ಕಡಕೇರಿಯಲ್ಲಿ ಜೆಡಿಎಸ್, ಬಾಲಿಕೊಪ್ಪದಲ್ಲಿ ಕಾಂಗ್ರೆಸ್ ಪ್ರಚಾರ

ಸಿದ್ದಾಪುರ,
ಶಿರ್ಸಿ ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ಟಿ ನಾಯ್ಕ ತಾಲೂಕಿನ ವಿವಿಧ ಸ್ಥಳಗಳಲ್ಲಿ ಪ್ರಚಾರ ಆರಂಭಿಸಿದ್ದಾರೆ
ಹಾಳದಕಟ್ಟ ,ಹಣಜಿಬೈಲ್, , ರವೀಂದ್ರ ನಗರ, ಬಾಲಿಕೊಪ್ಪ ಗಳಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ನೀಡಿದ ಜನೋಪಯೋಗಿ ಯೋಜನೆಗಳ ಬಗ್ಗೆ ಜನರಿಗೆ ತಿಳು ವಳಿಕೆ ನೀಡುವಲ್ಲಿ ಕಾರ್ಯಕರ್ತರು ಪ್ರವ್ರ ತ್ತರಾಗಬೇಕು ಜೊತೆಗೆ ಆಡಳಿತದಲ್ಲಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರಿಗೆ ಯಾವ ರೀತಿಯ ಯೋಜನೆಗಳನ್ನ ನೀಡುತ್ತಿದ್ದಾರೆ ಅವರ ವೈಪಲ್ಯಗಳನ್ನು ಜನಸಾಮಾನ್ಯರಿಗೆ ತಿಳುವಳಿಕೆ ನೀಡಿ ಮನಒಲಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಮತ ಚಲಾಯಿಸುವಂತೆ ವಿನಂತಿಸಿಕೊಳ್ಳುತ್ತಿದ್ದಾರೆ.

ಸಿರ್ಸಿ ಸಿದ್ದಾಪುರ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ಶಾಸಕರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಆಡಳಿತ ವೈಫಲ್ಯ ಅವರು ಜನರಿಗೆ ಸ್ಪಂದಿಸದಿರುವ ವಿಷಯಗಳನ್ನು ಜನಸಾಮಾನ್ಯರಿಗೆ ತಿಳಿಸಿ ಮತ ಚಲಾಯಿಸುವಂತೆ ಸೂಚಿಸುತ್ತಿದ್ದಾರೆ
ಈ ಸಂದರ್ಭದಲ್ಲಿ ಮಾತನಾಡಿದ ಭೀಮಣ್ಣ ನಾಯ್ಕ ಸಿದ್ದಾಪುರ ಪಟ್ಟಣ ಪಂಚ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳ ಇದ್ದು ನಾವು ಹೋದಲ್ಲೆಲ್ಲಾ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹೇಳುತ್ತಿದ್ದಾರೆ. 15 ವರ್ಷಗಳಿಂದ ಶಾಸಕರಾಗಿದ್ದ ಕಾಗೇರಿಯವರು ಏನು ಮಾಡುತ್ತಿದ್ದಾರೆ ಕಾಂಗ್ರೆಸ್ ಸರ್ಕಾರವಿದ್ದಾಗ ತಂದಂಥ ಯೋಜನೆಗಳನ್ನೇ ತಮ್ಮ ಸರ್ಕಾರ ಮಾಡಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುತ್ತಾ ಜನರಿಗೆ ಮೋಸ ಮಾಡುತ್ತಿದ್ದಾರೆ ಇಂಥ ಮೋಸ ವಂಚನೆಗಳು ಈ ಭಾರೀ ನಡೆಯುವುದಿಲ್ಲ ಹೆಚ್ಚಿನ ಜನರು ಕಾಂಗ್ರೆಸ್ನತ್ತ ಒಲವು ತೋರಿಸಿದ್ದು ಈ ಬಾರಿ ಬಹುಮತದಿಂದ ನನ್ನ ನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ್ ನಾಯಕ್ ಮಾತನಾಡಿ ಬಿಜೆಪಿಯವರು ಹಿಂದುತ್ವದ ಆಧಾರದಲ್ಲಿ ಮತ ಪಡೆಯಲು ಹಿಂದೂ ಯುವಕರನ್ನ ಬಳಸಿಕೊಂಡು ಧರ್ಮದ ಹೆಸರಿನಲ್ಲಿ ಯುವಕರಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ ಸಿದ್ದಾಪುರ ದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಇದರ ಉಪಯೋಗವನ್ನು ನಾವು ಪಡೆದುಕೊಂಡು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವನ್ನು ನೋಡಲು ಕಾತುರರಾಗಿದ್ದೇವೆ
ರಾಜ್ಯ ದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮುಖಂಡರುಗಳಾದ ವಿ ಎನ್. ನಾಯ್ಕ, ಸಿ ಆರ್. ನಾಯ್ಕ,ವೀರಭದ್ರ ನಾಯ್ಕ, ಸುರೇಂದ್ರ ಮಡಿವಾಳ ,ಜೈರಾಮ್ ಹೊಸೂರ್, ವೆಂಕಟರಮಣ ನಾಯ್ಕ, ಮುನಾವರ್ ಗುರ್ಕಾರ್ ,ಬಾಲಕೃಷ್ಣ ನಾಯ್ಕ, ಪ್ರಶಾಂತ್ ಹೊಸೂರ್ ಹೆಚ್ ಕೆ ಶಿವಾನಂದ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *