ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್…….‌ ಆಪ್‌ ನಲ್ಲಿ ಒಡಕು ಜಿಲ್ಲಾಘಟಕಕ್ಕೆ ರಾಜೀನಾಮೆ ನೀಡಲಿರುವ ನಾಯಕರು

ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪ್ರಮುಖ ಪಕ್ಷಗಳಲ್ಲಿ ಒಡಕು, ಬಂಡಾಯಗಳು ಕಾಣುತಿದ್ದು ಕೆಲವರು ಅಭ್ಯರ್ಥಿಗಳಾಗಲು ಯೋಚಿಸಿದ್ದರೆ ಕೆಲವರು ಪಕ್ಷ ತ್ಯಜಿಸಲು ಯೋಜಿಸಿರುವ ಬಾತ್ಮಿ ಸಮಾಜಮುಖಿಡಾಟ್‌ ನೆಟ್‌ ಗೆ ಲಭಿಸಿದೆ.

ಜಿಲ್ಲೆಯ ಜೆ.ಡಿ.ಎಸ್.‌ ನ ಕೆಲವರು ಕಾಂಗ್ರೆಸ್‌ ಸೇರಲು ಯೋಚಿಸಿದ್ದರೆ, ಬಿ.ಜೆ.ಪಿ.ಯ ಕೆಲವರು ಕಾಂಗ್ರೆಸ್‌ ಹಾಗೂ ಜಾತ್ಯಾತೀತ ಜನತಾದಳ ಸೇರುವ ಸಾಧ್ಯತೆಗಳು ನಿಚ್ಚಳವಾಗಿವೆ.

ಬಿ.ಜೆ.ಪಿ.ಯ ಕೇ.ಜಿ. ನಾಯ್ಕ ಹಣಜಿಬೈಲ್‌ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ವಿರುದ್ಧ ಸೆಡ್ಡು ಹೊಡೆದಿದ್ದು ಬಿ.ಜೆ.ಪಿ. ಯಿಂದ ಬಂಡಾಯ ಸ್ಫರ್ಧೆ ಅಥವಾ ಗೆಲ್ಲುವ ಅನ್ಯ ಪಕ್ಷದ ಅಭ್ಯರ್ಥಿ ಬೆಂಬಲಿಸುವ ಯೋಚನೆಯಲ್ಲಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‌ ನಲ್ಲಿ ಎ.ರವೀಂದ್ರ ಮತ್ತು ವೆಂಕಟೇಶ ಹೆಗಡೆ ಹೊಸಬಾಳೆ ನಾನಾ ನಾಯಕರ ಬೆಂಬಲಗಳಿಂದ ಕಾಂಗ್ರೆಸ್‌ ಅಧೀಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಮಾಡುವ ಮುನ್ಸೂಚನೆ ದೊರೆತಿದೆ.

ಜಿಲ್ಲೆಯಲ್ಲಿ ಎಲ್ಲರಿಗಿಂತ ಮೊದಲು ಏಕೈಕ ಅಭ್ಯರ್ಥಿ ಘೋಶಿಸಿರುವ ಆಪ್‌ ಸಂಘಟನೆಯಾಗುವ ಮೊದಲೇ ಒಡೆಯುವ ಸಾಧ್ಯತೆ ಹೆಚ್ಚಿದೆ. ಸಮಾಜಮುಖಿ ಡಾಟ್‌ ನೆಟ್‌ ಗೆ ಲಭಿಸಿರುವ ಮಾಹಿತಿಯ ಪ್ರಕಾರ ಆಪ್‌ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಶಿರಸಿ ಕ್ಷೇತ್ರದ ಅಭ್ಯರ್ಥಿಯ ವಿರುದ್ಧ ಬಂಡಾಯ ಮಾಡಿದ್ದು ಆಪ್‌ ಜಿಲ್ಲಾ ಉಪಾಧ್ಯಕ್ಷರ ನೇತೃತ್ವದಲ್ಲಿ ಕನಿಷ್ಟ ಐದು ಜನ ಪ್ರಮುಖ ಪದಾಧಿಕಾರಿಗಳು ಆಪ್‌ ಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರುವ ಬಗ್ಗೆ ಯೋಚಿಸಿದ್ದಾರೆ ಎನ್ನಲಾಗಿದೆ,.

ಚುನಾವಣಾ ರಾಜಕಾರಣ, ಸಾಮಾಜಿಕ ಬದುಕಿನ ಲವಲೇಶಗಳೂ ಇಲ್ಲದ ಆಪ್‌ ಅಭ್ಯರ್ಥಿ ಪಕ್ಷದ ಪ್ರಮುಖರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಗುವವರ ನಡುವೆ ತಾನು ಈಗಲೇ ಗೆದ್ದೆದ್ದೇನಿ ತನ್ನ ೭೦ ಸಾವಿರ ಮತಗಳು ಈಗಲೇ ಭದ್ರವಾಗಿವೆ ಎನ್ನುವ ಬಾಲೀಶ ಹೇಳಿಕೆಗಳ ಮೂಲಕ ಪಕ್ಷ ಮತ್ತು ಪಕ್ಷದ ಪ್ರಮುಖರಿಗೆ ಮುಜುಗರ ಮಾಡುವ ಶಿರಸಿ ಕ್ಷೇತ್ರದ ಅಭ್ಯರ್ಥಿಯ ಹಿತ-ಮಿತ ವರಿಯದ ಅತರೇಕದ ವರ್ತನೆ, ನಡವಳಿಕೆಗಳಿಂದ ಬೇಸತ್ತು ಪಕ್ಷ ತ್ಯಜಿಸುತ್ತಿರುವುದಾಗಿ ಐದು ಜನ ಜಿಲ್ಲಾ ಪದಾಧಿಕಾರಿಗಳು ಆಪ್‌ ಪ್ರಮುಖರಿಗೆ ಮಾಹಿತಿ ನೀಡಿರುವ ಬಗ್ಗೆ ಸಮಾಜಮುಖಿ ನ್ಯೂಸ್‌ ಗೆ ವಿಷಯ ತಿಳಿದಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *