ಕ್ರಿಕೆಟ್ ತರಭೇತಿ ಶಿಬಿರ ಉದ್ಘಾಟನೆ

.ಡಾಲ್ಫಿನ್ ಕ್ರಿಕೆಟ್ ಕ್ಲಬ್ ಹಾಗೂ ಸಿದ್ದಾಪುರ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಕ್ರಿಕೆಟ್ ತರಬೇತಿ ಶಿಬಿರ ಉದ್ಘಾಟನೆ…..ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ…..

ಸಿದ್ದಾಪುರ .. ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ನಮ್ಮ ದೇಹವು ಉತ್ತಮ ವ್ಯಾಯಾಮದ ಜೊತೆಗೆ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಇದು ಮನುಷ್ಯನನ್ನು ಆತ್ಮವಿಶ್ವಾಸ ಮತ್ತು ಪ್ರಗತಿಪರರನ್ನಾಗಿ ಮಾಡುತ್ತದೆ ಎಂದು ಸಿದ್ದಾಪುರ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷ ವಿನಾಯಕ ಎಸ.ಶೇಟ್ ಹಾಗೂ ಉದ್ಯಮಿ ಸದಾಶಿವ ಬಿ. ನಾಯ್ಕ್ ಅಭಿಪ್ರಾಯಪಟ್ಟರು. ಅವರು ಸಿದ್ದಾಪುರದ ತಾಲೂಕ ಕ್ರೀಡಾಂಗಣದಲ್ಲಿ ತಾರೀಖಿನಂದು ನಡೆದ ಡಾಲ್ಫಿನ್ ಕ್ರಿಕೆಟ್ ಕ್ಲಬ್ ಹಾಗೂ ಸಿದ್ದಾಪುರ ಸ್ಪೋರ್ಟ್ಸ್ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ಬೇಸಿಗೆ ಕ್ರಿಕೆಟ್ ಶಿಬಿರವನ್ನು ಜಂಟಿಯಾಗಿ ಉದ್ಘಾಟಿಸಿ ಮಾತನಾಡಿದರು.

ಸಿದ್ದಾಪುರದ ಸಮಾನ ಮನಸ್ಕರು ಸೇರಿ ಸ್ಪೋರ್ಟ್ಸ್ ಅಕಾಡೆಮಿಯನ್ನು ಪ್ರಾರಂಭಿಸಿದ್ದು ಎಂಟು ವಿವಿಧ ಕ್ರೀಡಾ ತರಬೇತಿ ಶಿಬಿರವನ್ನು ಏರ್ಪಡಿಸಿದ್ದೇವೆ.ಇದರ ಪ್ರಯೋಜನವನ್ನು ಎಲ್ಲರೂ ಪಡೆಯುವಂತಾಗಬೇಕು ಎಂದರು. ಮುಖ್ಯ ಅತಿಥಿ ಉದ್ಯಮಿ, ಸ್ಪೋರ್ಟ್ಸ್ ಅಕಾಡೆಮಿಯ ಕೋಶಾಧ್ಯಕ್ಷ ಸುದರ್ಶನ್ ಪಿಳ್ಳೆ ಮಾತನಾಡಿ ಎಲ್ಲರ ಸಹಕಾರದಿಂದ ನೂತನವಾಗಿ ಕ್ರಿಕೆಟ್ ಶಿಬಿರವನ್ನು ಏರ್ಪಡಿಸಿದ್ದು ಇದಕ್ಕೆ ಎಲ್ಲರೂ ಭಾಗಿಯಾಗಿ ಉತ್ತಮ ತರಬೇತಿ ಪಡೆದು ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿ ಜಿಲ್ಲಾ, ರಾಜ್ಯ,ರಾಷ್ಟ್ರಮಟ್ಟದವರೆಗೂ ಬೆಳೆಯಲಿ ಎಂದು ಶುಭ ಹಾರೈಸಿದರು.

ರಾಜ್ಯಮಟ್ಟದ ಕ್ರಿಕೆಟ್ ತರಬೇತುದಾರ, ಅಕಾಡೆಮಿಯ ನಿರ್ದೇಶಕ ಡೊಮಿನಿಕ್ ಫರ್ನಾಂಡಿಸ್ ಮಾತನಾಡಿ ಈ ಕ್ರಿಕೆಟ್ ಶಿಬಿರ ಸಿದ್ದಾಪುರದ ಇತಿಹಾಸದಲ್ಲಿ ಪ್ರಪ್ರಥಮವಾಗಿ ಪ್ರಾರಂಭಿಸಿದ್ದು ಎಲ್ಲಾ ಪಾಲಕರು ತಮ್ಮ ಮಕ್ಕಳನ್ನು ವಿದ್ಯಾಭ್ಯಾಸದ ಜೊತೆಗೆ ರಜಾ ದಿನಗಳಲ್ಲಿ ಕ್ರಿಕೆಟ್ ಶಿಬಿರಕ್ಕೆ ಪಾಲ್ಗೊಂಡು ಉತ್ತಮ ಕ್ರೀಡಾಪಟುವಾಗಿ ಆಗಲು ತಮ್ಮೆಲ್ಲರ ಸಹಕಾರ ಅತ್ಯವಶ್ಯ ಎಂದರು.ಡಾಲ್ಫಿನ್ ಕ್ರಿಕೆಟ್ ಕ್ಲಬ್ ನಿರ್ದೇಶಕ ರಘುವೀರ್ ನಾಯಕ್ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ ಮೇ ತಿಂಗಳು ಸಂಪೂರ್ಣ ತರಬೇತಿ ನೀಡಲಾಗುವುದು ಹಾಗೂ ಶಿಬಿರದ ಕುರಿತು ವಿವರಿಸಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಅಕಡೆಮಿಯ ಕಾರ್ಯದರ್ಶಿ ನಂದನ್ ಬೋರ್ಕರ್,ಪ್ರಶಾಂತ್ ಡಿ.ಶೇಟ,
ದರ್ಶನ್ ಡಿ ರೇವಣಕರ್, ನಾಗೇಶ ಶಾಮೈನ, ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *