ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಯೋಗ ಮಾರ್ಗದಿಂದ ಮುಕ್ತಿ

ಸಿದ್ದಾಪುರ
ತಾಲೂಕಿನ ಕಿಲವಳ್ಳಿಯ ಗ್ರಾಮ ದೇವಿ ದೇವಾಲಯದ ಪ್ರಾಂಗಣದಲ್ಲಿ ಶತಚಂಡಿ ಮಹಾಯಾಗ ಮತ್ತು ಬಸವೇಶ್ವರ ದೇವಾಲಯದ ಶಿಖರ ಪ್ರತಿಷ್ಠಾಪನೆ ಆದಿ ಚುಂಚನಗಿರಿ ಮಹಾಸಂಸ್ಥಾನಮಠದ ೭೨ನೇ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು.


ನಂತರ ನಡೆದ ಧರ್ಮಸಭೆ ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿ ಮಾನವ ಜೀವನದ ಮುಖ್ಯ ಉದ್ದೇಶ ಮುಕ್ತಿ ಪಡೆಯುವುದಾಗಿದೆ. ಮುಕ್ತಿ ಪಡೆಯುವುದಕ್ಕೆ ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಯೋಗ ಮಾರ್ಗದಿಂದ ಮಾತ್ರ ಸಾಧ್ಯ
ಕರ್ಮ, ಭಕ್ತಿ ಹಾಗೂ ಯೋಗ ಮಾರ್ಗದ ಕುರಿತು ವಿವರವಾಗಿ ತಿಳಿಸಿದ ಶ್ರೀಗಳು ಮಠದ ಸೇವೆ ಮಾಡಬೇಕು. ಉಪಾಸನೆ ಮಾಡಬೇಕು. ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ನಮ್ಮಲ್ಲಿರುವ ದೋಷಗಳನ್ನು ಹಾಗೂ ರಾಕ್ಷಸಿಗುಣಗಳನ್ನು ಹೋಗಲಾಡಿಸುವುದಕ್ಕೆ ನಮ್ಮೊಳಗಿನ ದೈವತ್ವವನ್ನು ಅರಿತುಕೊಳ್ಳಲು ಸಹಾಯ ಮಾಡುವ ಶಿಕ್ಷಣವನ್ನು ನಾವು ಅಳವಡಿಸಿಕೊಳ್ಳಬೇಕು. ಅಂತಹ ವ್ಯಕ್ತಿ ಮಾತ್ರ ಸಮಾಜವನ್ನು ಅರ್ಥಮಾಡಿಕೊಂಡು ಸೇವೆ ಮಾಡಲು ಸಮರ್ಥನಾಗುತ್ತಾನೆ.
ತಾಯಂದಿರು ಎಚ್ಚರವಹಿಸಿ ಮಕ್ಕಳಿಗೆ ಶಿಕ್ಷಣ ಹಾಗೂ ಸಂಸ್ಕಾರವನ್ನು ಕಲಿಸಬೇಕು. ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ದೊರಕಿದಾಗ ಮಾತ್ರ ಮಕ್ಕಳು ಸತ್ಪçಜೆಗಳಾಗಲು ಸಾಧ್ಯ ಎಂದು ಹೇಳಿದರು.

ಆದಿ ಚುಂಚನಗಿರಿ ಮಹಾಸಂಸ್ಥಾನಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಮಿರ್ಜಾನ ಶಾಖಾಮಠದ ಶ್ರೀ ನಿಶ್ಚಲಾನಂದ ಶ್ರೀಗಳು ಸಾನಿಧ್ಯವಹಿಸಿದ್ದರು.
ಶತಚಂಡಿ ಯಾಗ ಸಮಿತಿ ಅಧ್ಯಕ್ಷ ಎನ್.ಎಲ್.ಗೌಡ ಕಿಲವಳ್ಳಿ ಅಧ್ಯಕ್ಷತೆವಹಿಸಿದ್ದರು.
ವಿ.ದತ್ತಮೂರ್ತಿ ಭಟ್ಟ ಶಿವಮೊಗ್ಗ, ಸತ್ಯನಾರಾಯಣ ಪಟಗಾರ, ನಿವೃತ್ತ ಇಂಜಿನಿಯರ್ ಆರ್.ಎನ್.ಪಟಗಾರ,ಸೀತಾರಾಮ ಗೌಡ ಕುಳಿಕಟ್ಟು ಉಪಸ್ಥಿತರಿದ್ದರು.


ಬೆಳಗ್ಗೆ ವೇ.ವೆಂಕಟ್ರಮಣ ಕೃಷ್ಣ ಭಟ್ಟ ಹಾಗೂ ವೇ.ಮಂಜುನಾಥ ಗ.ಭಟ್ಟ ಇವರ ಮಾರ್ಗದರ್ಶನದಲ್ಲಿ ದೇವಿ ಸಪ್ತಸತಿ ಪಾರಾಯಣ, ಶತಚಂಡಿ ಯಾಗ, ಪೂರ್ಣಾಹುತಿ ಜರುಗಿತು.
ಸ್ವಾಗತ: ಸಿದ್ದಾಪುರ ತಾಲೂಕಿಗೆ ಆಗಮಿಸಿದ ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ. ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರನ್ನು ಪೂರ್ಣಕುಂಬದೊಂದಿಗೆ ಸ್ವಾಗತಿಸಿ ಬೈಕ್ ರ‍್ಯಾಲಿ, ವಾಧ್ಯ, ಡೊಳ್ಳು ಕುಣಿತದೊಂದಿಗೆ ಮೆರವಣಿಗೆಯ ಮೂಲಕ ಕಿಲವಳ್ಳಿ ಊರಿಗೆ ಸ್ವಾಗತಿಸಲಾಯಿತು. ನಂತರ ಗುರು ಪಾದುಕಾ ಪೂಜೆ, ಬಸವೇಶ್ವರ ದೇವಾಲಯದ ಶಿಖರ ಪ್ರತಿಷ್ಠಾಪನೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.
ನಾಲ್ಕು ಸಾವಿರಕ್ಕೂ ಹೆಚ್ಚು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಗಳ ದರ್ಶನ ಪಡೆದು ಪ್ರಸಾದ ಭೋಜನ ಸ್ವೀಕರಿಸಿದರು.
ತೇಜಸ್ವಿನಿ ಹಾಗೂ ಪ್ರಣತಿ ಪ್ರಾರ್ಥನೆ ಹಾಡಿದರು. ವಿ.ಆರ್.ಗೌಡ ಸ್ವಾಗತಿಸಿದರು. ಮೋಹನ ಗೌಡ ಪ್ರಾಸ್ತಾವಿಕ ಮಾತನಾಡಿದರು.ಆರ್.ಬಿ.ಗೌಡ ವಂದಿಸಿದರು. ವಿಷ್ಣು ಪಟಗಾರ ಕಾರ್ಯಕ್ರಮ ನಿರ್ವಹಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *