ಮಹಿಳಾ ಪತಂಜಲಿ ಯೋಗ ಸಮಿತಿಯ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ………ಹೆಚ್ಚು ಹೆಚ್ಚು ಪುಸ್ತಕವನ್ನು ಓದಿ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ..ನ್ಯಾಯಾಧೀಶ ಶ್ರೀ ತಿಮ್ಮಯ್ಯ ಜಿ.

ಸಿದ್ದಾಪುರ .ಮಹಿಳೆ ಪುರುಷ ಎಂಬ ಯಾವುದೇ ಭೇದವಿಲ್ಲ ಸಂವಿಧಾನದಲ್ಲಿ ಎಲ್ಲರಿಗೂ ಸಮಾನವಾದ ಕಾನೂನುಗಳಿವೆ.ಮಹಿಳೆಯರಿಗೂ ಆಸ್ತಿ ಹಕ್ಕನ್ನು ಸಂವಿಧಾನ ನೀಡಿದೆಎಂದು ಸಿದ್ದಾಪುರದ ಸಿವಿಲ್ ಜಡ್ಜ್ ಶ್ರೀ ತಿಮ್ಮಯ್ಯ ಜಿ ಹೇಳಿದರು. ಅವರು ಸಿದ್ದಾಪುರದ ಎಪಿಎಂಸಿಯಲ್ಲಿರುವ ಟಿ ಎಮ್ ಎಸ್ ಸಭಾಭವನದಲ್ಲಿ ಮೊದಲ ಬಾರಿ ನಡೆದ ಪತಂಜಲಿ ಯೋಗ ಸಮಿತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜರುಗಿದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಹಿಳಾ ಕಾನೂನು ಅರಿವು ಕುರಿತು ಮಾತನಾಡಿದರು.

ತಾಯಿ ಸಂಸ್ಕಾರವಂತಳಾಗಿದ್ದರೆ ಮನೆಯ ಮಕ್ಕಳು ಸದಸ್ಯರೆಲ್ಲರೂ ಸಂಸ್ಕಾರವನ್ನು ಕಲಿತು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಾರೆ ಎಂದು ಹೇಳಿದರು. ಇನ್ನೋರ್ವ ಅತಿಥಿ ಪ್ರಜಾಪಿತ ಈಶ್ವರಿ ವಿದ್ಯಾಲಯದ ಬಿ.ಕೆ. ದೇವಕಿ ಅಕ್ಕ ಮಾತನಾಡಿ ಮಹಿಳೆ ಮನೆಯಲ್ಲಿ ಲಕ್ಷ್ಮಿಯಂತಿರಬೇಕು.ಭಾರತೀಯ ಸಂಸ್ಕೃತಿ ಸಂಪ್ರದಾಯವನ್ನು ತಾಯಿಯಾದವಳು ಅನುಸರಿಸಿದರೆ ಮಕ್ಕಳು ಭಾರತೀಯ ನಾರಿಯಾಗಿ ಸುಖ ಸಮೃದ್ಧಿ ಶಾಂತಿ ನೆಮ್ಮದಿ ಕಾಣಬಹುದೆಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಹಿಳಾಪತಂಜಲಿ ಯೋಗ ಸಮಿತಿಯ ತಾಲೂಕ ಪ್ರಭಾರಿ ಶ ವೀಣಾ ಆನಂದ ಶೇಟ್ ಮಾತನಾಡಿ ಹೆಣ್ಣು ಹೆಣ್ಣನ್ನು ಗೌರವಿಸಬೇಕು.ಹೆಣ್ಣಿಗೆ ಹೆಣ್ಣು ಶತ್ರುವಾಗಬಾರದು.ಕಷ್ಟದಲ್ಲಿರುವವರಿಗೆ ಕೈಲಾದಷ್ಟು ಸಹಾಯವನ್ನು ಮಾಡಿ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು.ಅಷ್ಟಾಂಗ ಯೋಗಭ್ಯಾಸ ಮಾಡಿ ನಿಯಮವನ್ನು ಪಾಲಿಸಿ ಮನೆಯನ್ನು ಸಕರಾತ್ಮಕವಾಗಿ ಮುನ್ನಡೆಸಿ ಮನೆಯನ್ನು ಮಂದಿರವಾಗಿರಿಸಬೇಕೆಂದರು.

ಸಮಾರಂಭದಲ್ಲಿ ಉತ್ತರ ಕನ್ನಡ ಜಿಲ್ಲಾ ಪತಂಜಲಿ ಯೋಗ ಸಮಿತಿಯ ಜಿಲ್ಲಾ ಪ್ರಭಾರಿ ಶ್ರೀಮತಿ ಚೈತ್ರ ಆರ್ ನಾಯಕ್, ಸಿದ್ದಾಪುರ ಟಿಎಂಎಸ್ ಅಧ್ಯಕ್ಷ ಆರ್.ಎಮ್. ಹೆಗಡೆ ಬಾಳೆ ಸರ, ಸಿದ್ದಾಪುರ ಲಯನ್ಸ್ ಪಿ.ಡಿ.ಜಿ.ಡಾ- ರವಿ ಹೆಗಡೆ ಹೂವಿನ ಮನೆ, ಪತಂಜಲಿ ತಾಲೂಕ ಪ್ರಭಾರಿ ಮಂಜುನಾಥ್ ನಾಯಕ್ ಮಹಿಳಾ ದಿನಾಚರಣೆ ಕುರಿತು ವಿವರಿಸಿದರು.ಈ ಸಂದರ್ಭದಲ್ಲಿ ಎಲೆಮರೆಕಾಯಿಯಂತಿದ್ದ ಮೂವರು ಮಹಿಳಾ ಸಾಧಕೀಯರನ್ನು ಸನ್ಮಾನಿಸಲಾಯಿತು.ಸಂಗೀತ ಶಿಕ್ಷಕಿ ಶಾಂತ ನೀಲಕಣಿ, ಬಾಣಂತಿ ಮತ್ತು ಮಗುವಿನ ಶುಶ್ರೂಷಕಿ ಶಕುಂತಲಾ ಹೊನ್ನಾವರ, ಹಾಗೂ ಅಂಧ ಮಕ್ಕಳ ಪಾಲನೆ ಶಶಿಕಲಾ ಮಡಿವಾಳ. ಮಂಗಲಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಶೀಲಾ ಕೊಂಡ್ಲಿ ಪ್ರಾರ್ಥಿಸಿದರು. ಸುವರ್ಣ ಹೆಗಡೆ ಸ್ವಾಗತಿಸಿದರು. ಗೀತಾ ಬಿ.ಹೆಗಡೆ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *