ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ: ತಜ್ಞರು

ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

Experts predicts early Pre-mansoon rains in Karnataka

ಬೆಂಗಳೂರು: ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು ತಜ್ಞರು  ಹೇಳಿದ್ದಾರೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಮಾರ್ಚ್ 6ರಿಂದ 8ರ ನಡುವೆ ಅಕಾಲಿಕ ಮಳೆಯಾಗಿದ್ದು, ಇದು ಹಲವೆಡೆ ಬೆಳೆ ಹಾನಿಗೂ ಕಾರಣವಾಗಿದೆ. 

ಅಂತೆಯೇ ದೇಶದ ಉತ್ತರ ಹಾಗೂ ಕೇಂದ್ರ ಭಾಗದಲ್ಲಿ ಮಾರ್ಚ್‌ 15ರ ತನಕ ಹಗುರವಾದ ಮಳೆಯಾಗಲಿದೆ. ಮಾರ್ಚ್‌ 16ರಿಂದ 22ರ ತನಕ ದೇಶದ ದಕ್ಷಿಣ ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.

1901ರ ಬಳಿಕ ಕಳೆದ ಫೆಬ್ರುವರಿಯು ಅತ್ಯಂತ ಬಿಸಿಲಿನಿಂದ ಕೂಡಿತ್ತು. ಈ ರೀತಿ ಹವಾಮಾನ ವಾತಾವರಣದಿಂದ ಮುಂಗಾರು ಪೂರ್ವ ಮಳೆ ಅವಧಿಗೂ ಮುನ್ನವೇ ಬರಲಿದೆ. ಸಾಮಾನ್ಯವಾಗಿ ಮುಂಗಾರು ಪೂರ್ವ ಮಾರುತಗಳು ಮಾರ್ಚ್‌ ಮಧ್ಯದಲ್ಲಿ ರಚನೆಯಾಗುತ್ತವೆ. ಈ ವರ್ಷ ಬೇಗ ಸೃಷ್ಟಿಯಾಗಿವೆ. ಹೆಚ್ಚಿರುವ ಉಷ್ಣಾಂಶವು ಇದಕ್ಕೆ ಕಾರಣವಾಗಿದೆ’ ಎಂದು ಸ್ಕೈಮೆಟ್‌ನ ಹವಾಮಾನ ತಜ್ಞ ಮಹೇಶ್‌ ಮಲಾವತ್‌ ಹೇಳಿದ್ದಾರೆ. 

ಮುಂದಿನ 24 ಗಂಟೆಗಳಲ್ಲಿ ದೇಶದ ಹಲವೆಡೆ ಮಳೆ
ಕೊಂಕಣದ ವಿವಿಧ ಪ್ರದೇಶಗಳಲ್ಲಿ ಬಿಸಿಗಾಳಿ ಮುಂದುವರಿದಿದ್ದು, ಮುಂದಿನ 24 ಗಂಟೆಗಳಲ್ಲಿ ಹವಾಮಾನ ಚಟುವಟಿಕೆ ಬಿರುಸುಗೊಳ್ಳುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ, ಪಶ್ಚಿಮ ಹಿಮಾಲಯ, ಉತ್ತರ ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ನೈಋತ್ಯ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದ್ದು, ಅಂತೆಯೇ ಸಿಕ್ಕಿಂ, ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಕೇರಳದ  ಹಲವೆಡೆಯಲ್ಲೂ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಸ್ಕೈ ಮೇಟ್ ವರದಿ ಮಾಡಿದೆ.

ಮಾರ್ಚ್ 14 ರಂದು ಆಗ್ನೇಯ ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಈಶಾನ್ಯ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಮಿಂಚು ಸಂಭವಿಸಬಹುದು. ಮುಂದಿನ 24 ರಿಂದ 48 ಗಂಟೆಗಳ ಅವಧಿಯಲ್ಲಿ ವಾಯುವ್ಯ ಮಧ್ಯ ಭಾರತದ ಮೇಲೆ ಹಗಲಿನ ತಾಪಮಾನವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕೊಂಕಣದ ಕೆಲವು ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿ ಮುಂದುವರಿಯಬಹುದು ಎಂದು ವರದಿಯಲ್ಲಿ ಉಲ್ಲೇಖಿಸಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *