ಮೋದಿಗಳು ಕಳ್ಳರು ಪ್ರಕರಣ_ ನನ್ನನ್ನು ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಹೋರಾಟವನ್ನು, ಸತ್ಯ, ನ್ಯಾಯ-ನಿಷ್ಠೆ ಪರ ಹೋರಾಟವನ್ನು ಮುಂದುವರಿಸುತ್ತೇನೆ. ನಾನು ಸಂಸತ್ತಿನ ಒಳಗೆ ಇದ್ದೇನೋ ಇಲ್ಲವೋ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಛರಿಸಿದ್ದಾರೆ.

ಅದಾನಿ ಕುರಿತ ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಮೋದಿ ಹೆದರಿ ನನ್ನನ್ನು ಅನರ್ಹಗೊಳಿಸಲಾಗಿದೆ: ರಾಹುಲ್ ಗಾಂಧಿ

Rahul Gandhi at press meet in AICC headquarter Delhi

ನವದೆಹಲಿ: ನನ್ನನ್ನು ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಹೋರಾಟವನ್ನು, ಸತ್ಯ, ನ್ಯಾಯ-ನಿಷ್ಠೆ ಪರ ಹೋರಾಟವನ್ನು ಮುಂದುವರಿಸುತ್ತೇನೆ. ನಾನು ಸಂಸತ್ತಿನ ಒಳಗೆ ಇದ್ದೇನೋ ಇಲ್ಲವೋ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಛರಿಸಿದ್ದಾರೆ.

2019 ರ ಲೋಕಸಭೆ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಕೋಲಾರದಲ್ಲಿ ರಾಹುಲ್ ಗಾಂಧಿ ಭಾಷಣ ಮಾಡುತ್ತಿದ್ದ ವೇಳೆ ‘ಮೋದಿ ಉಪನಾಮ’ ಹೇಳಿಕೆ ವಿಚಾರವಾಗಿ ಆಡಿದ ಮಾತಿನ ವಿರುದ್ಧ ಗುಜರಾತ್ ನ ಬಿಜೆಪಿ ಮುಖಂಡರೊಬ್ಬರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ, ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. 

ಈ ವಿಚಾರವಾಗಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ, ಅಂದು ನಾನು ಮಾಡಿರುವ ಭಾಷಣದಲ್ಲಿ ಯಾವುದೇ ನಿರ್ದಿಷ್ಟ ಜಾತಿಯನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿರಲಿಲ್ಲ. ಅದಾನಿ ಕುರಿತ ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಹೆದರಿದ್ದು, ಅವರ ಕಣ್ಣಲ್ಲಿ ಅದನ್ನು ಕಂಡಿದ್ದೇನೆ. ಅದಕ್ಕಾಗಿಯೇ, ಮೊದಲು ಗೊಂದಲಕ್ಕೀಡಾಗಿ ನಂತರ ನನ್ನನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸತ್ಯವೇ ನನಗೆ ಮುಖ್ಯ: ಸತ್ಯ ಬಿಟ್ಟರೆ ನನಗೆ ಬೇರಾವುದೇ ವಿಷಯದಲ್ಲಿ ಆಸಕ್ತಿಯಿಲ್ಲ, ಸತ್ಯ ಹೇಳುವುದೇ ನನ್ನ ಕೆಲಸವಾಗಿದ್ದು, ನಾನು ಅನರ್ಹವಾಗಲಿ ಅಥವಾ ಬಂಧನಕ್ಕೊಳಗಾದರೂ ಅದನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ಈ ದೇಶ ನನಗೆ ಎಲ್ಲವನ್ನೂ ಕೊಟ್ಟಿದೆ,ಹೀಗಾಗಿ ನಾನು ಇದನ್ನು ಮಾಡುತ್ತೇನೆ ಎಂದರು.

ಇಡೀ ನಾಟಕ: ಈ ವಿದ್ಯಮಾನವಿಡೀ ನಾಟಕ, ಅದಾನಿ ಶೆಲ್ ಕಂಪನಿಗಳಿಗೆ 20 ಸಾವಿರ ಕೋಟಿ ರೂಪಾಯಿ ಹೇಗೆ ಹೋಯಿತು ಎಂಬ ಸರಳ ಪ್ರಶ್ನೆಯಿಂದ ಪ್ರಧಾನಿಯನ್ನು ರಕ್ಷಿಸಲು ನಡೆಸಿರುವ ಸಂಪೂರ್ಣ ನಾಟಕವಿದು. ಈ ಬೆದರಿಕೆ, ಅನರ್ಹತೆ ಅಥವಾ ಜೈಲು ಶಿಕ್ಷೆಗೆ ನಾನು ಹೆದರುವುದಿಲ್ಲ ಎಂದು ಗುಡುಗಿದರು.

ಅದಾನಿ ಮತ್ತು ಪ್ರಧಾನಿ ಮೋದಿ ನಡುವಿನ ಸಂಬಂಧಕ್ಕೆ ನನಗೆ ಉತ್ತರ ಸಿಗಬೇಕು: ಅದಾನಿ ಕುರಿತು ನಾನು ಒಂದೇ ಒಂದು ಪ್ರಶ್ನೆ ಕೇಳಿದ್ದು, ಪ್ರಶ್ನೆ ಕೇಳುವುದನ್ನು ನಾನು ನಿಲ್ಲಿಸುವುದಿಲ್ಲ, ದೇಶದ ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಟ ಮುಂದುವರಿಸುತ್ತೇನೆ. ಸಂಸತ್ತಿನಲ್ಲಿ ಮಾಡಿದ ನನ್ನ ಭಾಷಣವನ್ನು ತೆಗೆದುಹಾಕಲಾಯಿತು.  ನಂತರ ನಾನು ಲೋಕಸಭೆ ಸ್ಪೀಕರ್‌ಗೆ ವಿವರವಾದ ಉತ್ತರವನ್ನು ಬರೆದೆ. ಕೆಲವು ಮಂತ್ರಿಗಳು ನನ್ನ ಬಗ್ಗೆ ಸುಳ್ಳು ಹೇಳಿದರು, ನಾನು ವಿದೇಶಿ ಶಕ್ತಿಗಳ ಸಹಾಯ ಪಡೆದಿದ್ದೇನೆ ಎಂದು. ಆದರೆ ನಾನು ಅಂತಹ ಯಾವುದೇ ಕೆಲಸ ಮಾಡಿಲ್ಲ. ನಾನು ಪ್ರಶ್ನೆ ಕೇಳುವುದನ್ನು ನಿಲ್ಲಿಸುವುದಿಲ್ಲ, ಪ್ರಧಾನಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧವನ್ನು ಪ್ರಶ್ನಿಸುತ್ತಲೇ ಇರುತ್ತೇನೆ ಎಂದರು. 

ದೇಶದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಈ ಹಿಂದೆಯೂ ಹಲವು ಬಾರಿ ಹೇಳಿದ್ದೆ. ಇಂತಹ ಉದಾಹರಣೆಗಳನ್ನು ನಾವು ಪ್ರತಿದಿನ ನೋಡುತ್ತಿದ್ದೇವೆ. ಪ್ರಧಾನಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧದ ಬಗ್ಗೆ ನಾನು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದೆ ಎಂದರು. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *