ಮಸ್ತಾನೆ ಮತದಾನ ಬಹಿಷ್ಕಾರ, ತಾಲೂಕಾ ಆಡಳಿತದಿಂದ ಮನವರಿಕೆ

ತಮ್ಮ ಗ್ರಾಮದ ಮೂಲಭೂತ ಸಮಸ್ಯೆಗಳಿಗೆ ಸ್ಫಂದಿಸದ ಜನಪ್ರತಿನಿಧಿಗಳ ಬೇಜವಾಬ್ಧಾರಿ ಖಂಡಿಸಿ ವಿಧಾನಸಭಾ ಚುನಾವಣೆಯ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದ ಮಸ್ತಾನೆ ಗ್ರಾಮಕ್ಕೆ ತಾಲೂಕಾ ಆಡಳಿತದ ಪ್ರತಿನಿಧಿಗಳು ಭೇಟಿ ಮಾಡಿ ಗ್ರಾಮಸ್ಥರ ಅಹವಾಲು ಆಲಿಸಿದರು. ಹೊನ್ನಾವರ ಮುಖ್ಯರಸ್ತೆಯಿಂದ ೨.೫ ಕಿ.ಮೀ. ದೂರದ ಮಸ್ತಾನೆಗೆ ರಸ್ತೆ ಕಾಮಗಾರಿಗೆ ಅನುದಾನ ಮಂಜೂರಾಗಿದ್ದರೂ ಕೆಲಸ ಪ್ರಾರಂಭವಾಗಿರಲಿಲ್ಲ ಶಾಲಾ ಮಕ್ಕಳು, ನಾಗರಿಕರಿಗೆ ಅವಶ್ಯವಿರುವಸಂಪರ್ಕ ರಸ್ತೆ ವ್ಯವಸ್ಥೆಯ ವಾಸ್ತವ ಮನವರಿಕೆ ಮಾಡಿ ಮತದಾನ ಬಹಿಷ್ಕರಿಸದಿರಲು ಮಸ್ತಾನೆ ಗ್ರಾಮಸ್ಥರಿಗೆ ತಾಲೂಕಾ ಆಡಳಿತದಿಂದ ತಿಳುವಳಿಕೆ ನೀಡಲಾಯಿತು.

ಸಿದ್ದಾಪುರ: ಗ್ರಾಮದ ಮೂಲಭೂತ ಸೌಲಭ್ಯ ಹಾಗೂ ಕುಂದುಕೊರತೆಗೆ ಸ್ಥಳೀಯ ಶಾಸಕರು, ಸಂಸದರು ಹಾಗೂ ಆಡಳಿತ ವ್ಯವಸ್ಥೆ ಸ್ಪಂದಿಸದಿರುವುದರಿಂದ ಬೇಸತ್ತು ತಾಲೂಕಿನ ಮಸ್ತಾನೆಯ ಜನತೆ ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಬಹಿಷ್ಕರಿಸಲು ಮುಂದಾಗಿದ್ದಾರೆ.
ತಾಲೂಕಿನ ಹಲಗೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೋಡ್ಕಣಿ ಗ್ರಾಮದ ಮಸ್ತಾನೆ ನಿವಾಸಿಗಳು ಈ ಬಾರಿಯ ಚುನಾವಣೆಯ ಮತದಾನದಿಂದ ದೂರ ಉಳಿಯುವುದಾಗಿ ಶುಕ್ರವಾರ ಸಿದ್ದಾಪುರ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದ್ದಾರೆ.
ನಮ್ಮಲ್ಲಿ 30 ಮನೆಗಳಿಂದ 240 ಜನ ವಾಸ್ತವ್ಯ ಹೊಂದಿದ್ದೇವೆ. ಸ್ವಾತಂತ್ಯ ದೊರಕಿ 75 ವರ್ಷ ಕಳೆದರೂ ಮಸ್ತಾನೆ ಕುಗ್ರಾಮವಾಗಿಯೇ ಉಳಿದಿದೆ. ಊರಿನ ರಸ್ತೆ ಹಾಗೂ ಅಗತ್ಯ ಮೂಲಭೂತ ಸೌಲಭ್ಯ ಒದಗಿಸುವಂತೆ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ಅನಂತಕುಮಾರ ಹೆಗಡೆ, ಹಲಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ತಾಲೂಕಾ ದಂಡಾಧಿಕಾರಿ ಹಾಗೂ ಸಹಾಯಕ ಆಯುಕ್ತರಿಗೂ ಹಲವು ಬಾರಿ ಮನವಿ ಮಾಡಿದರೂ ಏನು ಪ್ರಯೋಜನವಾಗಿಲ್ಲ. ಆದ್ದರಿಂದ 2023 ರ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ಮನವಿ ಸಲ್ಲಿಸಿದರು.
ಈ ವೇಳೆ ಮಸ್ತಾನೆಯ ಲೋಕೇಶ ಕೆ ನಾಯ್ಕ, ಬಲವೀಂದ್ರ ನಾಯ್ಕ, ಶಿವಾನಂದ ನಾಯ್ಕ, ಮಂಜುನಾಥ ಜಿ ನಾಯ್ಕ, ಲೋಕೇಶ ಟಿ ನಾಯ್ಕ, ಮಂಜುನಾಥ ಟಿ ನಾಯ್ಕ, ಗಣಪತಿ ನಾಯ್ಕ, ಧರ್ಮರಾಜ ನಾಯ್ಕ, ಸದಾಶಿವ ನಾಯ್ಕ, ಭಾಸ್ಕರ ನಾಯ್ಕ, ರತ್ನಾಕರ ನಾಯ್ಕ, ಉದಯ ನಾಯ್ಕ, ಕನ್ನಪ್ಪ ನಾಯ್ಕ ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *