರತಿನಿಧಿಸಿದರೂ ಜಿಲ್ಲೆಯ ಬಹುಸಂಖ್ಯಾತರು, ಬಹುಸಂಖ್ಯಾತ ಅರಣ್ಯ ಅತಿಕ್ರಮಣದಾರರಿಗೆ ಅವರ ಕೊಡುಗೆ ಶೂನ್ಯ.

ನಿರಂತರ ಆರು ಬಾರಿ ಶಾಸಕರೂ, ಸಚಿವರೂ, ವಿಧಾನಸಭಾ ಅಧ್ಯಕ್ಷರೂ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಿರಿಯ ನಾಯಕ ಆರ್.ವಿ. ದೇಶಪಾಂಡೆ, ಶ್ರೀನಿವಾಸ್‌ ಪೂಜಾರಿ ಸೇರದಂತೆ ಬಹುತೇಕ ಜನಪ್ರತಿನಿಧಿಗಳಿಗೆ ಅರಣ್ಯ ಅತಿಕ್ರಮಣದಾರರ ಸಮಸ್ಯೆಯಾಗಿ ಕಾಣಲೇ ಇಲ್ಲ.

ಕಳೆದ ಮೂರು ದಶಕಗಳಿಂದ ಅರಣ್ಯ ಅತಿಕ್ರಮಣದಾರರ ಪರವಾಗಿ ಹೋರಾಡುತ್ತಿರುವ ರವೀಂದ್ರ ನಾಯ್ಕರ ಪ್ರಯತ್ನ ಕೂಡಾ ರಾಜಕೀಯ ಪ್ರೇರಿತ ಎನ್ನುವ ಆರೋಪಗಳಿವೆ. ಆದರೆ ಯಾರಿಗೂ ಬೇಡವಾದ ಜಿಲ್ಲೆಯ ಅರಣ್ಯ ಅತಿಕ್ರಮಣದಾರರ ಪರವಾಗಿ ನಿರಂತರ ಹೋರಾಟ ಕಾಯ್ದುಕೊಂಡಿರುವ ರವೀಂದ್ರರನ್ನು

ಬಿಟ್ಟರೆ ಉಳಿದವರ ಡೊಂಬರಾಟದ ನಡುವೆ ಅರಣ್ಯ ಅತಿಕ್ರಮಣದಾರರ ಸ್ಥಿತಿ ಪ್ರತಿಬಾರಿ ಚುನಾವಣೆಯಲ್ಲಿ ಮೋಸಹೋಗುವ ಮತದಾರರ ಪರಿಸ್ಥಿತಿಯಂತಾಗಿದೆ. ಬೆಟ್ಟಭೂಮಿ ಪಟ್ಟಾ, ಹಕ್ಕಿನ ಬಗ್ಗೆ ಸದನದ ಒಳಗೂ ಹೋರಗೂ ಹೋರಾಡುವ ಪಟ್ಟಭದ್ರರು ಅರಣ್ಯ ಅತಿಕ್ರಮಣದಾರರನ್ನು ಉಪೇಕ್ಷಿಸುತ್ತಿರುವುದು ಮೇಲ್ಜಾತಿ ರಾಜಕಾರಣದ ಪ್ರಮುಖ ತಂತ್ರ ಎನ್ನುವ ವಿಶ್ಲೇಶಣೆ ಸತ್ಯವಲ್ಲ ಎನ್ನುವಂತಿಲ್ಲ.

https://www.etvbharat.com/kannada/karnataka/live-streaming/karnataka-legislative-council-session-live-from-bengaluru/ka20230224114028196196833

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *