ಸ್ವ ಕ್ಷೇತ್ರದಲ್ಲಿ ವಿರೋಧ ಎದುರಿಸುತ್ತಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ!

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಾನೂ ರಾಜಕೀಯ ಪ್ರಾರಂಭಿಸುತ್ತೇನೆ ಎಂದು ಶಿರಸಿಯಲ್ಲಿ ಪ್ರಕಟಿಸಿದ ಮಾರನೇ ದಿನವೇ ಸಿದ್ಧಾಪುರದಲ್ಲಿ ಬೇಡ್ಕಣಿಯಲ್ಲಿ ನಡೆದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಸಾರ್ವಜನಿಕರ ವಿರೋಧ ಎದುರಿಸಿದ್ದಾರೆ.

ಮೂರು ಬಾರಿ ಅಂಕೋಲಾ ಕ್ಷೇತ್ರ, ಮೂರು ಬಾರಿ ಶಿರಸಿ ಒಟ್ಟೂ ಆರು ಬಾರಿ ವಿಧಾನಸಭಾ ಅಧ್ಯಕ್ಷರಾಗಿ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕರು, ಸಚಿವರು, ವಿಧಾನಸಭಾ ಅಧ್ಯಕ್ಷರಾಗಿ ಹೆಸರು ಮಾಡಿದವರು. ಆದರೆ ಈ ಬಾರಿ ಅವರ ನಾಗಾಲೋಟಕ್ಕೆ ಕಮಲ ಪಡೆಯಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ.

ಸಿದ್ಧಾಪುರದ ಸ್ಥಳೀಯ ಬಿ.ಜೆ.ಪಿ. ಚುನಾಯಿತ ಪ್ರತಿನಿಧಿಗಳಲ್ಲಿ ಅರ್ಧಕ್ಕಿಂತ ಹೆಚ್ಚು ಜನರ ನೇರ ವಿರೋಧ ಮತ್ತು ಸ್ವಪಕ್ಷ,ಮುಖಂಡರುಗಳ ವಿರೋಧದಿಂದ ವಿಚಲಿತರಾದ ವಿಧಾನಸಭಾ ಅಧ್ಯಕ್ಷರಿಗೆ ಬೇಡ್ಕಣಿಯಲ್ಲಿ ವ್ಯಕ್ತವಾದ ವಿರೋಧ ನಿರೀಕ್ಷಿತ ಎನ್ನಲಾಗುತ್ತಿದೆ.

ಪ್ರತಿವರ್ಷದ ಯುಗಾದಿ ಉತ್ಸವ, ಕಾರ್ಯಕ್ರಮಗಳಲ್ಲಿ ಅನಾಯಾಸವಾಗಿ ಸನಾತನ ವೈದಿಕತೆಯನ್ನು ತುರುಕಿ ರಾಜಕೀಯ ಲಾಭ ಪಡೆಯುತಿದ್ದ ಉತ್ತರ ಕನ್ನಡ ಸಂಸದ ಮತ್ತು ಶಿರಸಿ ಶಾಸಕರು ಈ ಬಾರಿ ಸಿದ್ಧಾಪುರದ ಯುಗಾದಿ ಉತ್ಸವದಲ್ಲಿ ಕೂಡಾ ವೇದಿಕೆ ಏರಲು ವಿರೋಧ ವ್ಯಕ್ತವಾಗಿದೆ.

ಬಿ.ಜೆ.ಪಿ. ಪ್ರೇರಿತ ವೈದಿಕ ಸಂಘಟನೆಗಳು, ಹಿಂದೂ ಹೆಸರಿನ ರಾಜಕೀಯ ಲಾಭಾಕಾಂಕ್ಷಿಗಳೇ ಮುಂದೆ ನಿಂತು ಪ್ರತಿವರ್ಷ ಸಿದ್ಧಾಪುರದಲ್ಲಿ ನಡೆಸುತಿದ್ದ ಯುಗಾದಿ ಉತ್ಸವದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆಯವರನ್ನು ಆಹ್ವಾನಿಸುವ ಬಗ್ಗೆ ಚರ್ಚೆಯಾಗಿ ಬಿ.ಜೆ.ಪಿ.ಯ ಹಿರಿಯ ನಾಯಕರೊಬ್ಬರು ಮತ್ತು ಕಾಗೇರಿಯವರ ಆಪ್ತ ಉದ್ಯಮಿಗಳ ನಡುವೆ ವಾಗ್ವಾದವಾಗಿ ಅಂತಿಮವಾಗಿ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಸೇರಿದಂತೆ ಯಾವುದೇ ರಾಜಕಾರಣಿಗಳು ಯುಗಾದಿ ಉತ್ಸವದ ವೇದಿಕೆಯ ವಿಶೇಶ ಆಹ್ವಾನಿತರಾಗುವುದು ಬೇಡ ಎಂದು ತೀರ್ಮಾನವಾಗಿ ಶಾಸಕರು ಸಾಮಾನ್ಯ ಆಹ್ವಾನಿತರಾಗುವಂತಾಗಿದೆ.

ಈ ಎಲ್ಲಾ ಬೆಳವಣಿಗಳ ಹಿನ್ನೆಲೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಾರಿ ಚುನಾವಣೆ ಎದುರಿಸುವುದಿಲ್ಲ, ಸ್ಫರ್ಧಿಸುವುದಾದರೂ ಅನ್ಯ ಕ್ಷೇತ್ರಕ್ಕೆ ವಲಸೆ ಹೋಗುತ್ತಾರೆ ಎನ್ನುವ ವದಂತಿಗಳಿಗೆ ಪುಷ್ಠಿ ದೊರೆತಿದೆ. ಆದರೆ ಈ ಬೆಳವಣಿಗಳ ಬಗ್ಗೆ ತುಟಿ ಬಿಚ್ಚದ ಕಾಗೇರಿ ಈ ಬಾರಿಯೂ ನಾನೇ ಶಿರಸಿ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ಎಂದು ಹೇಳಿದ್ದಾರೆ. ಆದರೆ ಈ ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಈ ಬಾರಿ ಕಾಗೇರಿಯವರಿಗೆ ಶಿರಸಿ ಕ್ಷೇತ್ರದಲ್ಲಿ ವಿರೋಧ, ಅಪಸ್ವರಗಳೇ ಹೆಚ್ಚಾಗಿವೆ. ಈ ನಡುವೆ ಉಪೇಂದ್ರ ಪೈ ಆರ್ಭಟ ಕಾಂಗ್ರೆಸ್‌ ನವರಿಗಿಂತ ಹೆಚ್ಚು ಬಿ.ಜೆ.ಪಿ.ಯವರನ್ನು ಕಂಗೆಡಿಸಿದೆ ಎನ್ನಲಾಗುತ್ತಿದೆ. ಒಟ್ಟಾರೆ ಕಾಗೇರಿ ಈ ಬಾರಿ ಚುನಾವಣೆ ಘೋಷಣೆ ಮೊದಲೇ ಸ್ವಕ್ಷೇತ್ರದಲ್ಲಿ ವ್ಯಾಪಕ ವಿರೋಧ ಎದುರಿಸುತ್ತಿರುವುದು ದಿನದಿಂದ ದಿನಕ್ಕೆ ಸ್ಫಷ್ಟವಾಗುತ್ತಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *