ಆಧಾರ್-ಪ್ಯಾನ್ ಜೋಡಣೆಗೆ ಮಾ.31 ಕೊನೆಯ ದಿನ: ನೀವಿನ್ನೂ ಜೋಡಣೆ ಮಾಡದಿದ್ದಲ್ಲಿ ಈ ಪ್ರಕ್ರಿಯೆಗಳನ್ನು ಅನುಸರಿಸಿ… 

ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ. 

Aadhar-PAN linking (file pic)

ಬೆಂಗಳೂರು: ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ. 

ನಿರ್ದಿಷ್ಟ ಸೇವೆಗಳನ್ನು ಪಡೆಯುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಾಗಿದ್ದು,  ಐಟಿಆರ್ ಎಸ್ ನ್ನು ಸಲ್ಲಿಸುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಲ್ಲ. ಆದರೆ ಐಟಿ ಇಲಾಖೆ ಆಧಾರ್ ಪ್ಯಾನ್ ಕಾರ್ಡ್ ಜೋಡಣೆಯಾಗದೇ ಇದ್ದಲ್ಲಿ ರಿಟರ್ನ್ಸ್ ಪ್ರಕ್ರಿಯೆಯನ್ನು ಮುಂದುವರೆಸುವುದಿಲ್ಲ ಎಂಬುದು ಗಮನಾರ್ಗ ವಿಷಯವಾಗಿದೆ. 

ಹಲವರು ಈಗಾಗಲೇ ಜೋಡಣೆ ಮಾಡುತ್ತಿದ್ದು ಇನ್ನೂ ಕೆಲವರು ಜೋಡಣೆಯಾಗಿದೆಯೇ ಇಲ್ಲವೇ ಎಂಬುದನ್ನು ಮರೆತಿದ್ದಾರೆ. ಆಧಾರ್-ಪ್ಯಾನ್ ಜೋಡಣೆಯಾಗಿದೆಯೇ ಇಲ್ಲವೇ? ಎಂಬುದನ್ನು ತಿಳಿಯುವುದಕ್ಕೆ ಆನ್ ಲೈನ್ ಹಾಗೂ ಆಫ್ ಲೈನ್ ಗಳಲ್ಲಿ ಅವಕಾಶವಿದೆ.

ಆನ್ ಲೈನ್ ನಲ್ಲಿ ಪರಿಶೀಲಿಸುವುದು ಹೇಗೆ? 

  1. ಆದಾಯ ತೆರಿಗೆ ಇ-ಫೈಲಿಂಗ್ ವೆಬ್ ಸೈಟ್ (https://onlineservices.tin.egov-nsdl.com/etaxnew/tdsnontds.jsp) ಗೆ ಭೇಟಿ ನೀಡಿ, ಆಧಾರ್ ಸ್ಟೇಟಸ್ ಎಂಬ ಆಯ್ಕೆ ಪರಿಶೀಲಿಸಿ. 
  2. ಪ್ಯಾನ್- ಆಧಾರ್ ನಂಬರ್ ನಮೂದಿಸಿ 
  3. ಅಲ್ಲಿ View Link Aadhaar Status ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿದರೆ, ಮುಂದಿನ ಪರದೆಯಲ್ಲಿ ಸ್ಟೇಟಸ್ ಪ್ರಕಟವಾಗಲಿದೆ. 

ಒಂದು ವೇಳೆ ಜೋಡಣೆಯಾಗದೇ ಇದ್ದಲ್ಲಿ ಏನು ಮಾಡಬೇಕು? 

ಪರಿಶೀಲನೆ ವೇಳೆ ಜೋಡಣೆಯಾಗದೇ ಇರುವುದು ಕಂಡುಬಂದಲ್ಲಿ ಈ ಕ್ರಮಗಳನ್ನು ಅನುಸರಿಸಬಹುದಾಗಿದೆ. 

ಗ್ರಾಹಕರು ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ವೆಬ್ ಸಟ್ ಮೂಲಕ ಆಧಾರ್-ಪ್ಯಾನ್ ಜೋಡಣೆ ಮಾಡಬಹುದಾಗಿದೆ. ಇನ್ನು ಇದಕ್ಕೂ ಮುನ್ನ ದಂಡ ಪಾವತಿಸಬೇಕಿರುವುದರಿಂದ  ಗ್ರಾಹಕರು ನ್ಯಾಷನಲ್ ಸೆಕ್ಯುರಿಟೀಸ್ ಡಿಪಾಸಿಟರಿ ಲಿಮಿಟೆಡ್ (NSDL) ಪೋರ್ಟಲ್ ಗೆ ಭೇಟಿ ನೀಡಿಬೇಕಾಗುತ್ತದೆ. ಮತ್ತು ಚಲನ್ ಸಂಖ್ಯೆ. ITNS 280 ರ ಅಡಿಯಲ್ಲಿ  ಮೇಜರ್ ಹೆಡ್ 0021 (ಕಂಪನಿಗಳನ್ನು ಹೊರತುಪಡಿಸಿ ಆದಾಯ ತೆರಿಗೆ) ಮತ್ತು ಮೈನರ್ ಹೆಡ್ 500 (ಇತರ ರಸೀದಿಗಳು) ನೊಂದಿಗೆ ದಂಡವನ್ನು ಪಾವತಿ ಮಾಡಬೇಕಾಗುತ್ತದೆ. 

ಪ್ರಕ್ರಿಯೆಗಳ ವಿವರ

  1. ಆಧಾರ್-ಪ್ಯಾನ್ ಜೋಡಣೆಗೆ ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ವೆಬ್ ಸೈಟ್ ಗೆ ಭೇಟಿ ನೀಡಿ, ಅಲ್ಲಿ ದಂಡ ಪಾವತಿಯನ್ನು ಕೇಳಲಾಗುತ್ತದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ, ಗ್ರಾಹಕರಿಗೆ ಎನ್ಎಸ್ ಡಿಎಲ್ ವೆಬ್ ಸೈಟ್ ಕಾಣಿಸುತ್ತದೆ. 
  2. ಪ್ಯಾನ್-ಆಧಾರ್ ಲಿಂಕ್ ವಿನಂತಿಯನ್ನು ಸಲ್ಲಿಸಲು ಅಲ್ಲಿರುವ ಆಯ್ಕೆಗಳ ಪೈಕಿ ಚಲನ್ ನಂ.ITNS 280 ಅಡಿಯಲ್ಲಿ ಮುಂದುವರೆಯಿರಿ. 
  3. ಅಲ್ಲಿ (tax applicable) ಅನ್ವಯವಾಗುವ ತೆರಿಗೆಯನ್ನು ಆಯ್ಕೆ ಮಾಡಿ. ನಂತರ ಒಂದೇ ಚಲನ್‌ನಲ್ಲಿ ಮೇಜರ್ ಹೆಡ್ 0021 (ಕಂಪನಿಗಳನ್ನು ಹೊರತುಪಡಿಸಿ ಆದಾಯ ತೆರಿಗೆ) ಮತ್ತು ಮೈನರ್ ಹೆಡ್ 500 (ಇತರ ರಶೀದಿಗಳು) ಅಡಿಯಲ್ಲಿ ದಂಡ ಪಾವತಿ ಮಾಡಿ 
  4.  ಪೇಮೆಂಟ್ ಮೋಡ್ ನ್ನು ಆಯ್ಕೆ ಮಾಡಿ ವಿವರ ಸಲ್ಲಿಸಿ
  5. ಪ್ಯಾನ್, ವಿಳಾಸ, ಮೌಲ್ಯಮಾಪನ ವರ್ಷವನ್ನು ನಮೂದಿಸಿ 
  6.  ಕ್ಯಾಪ್ಚಾ ನಮೂದಿಸಿ ಪಾವತಿ ಮಾಡಿ. 

ದಂಡ ಪಾವತಿ ಮಾಡಿದ ಬಳಿಕ 4-5 ದಿನಗಳಲ್ಲಿ ಪ್ಯಾನ್- ಆಧಾರ್ ಜೋಡಣೆಗೆ ಮನವಿ ಸಲ್ಲಿಸಿ

ದಂಡ ಪಾವತಿಸಿದ 4-5 ದಿನಗಳ ಬಳಿಕ ಜೋಡಣೆಗೆ ಮಾಡಬೇಕಾದ ಪ್ರಕ್ರಿಯೆ ಹೀಗಿದೆ

  1. ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್ ಗೆ ಹೋಗಿ 
  2. ಮುಖ್ಯ ಪುಟದ (home page) ನ ಎಡ ಭಾಗದಲ್ಲಿನ ಕ್ವಿಕ್ ಲಿಂಕ್ಸ್ (Quick Links) ಅಡಿಯಲ್ಲಿ ಕಾಣುವ ಲಿಂಕ್ ಆಧಾರ್ ನ್ನು ಆಯ್ಕೆ ಮಾಡಿ. 
  3. ನಂತರ ಪ್ಯಾನ್ ಹಾಗೂ ಆಧಾರ್ ನಂಬರ್ ನಮೂಬಿಸಿ ವ್ಯಾಲಿಡೇಟ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ 
  4. ನಿಮ್ಮ ಪಾವತಿ ವಿವರಗಳನ್ನು ದೃಢೀಪಡಿಸಲಾಗಿದೆ ಎಂಬ ಸಂದೇಶ ಪರದೆ ಮೇಲೆ ಕಾಣಿಸುತ್ತದೆ. ಮುಂದುವರೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ 
  5. ವೆಬ್ ಸೈಟ್ ನಲ್ಲಿ ಕೆಳಲಾಗುವ ವಿವರಗಳನ್ನು ನೀಡಿ, ಲಿಂಕ್ ಆಧಾರ್ ಆಯ್ಕೆಯನ್ನು ಕ್ಲಿಕ್ ಮಾಡಿ.
  6. ಮೊಬೈಲ್ ನಂಬರ್ ಗೆ ಬಂದಿರುವ ಒಟಿಪಿಯನ್ನು ನಮೂದಿಸಿ
  7. ಪ್ಯಾನ್- ಆಧಾರ್ ಜೋಡಣೆಗೆ ಮನವಿ ಸಲ್ಲಿಕೆ ಯಶಸ್ವಿಯಾಗುತ್ತದೆ.

ತೆರಿಗೆ ಪಾವತಿದಾರರು ಪ್ಯಾನ್ ಕಾರ್ಡ್ ಕೇಂದ್ರಕ್ಕೆ ಭೇಟಿ ನೀಡಿ ನಿರ್ದಿಷ್ಟ ಫಾರ್ಮ್ ತುಂಬಿ, ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನ ಫೋಟೋಕಾಪಿಗಳನ್ನು ಸಲ್ಲಿಕೆ ಮಾಡುವ ಮೂಲಕವೂ ಆಧಾರ್-ಪ್ಯಾನ್ ಜೋಡಣೆ ಮಾಡಬಹುದಾಗಿದೆ.  (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *