ಸ್ವ ಕ್ಷೇತ್ರದಲ್ಲಿ ವಿರೋಧ ಎದುರಿಸುತ್ತಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ!

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಾನೂ ರಾಜಕೀಯ ಪ್ರಾರಂಭಿಸುತ್ತೇನೆ ಎಂದು ಶಿರಸಿಯಲ್ಲಿ ಪ್ರಕಟಿಸಿದ ಮಾರನೇ ದಿನವೇ ಸಿದ್ಧಾಪುರದಲ್ಲಿ ಬೇಡ್ಕಣಿಯಲ್ಲಿ ನಡೆದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಸಾರ್ವಜನಿಕರ ವಿರೋಧ ಎದುರಿಸಿದ್ದಾರೆ.

ಮೂರು ಬಾರಿ ಅಂಕೋಲಾ ಕ್ಷೇತ್ರ, ಮೂರು ಬಾರಿ ಶಿರಸಿ ಒಟ್ಟೂ ಆರು ಬಾರಿ ವಿಧಾನಸಭಾ ಅಧ್ಯಕ್ಷರಾಗಿ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕರು, ಸಚಿವರು, ವಿಧಾನಸಭಾ ಅಧ್ಯಕ್ಷರಾಗಿ ಹೆಸರು ಮಾಡಿದವರು. ಆದರೆ ಈ ಬಾರಿ ಅವರ ನಾಗಾಲೋಟಕ್ಕೆ ಕಮಲ ಪಡೆಯಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ.

ಸಿದ್ಧಾಪುರದ ಸ್ಥಳೀಯ ಬಿ.ಜೆ.ಪಿ. ಚುನಾಯಿತ ಪ್ರತಿನಿಧಿಗಳಲ್ಲಿ ಅರ್ಧಕ್ಕಿಂತ ಹೆಚ್ಚು ಜನರ ನೇರ ವಿರೋಧ ಮತ್ತು ಸ್ವಪಕ್ಷ,ಮುಖಂಡರುಗಳ ವಿರೋಧದಿಂದ ವಿಚಲಿತರಾದ ವಿಧಾನಸಭಾ ಅಧ್ಯಕ್ಷರಿಗೆ ಬೇಡ್ಕಣಿಯಲ್ಲಿ ವ್ಯಕ್ತವಾದ ವಿರೋಧ ನಿರೀಕ್ಷಿತ ಎನ್ನಲಾಗುತ್ತಿದೆ.

ಪ್ರತಿವರ್ಷದ ಯುಗಾದಿ ಉತ್ಸವ, ಕಾರ್ಯಕ್ರಮಗಳಲ್ಲಿ ಅನಾಯಾಸವಾಗಿ ಸನಾತನ ವೈದಿಕತೆಯನ್ನು ತುರುಕಿ ರಾಜಕೀಯ ಲಾಭ ಪಡೆಯುತಿದ್ದ ಉತ್ತರ ಕನ್ನಡ ಸಂಸದ ಮತ್ತು ಶಿರಸಿ ಶಾಸಕರು ಈ ಬಾರಿ ಸಿದ್ಧಾಪುರದ ಯುಗಾದಿ ಉತ್ಸವದಲ್ಲಿ ಕೂಡಾ ವೇದಿಕೆ ಏರಲು ವಿರೋಧ ವ್ಯಕ್ತವಾಗಿದೆ.

ಬಿ.ಜೆ.ಪಿ. ಪ್ರೇರಿತ ವೈದಿಕ ಸಂಘಟನೆಗಳು, ಹಿಂದೂ ಹೆಸರಿನ ರಾಜಕೀಯ ಲಾಭಾಕಾಂಕ್ಷಿಗಳೇ ಮುಂದೆ ನಿಂತು ಪ್ರತಿವರ್ಷ ಸಿದ್ಧಾಪುರದಲ್ಲಿ ನಡೆಸುತಿದ್ದ ಯುಗಾದಿ ಉತ್ಸವದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆಯವರನ್ನು ಆಹ್ವಾನಿಸುವ ಬಗ್ಗೆ ಚರ್ಚೆಯಾಗಿ ಬಿ.ಜೆ.ಪಿ.ಯ ಹಿರಿಯ ನಾಯಕರೊಬ್ಬರು ಮತ್ತು ಕಾಗೇರಿಯವರ ಆಪ್ತ ಉದ್ಯಮಿಗಳ ನಡುವೆ ವಾಗ್ವಾದವಾಗಿ ಅಂತಿಮವಾಗಿ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಸೇರಿದಂತೆ ಯಾವುದೇ ರಾಜಕಾರಣಿಗಳು ಯುಗಾದಿ ಉತ್ಸವದ ವೇದಿಕೆಯ ವಿಶೇಶ ಆಹ್ವಾನಿತರಾಗುವುದು ಬೇಡ ಎಂದು ತೀರ್ಮಾನವಾಗಿ ಶಾಸಕರು ಸಾಮಾನ್ಯ ಆಹ್ವಾನಿತರಾಗುವಂತಾಗಿದೆ.

ಈ ಎಲ್ಲಾ ಬೆಳವಣಿಗಳ ಹಿನ್ನೆಲೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಾರಿ ಚುನಾವಣೆ ಎದುರಿಸುವುದಿಲ್ಲ, ಸ್ಫರ್ಧಿಸುವುದಾದರೂ ಅನ್ಯ ಕ್ಷೇತ್ರಕ್ಕೆ ವಲಸೆ ಹೋಗುತ್ತಾರೆ ಎನ್ನುವ ವದಂತಿಗಳಿಗೆ ಪುಷ್ಠಿ ದೊರೆತಿದೆ. ಆದರೆ ಈ ಬೆಳವಣಿಗಳ ಬಗ್ಗೆ ತುಟಿ ಬಿಚ್ಚದ ಕಾಗೇರಿ ಈ ಬಾರಿಯೂ ನಾನೇ ಶಿರಸಿ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ಎಂದು ಹೇಳಿದ್ದಾರೆ. ಆದರೆ ಈ ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಈ ಬಾರಿ ಕಾಗೇರಿಯವರಿಗೆ ಶಿರಸಿ ಕ್ಷೇತ್ರದಲ್ಲಿ ವಿರೋಧ, ಅಪಸ್ವರಗಳೇ ಹೆಚ್ಚಾಗಿವೆ. ಈ ನಡುವೆ ಉಪೇಂದ್ರ ಪೈ ಆರ್ಭಟ ಕಾಂಗ್ರೆಸ್‌ ನವರಿಗಿಂತ ಹೆಚ್ಚು ಬಿ.ಜೆ.ಪಿ.ಯವರನ್ನು ಕಂಗೆಡಿಸಿದೆ ಎನ್ನಲಾಗುತ್ತಿದೆ. ಒಟ್ಟಾರೆ ಕಾಗೇರಿ ಈ ಬಾರಿ ಚುನಾವಣೆ ಘೋಷಣೆ ಮೊದಲೇ ಸ್ವಕ್ಷೇತ್ರದಲ್ಲಿ ವ್ಯಾಪಕ ವಿರೋಧ ಎದುರಿಸುತ್ತಿರುವುದು ದಿನದಿಂದ ದಿನಕ್ಕೆ ಸ್ಫಷ್ಟವಾಗುತ್ತಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *