ಕಾಂಗ್ರೆಸ್‌ ಎರಡನೇ ಪಟ್ಟಿ ….ಇನ್ನೂ ೩-೪ ದಿನ ಅಷ್ಟೇ ಬಾಕಿ

ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ: ಡಿ.ಕೆ.ಶಿವಕುಮಾರ್

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಹೇಳಿದ್ದಾರೆ.

DK Shivakumar

ಬೆಂಗಳೂರು:‌ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2ನೇ ಪಟ್ಟಿಯಲ್ಲಿ ಬಹುತೇಕ ಶೇ. 95 ರಷ್ಟು ಹಾಲಿ ಶಾಸಕರಿಗೇ ಟಿಕೆಟ್ ಸಿಗಲಿದೆ. ಕೆಲವು ಕ್ಷೇತ್ರಗಳಲ್ಲಿ ಮಾತುಕತೆ ಸಂಧಾನ ನಡೆಯುತ್ತಿದ್ದು, ಎರಡನೇ ಪಟ್ಟಿಯಲ್ಲಿ ಉಳಿದ ಹೆಸರುಗಳು ಪ್ರಕಟವಾಗಲಿದೆ ಎಂದು ಹೇಳಿದರು.

ಧ್ರುವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡಿರುವ ವಿಚಾರವಾಗಿ ಮಾತನಾಡಿ, ಈ ಕ್ಷೇತ್ರದಲ್ಲಿ ಧ್ರುವನಾರಾಯಣ ಅವರು ಸ್ಪರ್ಧಿಸಬೇಕಿತ್ತು. ಆದರೆ, ಅವರು ನಮ್ಮನ್ನು ಅಗಲಿದ್ದಾರೆ. ಹೀಗಾಗಿ ಯುವಕರಾದ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆಂದು ತಿಳಿಸಿದರು.

ರಾಜಾಜಿನಗರ ಕ್ಷೇತ್ರದಲ್ಲಿ ವಿರೋಧದ ನಡುವೆ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಿರುವ ಕುರಿತು ಮಾತನಾಡಿ, ಪುಟ್ಟಣ್ಣ ಅವರು ನಾಲ್ಕೂವರೆ ವರ್ಷಗಳ ಪರಿಷತ್ ಅಧಿಕಾರ ತ್ಯಜಿಸಿ ಪಕ್ಷ ಸೇರಿದ್ದಾರೆ. ಹೀಗಾಗಿ ಅವರಿಗೆ ಒಂದು ಅವಕಾಶ ಕಲ್ಪಿಸಲು ಪಕ್ಷ ತೀರ್ಮಾನಿಸಿದೆ. ತೀರ್ಥಹಳ್ಳಿ ಸೇರಿದಂತೆ ಪ್ರಮುಖ ಸಂಧಾನ ಕ್ಷೇತ್ರಗಳಲ್ಲಿ ಟಿಕೆಟ್ ಕುರಿತು ಎಲ್ಲವೂ ಸರಿ ಹೋಗಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಮಾತನಾಡಿ, ‘ಕ್ಷೇತ್ರ ಆಯ್ಕೆಯನ್ನು ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅವರು ವರುಣಾದಿಂದ ಸ್ಪರ್ಧಿಸಲು ಇಚ್ಚಿಸಿದ್ದು, ಪಕ್ಷ ಟಿಕೆಟ್ ನೀಡಿದೆ ಎಂದರು.

ಇನ್ನೂ ಕೋಲಾರ ಹಾಗೂ ಬಾದಾಮಿ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸಬಹುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಈ ಪ್ರಶ್ನೆಯನ್ನು ಪಕ್ಷದ ಹೈಕಮಾಂಡ್ ಗೆ ಕೇಳಬೇಕು ಎಂದು ತಿಳಿಸಿದರು.

ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕದಲ್ಲಿ ಇಬ್ಬರು ಬಿಜೆಪಿ ಶಾಸಕರು ಚೆಕ್ ಬೌನ್ಸ್ ಹಾಗೂ ಇತರೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅವರನ್ನು ಅನರ್ಹಗೊಳಿಸಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಅವರಿಗೆ ಬೇರೆ, ನಮಗೆ ಬೇರೆ ಕಾನೂನು ಇದೆಯೇ? ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದು, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡಲಾಗಿದೆ. ನಾವು ಇದನ್ನು ಖಂಡಿಸುತ್ತೇವೆ. ನ್ಯಾಯಾಲಯದಲ್ಲಿ ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *