ಅದ್ವೈತ ತತ್ವದಿಂದ ಮುನ್ನಡೆಯಿರಿ, ಮೇ ಆರರಿಂದ ಪ್ರತಿಷ್ಠಾಪನಾ ಮಹೋತ್ಸವ

ಪ್ರತಿಷ್ಠಾಪನಾ ಮಹೋತ್ಸವ
ಸಿದ್ದಾಪುರ
ಶ್ರೀಕ್ಷೇತ್ರ ಕೋಡಿಗದ್ದೆಯ ಶ್ರೀ ಮಹಿಷಾಸುರಮರ್ದಿನಿ ದೇವಿಯ ನವೀಕೃತ ದಿವ್ಯ ಮಂಗಳೆಯ ವಿಗ್ರಹದ ಪ್ರತಿಷ್ಠಾಪನಾ ಮಹೋತ್ಸವ ಮೇ.೬,೭,೮,೯ರಂದು ಜರುಗಲಿದೆ ಎಂದು ಶ್ರೀ ಶೃಂಗೇರಿ ಶಂಕರಮಠದ ಧರ್ಮಾಧಿಕಾರಿ, ಪ್ರತಿಷ್ಠಾಪನಾ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ವಿಜಯ ಹೆಗಡೆ ದೊಡ್ಮನೆ ತಿಳಿಸಿದರು.


ಅವರು ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿ ಶ್ರೀಶಂಭುಲಿಂಗೇಶ್ವರ ಮಹಿಷಾಸುರಮರ್ದಿನಿ ದೇವಾಲಯವಿರುವ ಶ್ರೀಕ್ಷೇತ್ರ ಕೋಡಿಗದ್ದೆ ಅತ್ಯಂತ ಪ್ರಾಚೀನ ಮತ್ತು ಪುಣ್ಯಕ್ಷೇತ್ರ. ಮಹಾತಪಸ್ವಿ ದೂರ್ವಾಸ ಮುನಿಗಳಿಂದ ಪ್ರತಿಷ್ಠಾಪನೆಗೊಂಡಿತೆಂಬ ಪ್ರತೀತಿ ಇರುವ ಈ ಕ್ಷೇತ್ರಕ್ಕೆ ಸ್ಥಳೀಯರು ಮಾತ್ರವಲ್ಲದೇ ಹೊರ ರಾಜ್ಯ ಭಕ್ತಾದಿಗಳು ಶೃದ್ದಾಭಕ್ತಿಯಿಂದ ನಡೆದುಕೊಳ್ಳುತ್ತಾರೆ. ಪರಮಪೂಜ್ಯ ಶ್ರೀಧರಸ್ವಾಮಿಗಳು ಇಲ್ಲಿ ೪ ತಿಂಗಳು ತಪಸ್ಸು ಆಚರಿಸಿದ್ದಲ್ಲದೇ ಚಾರ್ತುಮಾಸ್ಯವನ್ನು ನಡೆಸಿದ್ದರು.

ಶಿಥಿಲವಾಗಿದ್ದ ಶ್ರೀ ಶಂಬುಲಿಂಗೇಶ್ವರ ಮತ್ತು ಶ್ರೀ ಮಹಿಷಾಸುರ ಮರ್ದಿನಿ ದೇವಾಲಯವನ್ನು ಎರಡು ದಶಕಗಳ ಹಿಂದೆ ನೂತನವಾಗಿ ನಿರ್ಮಿಸಲಾಗಿದ್ದು ಮಹಿಷಾಸುರ ಮರ್ದಿನಿ ದೇವಿಯ ವಿಗ್ರಹ ಸ್ವಲ್ಪ ಭಿನ್ನವಾಗಿರುವದು ಅಷ್ಟಮಂಗಲ ಪ್ರಶ್ನೆಯಿಂದ ತಿಳಿದುಬಂದು, ಆದಷ್ಟು ಶೀಘ್ರವಾಗಿ ನೂತನ ವಿಗ್ರಹ ಪ್ರತಿಷ್ಠಾಪಿಸಲು ಸೂಚನೆಯಾಗಿತ್ತು. ಹಿಂದಿನ ದೇವಾಲಯ ಆಡಳಿತ ಕಮಿಟಿ ಆ ಕುರಿತು ಕಾರ್ಯಪ್ರವೃತ್ತವಾಗಿದ್ದು ಈಗ ವಿಗ್ರಹ ಪರಿಪೂರ್ಣವಾಗಿ ಜಲಾದಿವಾಸದಲ್ಲಿದೆ. ನೂತನ ವಿಗ್ರಹದ ಪ್ರತಿಷ್ಠಾಪನೆ ಜೊತೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವೇ|ಕಟ್ಟೆ ಶಂಕರ ಭಟ್ಟ ಅವರ ನೇತೃತ್ವದಲ್ಲಿ ಸ್ಥಳೀಯ ವೈದಿಕರ ನೆರವಿನೊಂದಿಗೆ ೪ ದಿನಗಳ ಕಾಲ ನಡೆಯಲಿದ್ದು ಚಂಡಿಕಾಯಾಗದೊಂದಿಗೆ ಸಂಪನ್ನಗೊಳ್ಳಲಿದೆ ಎಂದರು.
ಸಮಿತಿಯ ಅಧ್ಯಕ್ಷ ಶ್ರೀಧರ ಭಟ್ಟ ಗಡಿಹಿತ್ಲು ಈ ಅಪೂರ್ವ ಕಾರ್ಯಕ್ರಮಕ್ಕೆ ಭಕ್ತಾದಿಗಳು ತನು,ಮನ,ಧನದ ಸರ್ವ ವಿಧ ಸೇವೆ ಸಲ್ಲಿಸುವದರ ಜೊತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.
ಸಮಿತಿಯ ಪದಾಧಿಕಾರಿಗಳಾದ ಶಾಂತಕುಮಾರ ಭಟ್ಟ ದೊಡ್ಮನೆ, ಅಣ್ಣಪ್ಪ ನಾಯ್ಕ ಕೋಡಿಗದ್ದೆ, ಶ್ರೀಧರ ಗುರ್ಕೋಡು, ಆರ್.ಎಸ್.ಭಟ್ಟ ಕಲ್ಲಾಳ ಉಪಸ್ಥಿತರಿದ್ದರು.

ಸಿದ್ದಾಪುರ
ಶಂಕರಾಚಾರ್ಯರ ಅದ್ವೆತ ತತ್ವ ಸಿದ್ದಾಂತವನ್ನು ಎಲ್ಲರೂ ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ಶ್ರೀಮನ್ನೆಲೆಮಾವಿನ ಮಠದ ಶ್ರೀ ಶ್ರೀಮಾಧವಾನಂದ ಭಾರತೀ ಸ್ವಾಮಿಗಳು ಹೇಳಿದರು.
ತಾಲೂಕಿನ ಶ್ರೀಮನ್ನೆಲೆಮಾವಿನ ಮಠದಲ್ಲಿ ಶಂಕರ ಪಂಚಮಿಯಂದು ವೇದ ವಿದ್ಯಾ ಸಂಸ್ಕಾರ ಮತ್ತು ಸಂಶೋಧನ ಕೇಂದ್ರ ಶ್ರೀಮನ್ನೆಲೆಮಾವಿನ ಮಠ ಇವರಿಂದ ದಿ.ಹೋಬಳಿ ನಾರಾಯಣ ತಿಮ್ಮಣ್ಣ ಭಟ್ಟ ಹರಿಗಾರ ರ ಸ್ಮರಣಾರ್ಥ ‘ಆಚಾರ್ಯ ಶಂಕರಶ್ರೀ’ ಪ್ರಶಸ್ತಿಯನ್ನು ಹಿರಿಯ ವಿದ್ವಾಂಸರಾದ ಡಾ.ಶ್ರೀರಾಮ ಭಟ್ಟ ದಂಪತಿ ಸಣ್ಣಗದ್ದೆ ಧಾರವಾಡ ಅವರಿಗೆ ಶ್ರೀಗಳು ಪ್ರದಾನ ಮಾಡಿ ಆಶೀರ್ವಚನ ನೀಡಿದರು.
ಮಠದ ಅಧ್ಯಕ್ಷ ಜಿ.ಎಂ.ಹೆಗಡೆ ಹೆಗ್ನೂರು ಹಾಗೂ ಆಡಳಿತ ಮಂಡಳಿ ಸದಸ್ಯರುಗಳಿದ್ದರು.
ಡಾ.ಜಿ.ಎನ್.ಭಟ್ಟ ಹರಿಗಾರ ಪ್ರಾಸ್ತಾವಿಕ ಮಾತನಾಡಿದರು. ವೆಂಕಟ್ರಮಣ ಭಟ್ಟ ಹೆಗ್ಗಾರಬೈಲ್ ಸ್ವಾಗತಿಸದರು. ವಿ.ನಾರಾಯಣ ಜೋಶಿ ಹೊಸಗದ್ದೆ ಪ್ರಶಸ್ತಿಪತ್ರ ವಾಚನ ಮಾಡಿದರು. ವಿನಾಯಕ ಭಟ್ಟ ನೆಲೆಮಾವ ಕಾರ್ಯಕ್ರಮ ನಿರ್ವಹಿಸಿದರು. ಮಠದ ಕಾರ್ಯದರ್ಶಿ ಟಿ.ವಿ.ಹೆಗಡೆ ಸಹಕರಿಸಿದರು. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *