ಕಾಂಗ್ರೆಸ್‌ ಎರಡನೇ ಪಟ್ಟಿ ….ಇನ್ನೂ ೩-೪ ದಿನ ಅಷ್ಟೇ ಬಾಕಿ

ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ: ಡಿ.ಕೆ.ಶಿವಕುಮಾರ್

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಹೇಳಿದ್ದಾರೆ.

DK Shivakumar

ಬೆಂಗಳೂರು:‌ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2ನೇ ಪಟ್ಟಿಯಲ್ಲಿ ಬಹುತೇಕ ಶೇ. 95 ರಷ್ಟು ಹಾಲಿ ಶಾಸಕರಿಗೇ ಟಿಕೆಟ್ ಸಿಗಲಿದೆ. ಕೆಲವು ಕ್ಷೇತ್ರಗಳಲ್ಲಿ ಮಾತುಕತೆ ಸಂಧಾನ ನಡೆಯುತ್ತಿದ್ದು, ಎರಡನೇ ಪಟ್ಟಿಯಲ್ಲಿ ಉಳಿದ ಹೆಸರುಗಳು ಪ್ರಕಟವಾಗಲಿದೆ ಎಂದು ಹೇಳಿದರು.

ಧ್ರುವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡಿರುವ ವಿಚಾರವಾಗಿ ಮಾತನಾಡಿ, ಈ ಕ್ಷೇತ್ರದಲ್ಲಿ ಧ್ರುವನಾರಾಯಣ ಅವರು ಸ್ಪರ್ಧಿಸಬೇಕಿತ್ತು. ಆದರೆ, ಅವರು ನಮ್ಮನ್ನು ಅಗಲಿದ್ದಾರೆ. ಹೀಗಾಗಿ ಯುವಕರಾದ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆಂದು ತಿಳಿಸಿದರು.

ರಾಜಾಜಿನಗರ ಕ್ಷೇತ್ರದಲ್ಲಿ ವಿರೋಧದ ನಡುವೆ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಿರುವ ಕುರಿತು ಮಾತನಾಡಿ, ಪುಟ್ಟಣ್ಣ ಅವರು ನಾಲ್ಕೂವರೆ ವರ್ಷಗಳ ಪರಿಷತ್ ಅಧಿಕಾರ ತ್ಯಜಿಸಿ ಪಕ್ಷ ಸೇರಿದ್ದಾರೆ. ಹೀಗಾಗಿ ಅವರಿಗೆ ಒಂದು ಅವಕಾಶ ಕಲ್ಪಿಸಲು ಪಕ್ಷ ತೀರ್ಮಾನಿಸಿದೆ. ತೀರ್ಥಹಳ್ಳಿ ಸೇರಿದಂತೆ ಪ್ರಮುಖ ಸಂಧಾನ ಕ್ಷೇತ್ರಗಳಲ್ಲಿ ಟಿಕೆಟ್ ಕುರಿತು ಎಲ್ಲವೂ ಸರಿ ಹೋಗಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಮಾತನಾಡಿ, ‘ಕ್ಷೇತ್ರ ಆಯ್ಕೆಯನ್ನು ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅವರು ವರುಣಾದಿಂದ ಸ್ಪರ್ಧಿಸಲು ಇಚ್ಚಿಸಿದ್ದು, ಪಕ್ಷ ಟಿಕೆಟ್ ನೀಡಿದೆ ಎಂದರು.

ಇನ್ನೂ ಕೋಲಾರ ಹಾಗೂ ಬಾದಾಮಿ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸಬಹುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಈ ಪ್ರಶ್ನೆಯನ್ನು ಪಕ್ಷದ ಹೈಕಮಾಂಡ್ ಗೆ ಕೇಳಬೇಕು ಎಂದು ತಿಳಿಸಿದರು.

ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕದಲ್ಲಿ ಇಬ್ಬರು ಬಿಜೆಪಿ ಶಾಸಕರು ಚೆಕ್ ಬೌನ್ಸ್ ಹಾಗೂ ಇತರೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅವರನ್ನು ಅನರ್ಹಗೊಳಿಸಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಅವರಿಗೆ ಬೇರೆ, ನಮಗೆ ಬೇರೆ ಕಾನೂನು ಇದೆಯೇ? ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದು, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡಲಾಗಿದೆ. ನಾವು ಇದನ್ನು ಖಂಡಿಸುತ್ತೇವೆ. ನ್ಯಾಯಾಲಯದಲ್ಲಿ ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *