ಕಾಂಗ್ರೆಸ್‌ ನ ಪ್ರಮುಖ ನಾಯಕ ಇನ್ನಿಲ್ಲ….

ಬೆಳಗಾವಿ: ಕಾಂಗ್ರೆಸ್​ ಹಿರಿಯ ನಾಯಕ, ಮಾಜಿ ಸಚಿವ ಡಿ.ಬಿ.ಇನಾಂದಾರ್ ನಿಧನ

ಹಿರಿಯ ಕಾಂಗ್ರೆಸ್‌  ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಂದಾರ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ.

D B Inamdar

ಬೆಂಗಳೂರು: ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಂದಾರ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇನಾಂದಾರ್, ಚಿಕಿತ್ಸೆ ಫಲಿಸದೇ ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

74 ವರ್ಷದ ಇನಾಂದಾರ್ ಅವರು, ಲಂಗ್ಸ್​ ಮತ್ತು ಲಿವರ್​​ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಮಾತ್ರವಲ್ಲ, ಕಾಂಗ್ರೆಸ್​ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಸಿರಸಂಗಿ ದೇಸಾಯಿ ಫೌಂಡೇಷನ್ ಟ್ರಸ್ಟ್​ನ ಖಾಯಂ ಸದಸ್ಯರಾಗಿದ್ದರು.

ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಈ ಬಾರಿಯೂ ಚುನಾವಣೆಯಲ್ಲೂ ಇನಾಂದಾರ್​ ಕಿತ್ತೂರು ಕ್ಷೇತ್ರ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಅನಾರೋಗ್ಯದ ಕಾರಣ ಇನಾಂದಾರ್​​ಗೆ ಟಿಕೆಟ್ ನೀಡಲು ಕಾಂಗ್ರೆಸ್​ ನಿರಾಕರಿಸಿತ್ತು. ಇನಾಂದಾರ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ಇನಾಮ್ದಾರ್‌ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಂದಾರ್‌ 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು, ಎಸ್.ಎಂ ಕೃಷ್ಣ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *