ಅಮೂಲ್ ನೆಪದಲ್ಲಿ ರೈತಾಪಿ ಹೈನುಗಾರಿಕೆ ನಿರ್ಮೂಲನೆಗೆ ಸಂಚು -ರೈತ ಸಂಘ

——————————————————————

ಇಡೀ ದೇಶದಲ್ಲೇ ಹೈನುಗಾರಿಕೆ ಉತ್ಪಾದನೆ ಹಾಗೂ ಸಹಕಾರಿ ಸಂಸ್ಕರಣೆ ಅನುಪಾತ ಗರಿಷ್ಠ ಪ್ರಮಾಣದಲ್ಲಿರುವ ರಾಜ್ಯದ ರೈತಾಪಿ ಹೈನುಗಾರಿಕೆಯನ್ನು ಸರ್ವನಾಶ ಮಾಡಲು, ಡೈರಿ ಕ್ಷೇತ್ರದ ಕಾರ್ಪೋರೇಟೀಕರಣ ಸಾಧಿಸಲು ,ಆಸ್ಟ್ರೇಲಿಯಾ, ಡೆನ್ಮಾರ್ಕ್, ನ್ಯೂಜಿಲೆಂಡ್ ಮುಂತಾದ ಯೂರೋಪಿಯನ್ ದೇಶಗಳ ಡೈರಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಅಮೂಲ್ ಹೆಸರಿನ ಮರೆಯಲ್ಲಿ ನಡೆಯುತ್ತಿರುವ ಬಹು ದೊಡ್ಡ ಹುನ್ನಾರವನ್ನು ಹಿಮ್ಮೆಟ್ಟಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ (KPRS)  ರಾಜ್ಯದ ರೈತಾಪಿ ಸಮುದಾಯ, ಸಹಕಾರಿ ಸಮುದಾಯ ಹಾಗೂ ನಾಡಿನ ಜನತೆಯಲ್ಲಿ ವಿನಂತಿಸಿ ದೆ.

ಲಾಭದಾಯಕ ದರವನ್ನು ನಿಗದಿಪಡಿಸುವಂತೆ ,ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಂತೆ ನಿರಂತರವಾಗಿ ರಾಜ್ಯದ ಹಾಲು ಉತ್ಪಾದಕರು ಪ್ರತಿಭಟನೆ-ಹೋರಾಟಗಳನ್ನು ನಡೆಸಿ ಆಗ್ರಹಿಸಿದ್ದರೂ ನಿರ್ಲಕ್ಷಿಸಿದ್ದ ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೆಎಂಎಫ್ ನ 16 ಜಿಲ್ಲಾ ಹಾಲು ಒಕ್ಕೂಟಗಳ ಮಾರುಕಟ್ಟೆ ಕಸಿಯಲು ಟೊಂಕ ಕಟ್ಟಿ ನಿಂತಿರುವುದು ಹಾಗೂ ಚುನಾವಣಾ ಸಂದರ್ಭದಲ್ಲೂ ನಿರ್ಲಜ್ಜವಾಗಿ ಸಮರ್ಥಿಸುತ್ತಿರುವುದು ಅತ್ಯಂತ ನಾಚೀಕೆಗೇಡು ಮಾತ್ರವಲ್ಲ ರೈತರನ್ನು ನಾಶ ಮಾಡುವ ಸರ್ವಾಧಿಕಾರಿ ಠೇಂಕಾರ ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಉತ್ತರ ಕನ್ನಡ ಜಿಲ್ಲಾ ಸಮಿತಿ ಕಟುವಾಗಿ ಟೀಕಿಸಿದೆ.

ಭಾರತದ ಡೈರಿ ಉತ್ಪನ್ನಗಳ ಮಾರುಕಟ್ಟೆಯ ಒಟ್ಟು ಗಾತ್ರ ಸುಮಾರು 12 ಲಕ್ಷ ಕೋಟಿ ರೂ. ನಷ್ಟಿದೆ. ದೇಶದ ಎರಡು ಬೃಹತ್ ಡೈರಿ ಸಹಕಾರಿ ಸಂಸ್ಥೆಗಳ ವಹಿವಾಟು ಸುಮಾರು ಅರ್ದ ಲಕ್ಷ ಕೋಟಿ ಯಷ್ಟು ಮಾತ್ರ ಇದೆ. ದೇಶೀಯ ಸಹಕಾರಿ ಹೈನುಗಾರಿಕೆ ಬೆಳವಣಿಗೆಗೆ ಇಷ್ಟು ವಿಫುಲ ವಾದ ಅವಕಾಶಗಳಿದ್ದರೂ ವಹಿವಾಟು ಗಾತ್ರದಲ್ಲಿ ಸಣ್ಣದಾಗಿರುವ ಕೆಎಂಎಫ್ ನಂತಹ ಸಹಕಾರಿ ಸಂಸ್ಥೆಗಳನ್ನು ನಾಶ ಮಾಡಿ ಕೇಂದ್ರೀಕರಣವನ್ನು ಉತ್ತೇಜಿಸುವುದು ಹಾಗೂ ಕಾರ್ಪೋರೇಟೀಕರಣ ಸಾಧಿಸುವುದು ಗ್ರಾಮೀಣ ನಿರುದ್ಯೋಗ ಮತ್ತು ಬಡತನವನ್ನು ತೀವ್ರಗೊಳಿಸುತ್ತದೆ ಹಾಗೂ ವಲಸೆ ಮತ್ತು ರೈತರ ಆತ್ಮಹತ್ಯೆಗಳನ್ನು ಹೆಚ್ಚಿಸುತ್ತದೆ. ದೊಡ್ಡದಾಗಿ ಆತ್ಮ ನಿರ್ಭರತೆ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ಬಿಜೆಪಿ ಸರ್ಕಾರ , ಕೃಷಿ ಉತ್ಪನ್ನಗಳ ಖಾತರಿ ಖರೀದಿಯ ಮಾದರಿ ವ್ಯವಸ್ಥೆಯನ್ನು ನಾಶ ಮಾಡುತ್ತಿದೆ .ಈ ಬಗ್ಗೆ ರಾಜ್ಯದ ಜನರಲ್ಲಿ ವ್ಯಾಪಕ ಪ್ರಚಾರಾಂದೋಲನ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS)ದ ಕರ್ನಾಟಕ ರಾಜ್ಯ ಸಮಿತಿ ತೀರ್ಮಾನಿಸಿದೆ. 

ಜಾನುವಾರು ಸಂರಕ್ಷಣೆ ಹೆಸರಿನಲ್ಲಿ ತಂದಿರುವ ಗೋ ಹತ್ಯೆ ನಿಷೇಧ ಕಾಯ್ದೆ 2020 ಹಾಗೂ ಬಹು ರಾಜ್ಯಗಳ ಸಹಕಾರಿ ಸಂಘಗಳ ತಿದ್ದುಪಡಿ ಕಾಯ್ದೆ 2022 , ಹೈನುಗಾರಿಕೆ ಮೇಲಿನ ಜಿಎಸ್ ಟಿ ಕ್ರಮಗಳು,  ರೈತಾಪಿ ಹೈನುಗಾರಿಕೆ ಯನ್ನು ನಿರುತ್ಸಾಹಗೊಳಿಸುವ ,  ಕಾರ್ಪೋರೇಟೀಕರಣವನ್ನು ಉತ್ತೇಜಿಸುವ ಅಂಶಗಳನ್ನು ಒಳಗೊಂಡಿದೆ. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಈಗಾಗಲೇ ರೈತರನ್ನು ಅಡ್ಡಗಟ್ಟಿ ಹಲ್ಲೆ ನಡೆಸುವ ,ಜೈಲಿಗೆ ತಳ್ಳುವ ಹಲವು ಪ್ರಕರಣಗಳು ವರದಿಯಾಗಿವೆ. ಮುಕ್ತವಾಗಿದ್ದ ಜಾನುವಾರು ಸಾಗಾಣಿಕೆ, ಸಾಂಪ್ರದಾಯಿಕ ದನಗಳ ಜಾತ್ರೆಗಳು ಹಲವು ನಿರ್ಬಂಧಗಳನ್ನು ಅನುಭವಿಸುತ್ತಿದ್ದು ಜಾನುವಾರುಗಳ ಸಂಖ್ಯೆ ಹಾಗೂ ಹಾಲು ಉತ್ಪಾದನೆ ತೀವ್ರವಾಗಿ ಕುಸಿಯುತ್ತಿದೆ. ಅದೇ ಸಂದರ್ಭದಲ್ಲಿ ಜಾನುವಾರು ಮಾಂಸದ ರಪ್ತು ಉದ್ಯಮ ಬಹು ವೇಗವಾಗಿ ಬೆಳೆಯುತ್ತಿದೆ. ಕೃಷಿ ಹಾಗೂ ರೈತ ವಿರೋಧಿಯಾದ ಕೃಷಿ ಕಾಯ್ದೆಗಳನ್ನು ಹಾಗೂ ಸಹಕಾರಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಬೇಕು , ಹೈನುಗಾರಿಕೆ ಮೇಲೆ ಹಾಕಿರುವ ಜಿಎಸ್ ಟಿ ರದ್ದುಪಡಿಸಬೇಕು ಮತ್ತು ರೈತರಿಂದ ಖರೀದಿಸುವ ಲೀಟರ್ ಹಾಲಿಗೆ ಕನಿಷ್ಠ 50 ರೂ ನಿಗದಿಪಡಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS)  ರಾಜ್ಯ, ಕೇಂದ್ರ ಸರ್ಕಾರಗಳನ್ನು ಆಗ್ರಹಿಸುತ್ತದೆಯೆಂದು ಜಿಲ್ಲಾ ಅಧ್ಯಕ್ಷ ಶಾಂತಾರಾಮ ನಾಯಕ ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *