nk crimes today- ಹಳಿಯಾಳದಲ್ಲಿ ಕೊಲೆ,ಹಾವೇರಿಯಲ್ಲಿ ಸಾವು

ಕಾರವಾರ: ಪತ್ನಿ ಕೊಂದು ಬ್ಯಾರೆಲ್ ನಲ್ಲಿ ಬಚ್ಚಿಟ್ಟಿದ್ದ ಪತಿಯ ಬಂಧನ

ಪತ್ನಿಯನ್ನು ಹತ್ಯೆ ಮಾಡಿದ ಪತಿಯೊಬ್ಬ ನಂತರ ಶವವನ್ನು ನೀರು ತುಂಬುವ ಬ್ಯಾರಲ್ ನಲ್ಲಿ ಇಟ್ಟು ಕಾಡಿಗೆ ಎಸೆದಿರವ ದಾರುಣ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ತೇರಗಾಂವನಲ್ಲಿ ನಡೆದಿದೆ.

file photo

ಕಾರವಾರ: ಪತ್ನಿಯನ್ನು ಹತ್ಯೆ ಮಾಡಿದ ಪತಿಯೊಬ್ಬ ನಂತರ ಶವವನ್ನು ನೀರು ತುಂಬುವ ಬ್ಯಾರಲ್ ನಲ್ಲಿ ಇಟ್ಟು ಕಾಡಿಗೆ ಎಸೆದಿರವ ದಾರುಣ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ತೇರಗಾಂವನಲ್ಲಿ ನಡೆದಿದೆ.

ಘಟನೆ ಸಂಬಂಧ ಹಳಿಯಾಳ-ದಾಂಡೇಲಿ ಪೊಲೀಸರು ಆರೋಪಿ ಹಾಗೂ ಶವ ವಿಲೇವಾರಿಗೆ ಸಹಕರಿಸಿದ ಇಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ.

ಮೃತ ಮಹಿಳೆಯನ್ನು ಶಾಂತಕುಮಾರಿ ಎಂದು ಗುರ್ತಿಸಲಾಗಿದೆ. ತನಗಿಂತ 10 ವರ್ಷ ಕಿರಿಯವನಾದ ತುಕಾರಾಂ ಎಂಬಾತನನ್ನು ಶಾಂತಕುಮಾರಿ ವಿವಾಹವಾಗಿದ್ದರು. ತನಗೆ ದ್ರೋಹ ಬಗೆದಿರುವುದಾಗಿ ಶಾಂತಕುಮಾರಿ ಆಗಾಗ್ಗೆ ಪತಿಯೊಂದಿಗೆ ಜಗಳ ಮಾಡುತ್ತಿದ್ದಳು. ಈ ಗಲಾಟೆ ವಿಕೋಪಕ್ಕೆ ತಿರುಗಿದಾಗ, ತುಕಾರಾಮ್, ಶಾಂತಕುಮಾರಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಬಳಿಕ ಪತ್ನಿಯ ಶವವನ್ನು ನೀರು ತುಂಬುವ ಬ್ಯಾರಲ್​​ನಲ್ಲಿ ಬಚ್ಚಿಟ್ಟಿದ್ದಾನೆ.

ಬಳಿಕ ಮನೆ ಖಾಲಿ ಮಾಡುವ ನೆಪದಲ್ಲಿ ಇಬ್ಬರ ಸಹಾಯದೊಂದಿಗೆ ಟಾಟಾ ಎಸ್​ ಬಾಡಿಗೆ ಪಡೆದು ಶವ ತುಂಬಿದ ಬ್ಯಾರಲ್​​’ನ್ನು ವಾಹನದಲ್ಲಿ ಇರಿಸಿದ್ದಾನೆ. ಇದನ್ನು ಗಮನಿಸಿದ ಮನೆ ಮಾಲೀಕರು ಎಲ್ಲಿಗೆ ಹೋಗುತ್ತಿದ್ದೀಯಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ತುಕಾರಾಂ ಗೋವಾಗೆ ಹೋಗಬೇಕೆಂದು ಉತ್ತರಿಸಿದ್ದಾನೆ. ನಂತರ ಶವವನ್ನು ಕಾಡೊಂದರಲ್ಲಿ ಎಸೆದಿದ್ದಾನೆ. ಈ ನಡುವೆ ಮಾಹಿತಿ ತಿಳಿದಿದ್ದ ಪೊಲೀಸರು ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ಆರಂಭಿಸಿದ್ದಾರೆ.

ವಾಹನದ ಬಗ್ಗೆ ವಿವರಗಳು ನಮಗೆ ತಿಳಿದಿರಲಿಲ್ಲ. ಆದರೆ, ವಾಹನದಲ್ಲಿ ಮೂವರು ಇರುತ್ತಾರೆಂಬ ಮಾಹಿತಿ ಮಾತ್ರ ತಿಳಿದಿತ್ತು. ತೇರ್ಗಾಂವ್ ಗ್ರಾಮದ ಬಳಿ ವಾಹನವೊಂದು ಕಂಡು ಬಂದಿತ್ತು. ಆದರೆ, ವಾಹನದಲ್ಲಿ ಏನೂ ಇರಲಿಲ್ಲ. ಈ ವೇಳೆ ವಾಹನವನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಆರೋಪಿಗಳು ಹತ್ಯೆ ಕುರಿತು ಬಾಯ್ಬಿಟ್ಟಿದ್ದರು. ಬಳಿಕ ಶವ ಎಸೆದ ಸ್ಥಳಕ್ಕೆ ನಮ್ಮನ್ನು ಕರೆದೊಯ್ದಿದ್ದರು. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತ ಮಹಿಳೆಗಿದು ಎರಡನೇ ವಿವಾಹವಾಗಿತ್ತು. ಬಂಧಿತರಾಗಿರುವ ಇಬ್ಬರನ್ನು ರಿಜ್ವಾನ್ ಮತ್ತು ಸಮೀರ್ ಪಂತೋಜಿ ಎಂದು ಗುರ್ತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾವೇರಿ: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ರ ಸಕ್ಕರೆ ಕಾರ್ಖಾನೆ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

sugar factory worker dies after being hit by machinery at Haveri

ಹಾವೇರಿ: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರ ಪುತ್ರ ವಿವೇಕ ಹೆಬ್ಬಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಯಂತ್ರದ ಬೆಲ್ಟ್ ಗೆ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ದುಂಢಸಿ ಗ್ರಾಮದ ನವೀನ ಬಸಪ್ಪ ಚಲವಾದಿ(19 ವರ್ಷ) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಕಬ್ಬು ತುಂಬುವ ಯಂತ್ರದ ಬೆಲ್ಟಿಗೆ ನವೀನನ ಎರಡು ಕೈಗಳು ಸಿಲುಕಿ ತುಂಡಾಗಿ, ತೀವ್ರ ರಕ್ತಸ್ರಾವದಿಂದ ಕಾರ್ಮಿಕ ನವೀನ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಕಾರ್ಖಾನೆಯಲ್ಲಿ ಯಾವುದೇ ಸುರಕ್ಷತಾ ಕ್ರಮವಿರಲಿಲ್ಲ
“ಕೋಣನಕೇರಿಯ ವಿಐಪಿಎನ್ ಡಿಸ್ಟಿಲರಿ ಕಾರ್ಖಾನೆಯಲ್ಲಿ  ಯಾವುದೇ ಸುರಕ್ಷಾ ಕ್ರಮವಿಲ್ಲದೇ,  ದೊಡ್ಡ ದೊಡ್ಡ ಯಂತ್ರಗಳ ಬೆಲ್ಟ್ ಹತ್ತಿರ ಕೌಶಲರಹಿತ ಕಾರ್ಮಿಕನಿಂದ ಬುಟ್ಟಿಯಿಂದ ಕಬ್ಬಿನ ಪುಡಿಯನ್ನು ತುಂಬಿ ಹಾಕಿಸಲಾಗುತ್ತಿತ್ತು. ಸ್ಥಳದಲ್ಲಿ ಯಾವುದೇ ಜಾಲರಿ, ಸುರಕ್ಷಾ ಕ್ರಮಗಳಿಲ್ಲದ ಕಾರಣ ಈ ದುರ್ಘಟನೆ ನಡೆದಿದೆ” ಎಂದು ಮೃತನ ಸಂಬಂಧಿಗಳು ದೂರಿದ್ದಾರೆ.

ಕಾರ್ಖಾನೆ ಮಾಲೀಕ ವಿವೇಕ ಹೆಬ್ಬಾರ್, ಜನರಲ್ ಮ್ಯಾನೇಜರ್ ಮಂಜುನಾಥ, ಲೇಬರ್ ಸಪ್ಲೈರ್ಗಳಾದ ಬಸವರಾಜ, ಉಮೇಶ ಸುರವೇ, ವಿಶ್ವನಾಥ ಎ.ಎಸ್,  ಆಕಾಶ ಧರ್ಮೋಜಿ ಸೇರಿದಂತೆ 6 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *