ಶ್ರೀ ರಾಮತಾರಕ ಜಪಯಜ್ಞ ಪೂರ್ವತಯಾರಿ


ಸಿದ್ದಾಪುರ
ತಾಲೂಕಿನ ಶಿರಳಗಿಯ ಶ್ರೀ ಚೈತನ್ಯ ರಾಜಾರಾಮ ಕ್ಷೇತ್ರದಲ್ಲಿ ಮಾ.೩೦ರಂದು ಲೋಕಕಲ್ಯಾಣಾರ್ಥವಾಗಿ ಜರುಗಲಿರುವ ತ್ರಯೋದಶ ಕೋಟಿ ಶ್ರೀರಾಮತಾರಕಮಂತ್ರ ಜಪ ಯಜ್ಞದ ಮಂಗಲೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮ, ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತಂತೆ ಪೂರ್ವಭಾವಿ ಸಭೆ ಶ್ರೀ ಚೈತನ್ಯ ರಾಜಾರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳು ಹಾಗೂ ವಿವಿಧ ಸಮಿತಿಗಳ ಮುಖ್ಯಸ್ಥರ ಉಪಸ್ಥಿತಿಯಲ್ಲಿ ನಡೆಯಿತು.


ಶ್ರೀಗಳು ಈ ಸಂದರ್ಭದಲ್ಲಿ ಮಾತನಾಡಿ ನ.೧ರಿಂದ ತ್ರಯೋದಶ ಕೋಟಿ ಶ್ರೀರಾಮತಾರಕಮಂತ್ರ ಜಪಯಜ್ಞವನ್ನು ಆರಂಭಿಸಿದ್ದು ಎಲ್ಲರ ಸಹಕಾರದೊಂದಿಗೆ ೨೪ಕೋಟಿಗೂ ಹೆಚ್ಚು ಶ್ರೀರಾಮತಾರಕಮಂತ್ರ ಜಪವಾಗಿದೆ. ಈ ಜಪಯಜ್ಞದ ಮಂಗಲೋತ್ಸವದ ಕುರಿತಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಎಲ್ಲರೂ ಸ್ವಯಂಸ್ಪೂರ್ತಿಯಿಂದ ತಮ್ಮ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ. ೧೩ಕುಂಡಗಳಲ್ಲಿ ಶ್ರೀರಾಮತಾರಕ ಹವನ, ಶ್ರೀರಾಮ ಪರಿವಾರಕ್ಕೆ ವಿಶೇಷ ಪೂಜೆ ನಡೆಯಲಿದ್ದು ಹೋಮಕುಂಡದ ನಿರ್ಮಾಣ ಕಾರ್ಯ ನಡೆದಿದೆ. ೨೫ಕ್ಕೂ ಹೆಚ್ಚು ಋತ್ವಿಜರು ಮತ್ತು ಸಹಾಯಕರು ಪಾಲ್ಗೊಳ್ಳಲಿದ್ದಾರೆ. ಮಾ.೩೦ರ ಬೆಳಗ್ಗೆ ೮ರಿಂದ ಹವನ ನಂತರದಲ್ಲಿ ಪೂರ್ಣಾಹುತಿ ನಡೆಯಲಿದೆ. ನಂತರ ಧಾರ್ಮಿಕ ಸಭೆ ನಡೆಯಲಿದ್ದು ನರಹರಿ ಹೆಗಡೆ ಶಿರಳಗಿ ಅವರ ನೇತೃತ್ವದಲ್ಲಿ ಸತ್ಸಂಗ ಸಭೆ ನಡೆಯಲಿದ್ದು ಸಮಿತಿಯ ಗೌರವಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಳ್ಳಿದ್ದಾರೆ. ಈ ಸಂದರ್ಭದಲ್ಲಿ ಎರಡು ಧಾರ್ಮಿಕ ಗ್ರಂಥಗಳ ಬಿಡುಗಡೆ ನಡೆಯುವದು. ಭಜನೆ ಕಾರ್ಯಕ್ರಮದ ಸಿದ್ಧತೆ ನಡೆದಿದೆ. ಮಹಾ ಪ್ರಸಾದ, ಪ್ರಸಾದ ೧೫೦೦ ಮಂದಿಗೆ ಭೋಜನ ತಯ್ಯಾರಿ, ಊಟ. ಸಾಂಸ್ಕೃತಿಕ ಕಾರ್ಯಕ್ರಮದ ಸಿದ್ಧತೆಯಾಗಿದೆ. ವಾಹನ ನಿಲುಗಡೆ, ಕುಡಿಯುವ ನೀರು ಇನ್ನಿತರ ವ್ಯವಸ್ಥೆಯಾಗಿದೆ. ಹೋಮ ನಡೆಯುವ, ಸಭಾಕಾರ್ಯಕ್ರಮ ಮತ್ತು ಭೋಜನ ಸ್ಥಳಗಳಲ್ಲಿ ಪೆಂಡಾಲ್ ಹಾಕಲಾಗುತ್ತಿದೆ. ಮಹನೀಯರು, ಮಾತೆಯರು ತಾವೇ ಮುಂದಾಗಿ ವಿವಿಧ ಕಾರ್ಯಗಳನ್ನು ನಿರ್ವಹಿಸುತ್ತಿರುವದು ಸಂತೋಷ ತಂದಿದೆ ಎಂದರು.


ಸಭೆಯಲ್ಲಿ ವಿವಿಧ ಸಮಿತಿಗಳ ಪ್ರಮುಖರಾದ ಡಾ| ಕೆ.ವಿ.ಶಿವರಾಂ ಶಿರಸಿ,ಬಾಲಕೃಷ್ಣ ಕಾರಂತ ಶಿರಸಿ, ಶ್ರೀಕಾಂತ ಹೆಗಡೆ ಶಿರಸಿ,ಶೇಷಗಿರಿ ಭಟ್, ಶಿರಳಗಿ,ಆನಂದ ನಾಯ್ಕ ಹೊಸೂರು, ವೇ| ಶೇಷಗಿರಿ ಭಟ್ ಗುಂಜಗೋಡ, ವೇ|ಶ್ರೀಧರ ಭಟ್ಟ, ಶ್ರೀಧರ ಟಿ.ಭಟ್ ಶಿರಳಗಿ,ಸೋಮಶೇಖರ ಗೌಡರ್,ಶ್ರೀಕಾಂತ ಭಟ್ ಕೊಳಗಿ, ಸುಧೀರ ಬೆಂಗ್ರೆ ಮುಂತಾದವರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *