ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ

ಸಿದ್ದಾಪುರ
ತಾಲೂಕಿನ ಹಾರ್ಸಿಟ್ಟಾ ಗ್ರಾಪಂ ವ್ಯಾಪ್ತಿಯ ಬಾಳೇಗದ್ದೆಯ ಗಂಗಾಧರ ರಾಮ ನಾಯ್ಕ ಅವರ ಕೊಟ್ಟಿಗೆಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಕೊಟ್ಟಿಗೆಯಲ್ಲಿದ್ದ ಎಮ್ಮೆ ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ನಡೆದಿದೆ.
ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಎಮ್ಮೆಗೆ ಭಾಗಶಃ ಸುಟ್ಟಿದ್ದು ಸ್ಥಳಕ್ಕೆ ಹಾರ್ಸಿಕಟ್ಟಾ ಪಶುವೈದ್ಯಾಧಿಕಾರಿ ಡಾ.ಶ್ರೇಯಸ್ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿದ್ದಾಪುರ:ತಾಲೂಕಿನ ನಾಣಿಕಟ್ಟಾದಲ್ಲಿ ಸಿದ್ಧಿವಿನಾಯಕ ಯಕ್ಷಮಿತ್ರ ಬಳಗ, ನಟರಾಜ ಎಂ.ಹೆಗಡೆ ಮತ್ತು ಗೆಳೆಯರ ಬಳಗ ಹಾಗೂ ಉಪೇಂದ್ರ ಪೈ ಸೇವಾ ಟ್ರಸ್ಟ್ ಶಿರಸಿ ಇವುಗಳ ಆಶ್ರಯದಲ್ಲಿ ನಾಣಿಕಟ್ಟಾ ಸಾಂಸ್ಕೃತಿಕ ಉತ್ಸವ, ಗೌರವ ಸನ್ಮಾನ ಹಾಗೂ ಯಕ್ಷಗಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ತ್ಯಾಗಲಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್.ಬಿ.ಹೆಗಡೆ ಮಾತನಾಡಿ ನಮ್ಮ ನಾಡಿನ ಕಲೆಗಳು ಶ್ರೇಷ್ಠವಾಗಿದೆ. ಅದರಲ್ಲಿಯೂ ಮುಖ್ಯವಾಗಿ ಯಕ್ಷಗಾನ ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಕಲೆಯಾಗಿದ್ದಲ್ಲದೇ ಜೀವನಕ್ಕೆ ಅತ್ಯವಶ್ಯವಾಗಿದೆ . ಯಕ್ಷಗಾನ ಸಂಘಟಕರಿಗೆ, ಕಲಾವಿದರಿಗೆ ಪ್ರೋತ್ಸಾಹ ನೀಉವ ಅವಶ್ಯಕತೆ ಇದೆ ಎಂದು ಹೇಳಿದರು.


ಉದ್ಯಮಿ ಉಪೇಂದ್ರ ಪೈ ಶಿರಸಿ ಕಾರ್ಯಕ್ರಮ ಉದ್ಘಾಟಿಸಿದರು. ವಿ.ವಿನಾಯಕ ಎಸ್.ಭಟ್ಟ ಮತ್ತೀಹಳ್ಳಿ, ಎ.ಜಿ.ನಾಯ್ಕ ಬರಣಿ, ತ್ಯಾಗಲಿ ಗ್ರಾಪಂ ಅಧ್ಯಕ್ಷ ಲಕ್ಷಿö್ಮನಾರಾಯಣ ಎಂ.ಹೆಗಡೆ ಹೂಡ್ಲಮನೆ, ನಾಣಿಕಟ್ಟಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ನರಹರಿ ಹೆಗಡೆ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗಣೇಶ ನಾಯ್ಕ, ಯಕ್ಷಮಿತ್ರಬಳಗದ ಹಿರಿಯರಾದ ಎಂ.ಎಂ.ಹೆಗಡೆ ಹಂಗಾರಖಂಡ, ಪ್ರಭಾಕರ ಹೆಗಡೆ ಸೂರನ್, ರವೀಂದ್ರ ಹೆಗಡೆ ಸೂರನ್, ಉಮೇಶ ಹೆಗಡೆ ಸೂರನ್ ಇತರರಿದ್ದರು.
ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ರನ್ನು ಸನ್ಮಾನಿಸಲಾಯಿತು.


ನಾಣಿಕಟ್ಟಾ ಸಾಂಸ್ಕೃತಿಕ ಉತ್ಸವದ ಅಂಗವಾಗಿ ಭರತನಾಟ್ಯ, ಮಕ್ಕಳಿಂದ ವಿವಿಧ ಮನರಂಜನಾ ಕಾರ್ಯಕ್ರಮ ನಂತರ ವೀರಾಂಜನೇಯ ಯಕ್ಷಮಿತ್ರಬಳಗ ಬಂಗಾರಮಕ್ಕಿ ಹಾಗೂ ಅತಿಥಿಕಲಾವಿದರಿಂದ ಭೀಷ್ಮವಿಜಯ ಯಕ್ಷಗಾನ ಪ್ರದರ್ಶನಗೊಂಡಿತು.
ಹಿಮ್ಮೇಳದಲ್ಲಿ ಶಂಕರ ಭಟ್ಟ ಬ್ರಹ್ಮೂರು, ಕು.ಶ್ರೀರಕ್ಷಾ ಹೆಗಡೆ ಸಿದ್ದಾಪುರ, ಶಂಕರ ಭಾಗವತ ಯಲ್ಲಾಪುರ, ವಿಘ್ನೇಶ್ವರ ಗೌಡ ಕೆಸರಕೊಪ್ಪ, ಪ್ರಸನ್ನ ಭಟ್ಟ ಹೆಗ್ಗಾರ ಸಹಕರಿಸಿದರು.
ಮುಮ್ಮೇಳದಲ್ಲಿ ಸುಬ್ರಹ್ಮಣ್ಯ ಚಿಟ್ಟಾಣಿ, ವಿದ್ಯಾಧರರಾವ್ ಜಲವಳ್ಳಿ, ಡಾ.ಪ್ರದೀಪ ಸಾಮಗ. ಅಶೋಕ ಭಟ್ಟ ಸಿದ್ದಾಪುರ, ಶ್ರೀಧರ ಭಟ್ಟ ಕಾಸರಕೋಡ,ಮಹಾಬಲೇಶ್ವರ ಗೌಡ, ಅವಿನಾಶ ಕೊಪ್ಪ, ರಾಮಚಂದ್ರ ಮುಗದೂರು, ಆನಂದ ಹೆಗಡೆ ಶೀಗೆಹಳ್ಳಿ, ಗಣೇಶ ಹೆಗಡೆ ಸೂರನ್ನ ವಿವಿಧ ಪಾತ್ರನಿರ್ವಹಿಸಿ ಮೆಚ್ಚುಗೆಗಳಿಸಿದರು.
ನಿರ್ಮಲಾ ಹೆಗಡೆ, ವಾಸುದೇವ ಎನ್ ನಾಯ್ಕ, ವಾಣಿ ಹೆಗಡೆ, ನಟರಾಜ ಎಂ.ಹೆಗಡೆ, ರಮೇಶ ಎನ್.ಬಾಳೇಕೈ, ರಮೇಶ ಟಿ.ನಾಯ್ಕ, ಶಂಕರನಾರಾಯಣ ಆದಿದ್ರಾವಿಡ,ಅಕ್ಷಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *