

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಟು ಟೀಕಾಕಾರ, ಸಿದ್ಧಾಪುರ ಬಿ.ಜೆ.ಪಿ. ಯುವ ಮೋರ್ಚಾ ಮಾಜಿ ಅಧ್ಯಕ್ಷ ಹರೀಶ್ ಗೌಡರ್ ಅರಳಿಕೊಪ್ಪ ಮಂಗಳವಾರ ಅಧೀಕೃತವಾಗಿ ಜೆ.ಡಿ.ಎಸ್. ಸೇರ್ಪಡೆಯಾದರು. ಅವರೊಂದಿಗೆ ಬಿ.ಜೆ.ಪಿ.ಯಲ್ಲಿ ಗುರುತಿಸಿಕೊಂಡಿದ್ದ ವಿವೇಕ್ ನಾಯ್ಕ ಸೇರಿದಂತೆ ಕೆಲವರು ಹರೀಶ್ ಗೌಡರ್ ರೊಂದಿಗೆ ಬಿ.ಜೆ.ಪಿ. ತೊರೆದು ಜೆ.ಡಿ.ಎಸ್. ಸೇರಿದರು.

ಶಿರಸಿ-ಸಿದ್ಧಾಪುರ ಕ್ಷೇತ್ರದ ಜೆ.ಡಿ.ಎಸ್. ಅಭ್ಯರ್ಥಿ ಉಪೇಂದ್ರ ಪೈ ಅಧೀಕೃತವಾಗಿ ಚುನಾವಣಾ ಪ್ರಚಾರ ಪ್ರಾರಂಭಿಸಿದ್ದಾರೆ. ಸತೀಶ್ ಹೆಗಡೆ ಬೈಲಳ್ಳಿಯವರಿಗೆ ಸಿದ್ಧಾಪುರ ತಾಲೂಕಾ ಜೆ.ಡಿ.ಎಸ್. ಅಧ್ಯಕ್ಷರಾಗಿ ಕೆಲಸ ಮಾಡಲು ಅಧಿಕಾರ ಹಸ್ತಾಂತರಿಸಿದ ಪೈ ಇದು ಪ್ರಾರಂಭವಾಗಿದ್ದು ಶೀಘ್ರದಲ್ಲಿ ಸಾವಿರಾರು ಜನ ಅನ್ಯ ಪಕ್ಷಗಳ ಕಾರ್ಯಕರ್ತರು ಜೆ.ಡಿ.ಎಸ್.ಸೇರ್ಪಡೆಯಾಗುವವರಿದ್ದಾರೆ ಎಂದರು. ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲಿ ಅತಿ ಹೆಚ್ಚು ಮತ ಗಳಿಸಿದ ಬೂತ್ ನ ಅಧ್ಯಕ್ಷರು, ಸದಸ್ಯರನ್ನು ಸೂಕ್ತ ಸಂಭಾವನೆಯೊಂದಿಗೆ ಸನ್ಮಾನಿಸುವುದಾಗಿ ಅವರು ತಿಳಿಸಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
