local news-ಅಕಾಲಿಕವಾಗಿ ಸಾವನ್ನಪ್ಪಿದ ಆಕಳಿಗೆ ವಿಮಾ ಪರಿಹಾರ

ಸಿದ್ದಾಪುರ ತಾಲೂಕಿನ ಹೂವಿನಮನೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯ ಚಂದ್ರಹಾಸ ವಿ.ಹಸ್ಲರ್ ಅವರ ಆಕಳು ಅಕಾಲಿಕವಾಗಿ ಸಾವನ್ನಪ್ಪಿದ್ದರಿಂದ ಅದರ ವಿಮಾ ಚೆಕ್‌ನ್ನು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪರಶುರಾಮ ವಿ.ನಾಯ್ಕ ಬೇಡ್ಕಣಿ ಬುಧವಾರ ವಿತರಿಸಿದರು. ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಡಾ.ವಿನಾಯಕ ಬಿರಾದಾರ, ವಿಸ್ತರಣಾಧಿಕಾರಿ ಚಂದನ್ ನಾಯ್ಕ, ಸಂಘದ ಕಾರ್ಯದರ್ಶಿ ಸತೀಶ ಹೆಗಡೆ ಆಲ್ಮನೆ ಇತರರಿದ್ದರು.

ಇಂದು ಹೂಕಾರ ನಲ್ಲಿ ಕಾರ್ಯಕ್ರಮ-
ಸಿದ್ದಾಪುರ
ತಾಲೂಕಿನ ಹೂಕಾರ ಗ್ರಾಮ ರಕ್ಷಕ ದೇವತೆಗಳಾದ ಮಹಾಗಣಪತಿ, ಚೌಡೇಶ್ವರಿ, ನಾಗದೇವರು, ಚಂಡೇಶ್ವರ, ಅಮ್ಮನವರು, ವನದುರ್ಗಾ , ಮಹಾಸತಿ, ಜಟಗೇಶ್ವರ ಮತ್ತು ಕ್ಷೇತ್ರಪಾಲ ಶಕ್ತಿಗಳ ವಾರ್ಷಿಕೋತ್ಸವ ಗೇರುಸೊಪ್ಪ ಗ್ರಾಮದ ಶಕ್ತಿ ದೇವತೆಯಾದ ಮಾತೋಬಾರ ಶ್ರೀ ಗುತ್ತಿಕಾ ಪರಮೇಶ್ವರಿ ದೇವಿಯ ಉಪಸ್ಥಿತಿಯಲ್ಲಿ ಮಾ.೨೩ರಂದು ನಡೆಯಲಿದೆ.
ಬೆಳಗ್ಗೆ ಬ್ರಹ್ಮಕಲಶಾಭಿಷೇಕ, ಅನ್ನಪೂರ್ಣೇಶ್ವರಿ ಪೂಜೆ, ಸತ್ಯನಾರಾಯಣ ವೃತ,ಕಲಶ ಪೂಜೆ, ಪಲ್ಲಕ್ಕಿ ಉತ್ಸವ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.


ರಾತ್ರಿ ೯ಕ್ಕೆ ನಡೆಯುವ ಸಭಾಕಾರ್ಯಕ್ರಮವನ್ನು ಉದ್ಯಮಿ ಉಪೇಂದ್ರ ಪೈ ಶಿರಸಿ ಉದ್ಘಾಟಿಸುವರು. ಸುಧೀರ್ ಗೌಡರ್ ಹೆಗ್ಗೋಡಮನೆ, ಕೆ.ಪಿ.ಗೌಡರ್ ಹೂಕಾರ, ಪಿ.ವಿ.ಹೆಗಡೆ ಹೊಸಗದ್ದೆ, ನ್ಯಾಯವಾದಿ ಕೆ.ಎಂ.ನಾಯ್ಕ ಸಿದ್ದಾಪುರ, ಗ್ರಾಪಂ ಸದಸ್ಯ ಅನಂತ ಹೆಗಡೆ ಹೊಸಗದ್ದೆ, ಸೀತಾರಾಮ ಶೆಟ್ಟಿ, ಈರಮ್ಮ ಭೋವಿ, ಪತ್ರಕರ್ತ ರಮೇಶ ಹೆಗಡೆ ಹಾರ್ಸಿಮನೆ, ಉಮಾ ವಿ.ಹೆಗಡೆ ಹೊಸಗದ್ದೆ, ಅಶೋಕ ೧೬ನೇಮೈಲಕಲ್, ಉಮಾಪತಿ ತೌಡತ್ತಿ, ಮಂಜುನಾಥ ಎನ್.ನಾಯ್ಕ ಮುತ್ತಿಗೆ ಉಪಸ್ಥಿತರಿರುತ್ತಾರೆ.
ನಂತರ ಸರಸ್ವತಿ ಕಲಾ ಟ್ರಸ್ಟ್ (ರಿ) ಹೊಸಗದ್ದೆ ಇವರಿಂದ ಜಾಂಬವತಿ ಕಲ್ಯಾಣ ಮತ್ತು ಶರಸೇತು ಬಂಧನ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *